ಮಲ್ಟಿಪ್ಲೆಕ್ಸ್ 
ಸಿನಿಮಾ ಸುದ್ದಿ

ಮಲ್ಟಿಪ್ಲೆಕ್ಸ್‌ ಟಿಕೆಟ್ ದರ ಮಿತಿ ರು. 200: ಜಾರಿಗೆ ಸರ್ಕಾರದ ಮೀನಾಮೇಷ!

ರಾಜ್ಯ ಹಣಕಾಸು ಬಜೆಟ್ 2017-18ರ ಘೋಷಣೆಯಂತೆ ರಾಜ್ಯದ ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳಲ್ಲಿ ಕನ್ನಡ ಚಿತ್ರಗಳ 200 ರು. ಟಿಕೆಟ್ ದರ ಕ್ರಮ...

ಬೆಂಗಳೂರು: ರಾಜ್ಯ ಹಣಕಾಸು ಬಜೆಟ್ 2017-18ರ ಘೋಷಣೆಯಂತೆ ರಾಜ್ಯದ ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳಲ್ಲಿ ಕನ್ನಡ ಚಿತ್ರಗಳ 200 ರು. ಟಿಕೆಟ್ ದರ ಕ್ರಮ ಏಪ್ರಿಲ್ 1ರಿಂದ ಜಾರಿಯಾಗಬೇಕಿದ್ದು 6 ದಿನ ಕಳೆದರೂ ಇನ್ನು ಜಾರಿಗೆ ಬಂದಿಲ್ಲ. 
ಏಪ್ರಿಲ್ 1ರ ನಂತರ ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳಲ್ಲಿ ಟಿಕೆಟ್ ಖರೀದಿಸಿದ ಪ್ರೇಕ್ಷಕರಿಗೆ ಶಾಕ್ ಎದುರಾಗಿದೆ. ಬಜೆಟ್ ನಂತೆ ಏಪ್ರಿಲ್ 1ರಿಂದಲೇ ಗರಿಷ್ಠ 200 ರುಪಾಯಿ ದರ ಬದಲಿಗೆ ಹೆಚ್ಚಿನ ಹಣ ನೀಡಿ ಚಿತ್ರಗಳನ್ನು ವೀಕ್ಷಿಸಿದ್ದಾರೆ. ಈ ಬಗ್ಗೆ ಸಿಬ್ಬಂದಿಯನ್ನು ಕೇಳಿದರೆ ಸರ್ಕಾರದಿಂದ ನಮಗೆ ಅಧಿಕೃತ ಆದೇಶ ಬಂದಿಲ್ಲ ಹೀಗಾಗಿ ದರ ತಗ್ಗಿಸಿಲ್ಲ ಎಂಬ ಉತ್ತರ ನೀಡುತ್ತಿದ್ದಾರೆ. 
ಇನ್ನು ಬಜೆಟ್ ನಲ್ಲಿ ಘೋಷಿಸಿದಂತೆ ರಾಜ್ಯ ಸರ್ಕಾರ ಇದನ್ನು ಜಾರಿಗೆ ತರುವಲ್ಲಿ ವಿಳಂಬ ಮಾಡುತ್ತಿದೆ. ಕಾರಣ ಸದ್ಯ ನಂಜನಗೂಡು ಮತ್ತು ಗುಂಡ್ಲುಪೇಟೆಯಲ್ಲಿ ಉಪ ಚುನಾವಣೆ ನಡೆಯುತ್ತಿದ್ದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಚುನಾವಣಾ ಪ್ರಚಾರದಲ್ಲಿ ತೊಡಿಗಿರುವುದರಿಂದ ಕೆಲ ಕಾಯ್ದಿಗಳ ಜಾರಿ ತಡವಾಗುತ್ತಿದೆ ಎಂದು ಹೇಳಲಾಗಿದೆ. 
ಬಜೆಟ್ ನಲ್ಲಿ ನಿಗದಿ ಮತ್ತು ಕಡ್ಡಾಯವಾಗಿ ಕನ್ನಡ ಚಿತ್ರಗಳನ್ನು ಪ್ರದರ್ಶಿಸಲೇಬೇಕು ಎಂದು ಪ್ರಸ್ತಾವ ಮಂಡಿಸಿದರೆ ಸಾಲದು, ಅದಕ್ಕಾಗಿ ಸರ್ಕಾರ ವಿಶೇಷ ಕಾಯ್ದಿಯನ್ನು ಜಾರಿಗೊಳಿಸಬೇಕು. ಇಲ್ಲವೇ ಈಗಿರುವ ಕಾನೂನಿಗೆ ತಿದ್ದುಪಡಿಯನ್ನಾದರೂ ಮಾಡಬೇಕಿದೆ. 
ಬಜೆಟ್ ನಲ್ಲಿ ಘೋಷಿಸಿದ್ತಂತೆ ಏಪ್ರಿಲ್ 1ರಿಂದ ರಾಜ್ಯಾದ್ಯಂತ ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳ ಟಿಕೆಟ್ ದರ ನಿಗದಿ ಕುರಿತು ಇನ್ನೂ ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದಿಲ್ಲ. ಅದಕ್ಕೆ ಸ್ವಲ್ಪ ಕಾಲಾವಕಾಸ ಹಿಡಿಯುತ್ತದೆ. ಬಹುಶಃ 15-20 ದಿನಗಳಲ್ಲಿ ಆದೇಶ ಹೊರಬೀಳಬಹುದು.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT