ಅರವಿಂದ್ ಅಯ್ಯರ್ 
ಸಿನಿಮಾ ಸುದ್ದಿ

ಕಾರ್ತಿಕ್ ಸರಗೂರ್ ನಿರ್ದೇಶನದಲ್ಲಿ ನಾಯಕನಟನಾಗಿ ಅರವಿಂದ್ ಅಯ್ಯರ್!

ರಕ್ಷಿತ್ ಶೆಟ್ಟಿ ಅಭಿನಯದ 'ಕಿರಿಕ್ ಪಾರ್ಟಿ' ಸಿನೆಮಾದಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡ ಅರವಿಂದ್ ಅಯ್ಯರ್ ಈಗ ಕಾರ್ತಿಕ್ ಸರಗೂರ್ ನಿರ್ದೇಶನದ ಚಿತ್ರದಲ್ಲಿ ನಾಯಕನಟನಾಗಿ ಕಾಣಿಸಿಕೊಳ್ಳಲಿದ್ದಾರೆ.

ಬೆಂಗಳೂರು: ರಕ್ಷಿತ್ ಶೆಟ್ಟಿ ಅಭಿನಯದ 'ಕಿರಿಕ್ ಪಾರ್ಟಿ' ಸಿನೆಮಾದಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡ ಅರವಿಂದ್ ಅಯ್ಯರ್ ಈಗ ಕಾರ್ತಿಕ್ ಸರಗೂರ್ ನಿರ್ದೇಶನದ ಚಿತ್ರದಲ್ಲಿ ನಾಯಕನಟನಾಗಿ ಕಾಣಿಸಿಕೊಳ್ಳಲಿದ್ದಾರೆ. 
ಈ ಸಿನೆಮಾದ ಮುಖ್ಯ ವಸ್ತು ಆಹಾರ ಮತ್ತು ಅದರ ಜೊತೆಗಿನ ಜನರ ಸಂಪರ್ಕ ಆಗಿದ್ದು ಇದು ನಟನನ್ನು ಇನ್ನಷ್ಟು ಉತ್ಸುಕಗೊಳಿಸಿದೆ. ಈ ವಸ್ತು ಕನ್ನಡ ಚಿತ್ರರಂಗದಲ್ಲಿ ಹೆಚ್ಚಾಗಿ ಬಳಕೆಯಾಗಿಲ್ಲ ಎನ್ನುತ್ತಾರೆ ಅರವಿಂದ್. 
ಆಟೋಮೊಬೈಲ್ ಎಂಜಿನಿಯರಿಂಗ್ ನಲ್ಲಿ ಮಾಸ್ಟರ್ಸ್ ಡಿಗ್ರಿ ಪಡೆದು ಲಂಡನ್ ನಲ್ಲಿ ಐದು ವರ್ಷಗಳ ಕಾಲ ಉದ್ಯೋಗದಲ್ಲಿದ್ದ ಅರವಿಂದ್ ಕುಟುಂಬದ ತುರ್ತಿನ ಸಮಯದಲ್ಲಿ ಭಾರತಕ್ಕೆ ಹಿಂದಿರುಗಿದವರು. "ಇಲ್ಲೇ ನೆಲೆಸಲು ಯೋಜಿಸಿದ್ದೆ ಆದರೆ ಇಲ್ಲಿನ ಉದ್ಯೋಗ ಸಂಸ್ಕೃತಿಗೆ ಹೊಂದಾಣಿಕೆ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ. ನಟನೆ ಯಾವಾಗಲೂ ನನ್ನ ಮನಸ್ಸಿನಲ್ಲಿ ಇತ್ತು. ಆದುದರಿಂದ ಅದರಲ್ಲೇ ತೊಡಗಿಸಿಕೊಳ್ಳಲು ನಿಶ್ಚಯಿಸಿದೆ. ಲಂಡನ್ನಿನ ವಿಥಿಯೇಟರ್ ನಲ್ಲಿ ನಟನೆಯ ಪಾಠಗಳನ್ನು ತೆಗೆದುಕೊಡಿದ್ದೇನೆ" ಎನ್ನುತ್ತಾರೆ ಅರವಿಂದ್. 
೨೦೧೨ರಲ್ಲಿ ನಟನೆಗೆ ಪಾದಾರ್ಪಣೆ ಮಾಡಿದ್ದ ಅರವಿಂದ್ ಅಯ್ಯರ್ ಈಗ ನಾಲ್ಕು ವರ್ಷಗಳ ನಂತರ ನಾಯಕನಟರಾಗಿಟ್ಟಿದ್ದಾರೆ. ಹೇಮಂತ್ ರಾವ್ ಅವರ 'ಗೋಧಿ ಬಣ್ಣ ಸಾಧಾರಣ ಮೈಕಟ್ಟು' ಸಿನೆಮಾದ ಆಡಿಷನ್ ನಲ್ಲಿ ಭಾಗಿಯಾಗಿದ್ದರು, ಆಯ್ಕೆಯಾಗಿರಲಿಲ್ಲ. "ಈಗ ನನ್ನ ಕಾಯುವಿಕೆ ಫಲ ನೀಡಿದೆ. ಸದ್ಯಕ್ಕೆ ಪುಷ್ಕರ್ ಫಿಲಂಸ್ ಮತ್ತು ಹೇಮಂತ್ ರಾವ್ ಸಹ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದೇನೆ" ಎಂದಿದ್ದಾರೆ ಅರವಿಂದ್. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT