ರಜನಿಕಾಂತ್ 
ಸಿನಿಮಾ ಸುದ್ದಿ

ಚಿತ್ರ ವಿಮರ್ಶೆಯಲ್ಲಿ ನೋವುಂಟಾಗುವಂತಹ ಅಭಿಪ್ರಾಯ ಹೇಳಬೇಡಿ: ರಜನಿ ಕಾಂತ್

ಯಾರಿಗೂ ನೋವಾಗದಂತೆ ಸಿನಿಮಾ ವಿಮರ್ಶೆ ಮಾಡಿ ಎಂದು ಸೂಪರ್ ಸ್ಟಾರ್ ರಜನಿ ಕಾಂತ್ ಮನವಿ ಮಾಡಿದ್ದಾರೆ...

ಚೆನ್ನೈ: ಯಾರಿಗೂ ನೋವಾಗದಂತೆ ಸಿನಿಮಾ ವಿಮರ್ಶೆ ಮಾಡಿ ಎಂದು ಸೂಪರ್ ಸ್ಟಾರ್ ರಜನೀಕಾಂತ್ ಮನವಿ ಮಾಡಿದ್ದಾರೆ.
ಶಿವಾಜಿ ಗಣೇಶನ್ ಅವರ ನಿವಾಸದಲ್ಲಿ ನೆರುಪ್ಪು ಡಾ ಸಿನಿಮಾ ಆಡಿಯೋ ಬಿಡುಗಡೆ ವೇಳೆ ಮಾತನಾಡಿದ ರಜನಿಕಾಂತ್, ಸಿನಿಮಾ ಮಾಡುವುದು ನಮ್ಮ ಜವಾಬ್ದಾರಿ, ವಿಮರ್ಶೆ ಮಾಡುವುದು ನಿಮ್ಮ ಕರ್ತವ್ಯ. ಆದರೆ ನೀವು ಸಿನಿಮಾ ವಿಮರ್ಶೆ ಮಾಡುವಾಗ ಹೇಗೆ ಸಂಹವನ ಮಾಡುತ್ತೀರಾ ಎಂಬುದು ಮುಖ್ಯವಾಗಿದೆ. ಯಾರಿಗೂ ನೋವಾಗುವಂತ ಅಭಿಪ್ರಾಯಗಳನ್ನು ನೀಡಬೇಡಿ. ಸಿನಿಮಾ ಬಗ್ಗೆ ನಿಮ್ಮ ಯೋಚನೆಗಳನ್ನು ಸರಿಯಾದ ಪದಗಳಿಂದ ವಿಮರ್ಶಿಸಿ ಎಂದು ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.
ಇದೇ ವೇಳೆ ಮಾತನಾಡಿದ ನಟ ವಿಶಾಲ್ ವಿಮರ್ಶೆ ಮಾಡುವುದು ನಿಮ್ಮ ಅಭಿವ್ಯಕ್ತಿ ಸ್ವಾತಂತ್ರ್ಯ ಎಂಬುದು ನಮಗೆ ತಿಳಿದಿದೆ, ಪ್ರತಿಯೊಬ್ಬರಿಗೂ ಅವರ ಅಭಿಪ್ರಾಯ ಹೇಳಲು ಅವಕಾಶವಿದೆ, ಆದರೆ ಸಿನಿಮಾಗಳಿಗೆ ಉಸಿರಾಡಲು ಅವಕಾಶ ನೀಡಿ, ಸಿನಿಮಾ ಬಿಡುಗಡೆಯಾದ 4 ನೇ ದಿನ ಚಿತ್ರ ವಿಮರ್ಶೆ ಮಾಡಿ ಎಂದು ವಿಶಾಲ್ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT