ನಟ ಕಲಾಭವನ್ ಮಣಿ 
ಸಿನಿಮಾ ಸುದ್ದಿ

ನಟ ಕಲಾಭವನ್ ಮಣಿ ನಿಗೂಢ ಸಾವು ಪ್ರಕರಣ: ಸಿಬಿಐ ತನಿಖೆಗೆ ಕೇರಳ 'ಹೈ' ಆದೇಶ

ನಟ ಕಲಾಭವನ್ ಮಣಿ ನಿಗೂಢ ಸಾವು ಪ್ರಕರಣವನ್ನು ಸಿಬಿಐ ತನಿಖೆ ನಡೆಸುವಂತೆ ಕೇರಳ ಹೈ ಕೋರ್ಟ್ ಬುಧವಾರ ಆದೇಶಿಸಿದೆ...

ಕೊಚ್ಚಿ: ನಟ ಕಲಾಭವನ್ ಮಣಿ ನಿಗೂಢ ಸಾವು ಪ್ರಕರಣವನ್ನು ಸಿಬಿಐ ತನಿಖೆ ನಡೆಸುವಂತೆ ಕೇರಳ ಹೈ ಕೋರ್ಟ್ ಬುಧವಾರ ಆದೇಶಿಸಿದೆ. 
ಕಲಾಭವನ್ ಮಣಿ ಅನುಮಾನಾಸ್ಪದ ಸಾವು ಪ್ರಕರಣ ಸಂಬಂಧ ಇಂದು ವಿಚಾರಣೆ ನಡೆಸಿರುವ ಏಕಸದಸ್ಯ ಪೀಠ, ತಿಂಗಳೊಳಗಾಗಿ ಸಿಬಿಐ ತನಿಖೆ ಕೈಗೊಳ್ಳುವಂತೆ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ. 
ಕಲಾಭವನ್ ಅವರು ಮಲಯಾಳಂನ ಪ್ರತಿಭಾವಂತ ಕಲಾವಿದರಾಗಿದ್ದು, ತಮಿಳು, ಕನ್ನಡ ಸೇರಿದಂತೆ ಹಲವು ಚಿತ್ರಗಳಲ್ಲಿ ನಟನೆ ಮಾಡಿದ್ದಾರೆ. 2016ರ ಮಾರ್ಚ್ 6 ರಂದು ಕಲಾಭವನ್ ಮಣಿಯವರು ನಿಗೂಢವಾಗಿ ಸಾವನ್ನಪ್ಪಿದ್ದರು. ಪ್ರಕರಣ ಸಂಬಂಧ ಸಾಕಷ್ಟು ಅನುಮಾನಗಳು ಮೂಡತೊಡಗಿದ್ದವು. 
ಪತಿಯ ಸಾವಿನ ಹಿಂದೆ ಸಾಕಷ್ಟು ನಿಗೂಢತೆಗಳಿದ್ದು, ಪ್ರಕರಣವನ್ನು ಸಿಬಿಐ ತನಿಖೆಗೆ ಆದೇಶಿಸಬೇಕೆಂದು ಕೋರಿ ಕಲಾಭವನ್ ಮಣಿಯವರ ಪತ್ನಿ ಹಾಗೂ ಸಹೋದರ ಆರ್'ಎಲ್'ವಿ ರಾಮಕೃಷ್ಣನ್ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದರು. 
ವಿಚಾರಣೆ ವೇಳೆ, ಈಗಾಗಲೇ ಸಾಕಷ್ಟು ಪ್ರಕರಣಗಳ ತನಿಖೆ ಪ್ರಗತಿಯಲ್ಲಿದ್ದು, ಕಲಾಭವನ್ ಮಣಿಯವರ ಪ್ರಕರಣವನ್ನು ತನಿಖೆ ನಡೆಸಲು ಸಾಧ್ಯವಾಗುವುದಿಲ್ಲ. ರಾಜ್ಯ ಪೊಲೀಸರು ಸರಿಯಾದ ದಿಕ್ಕಿನಲ್ಲೇ ತನಿಖೆ ನಡೆಸುತ್ತಿದ್ದು. ಪ್ರಕರಣವನ್ನು ಸಿಬಿಐ ತನಿಖೆ ನಡೆಸುವ ಅಗತ್ಯವಿಲ್ಲ ಎಂದು ಎಂದು ಸಿಬಿಐ ಅಧಿಕಾರಿಗಳು ನ್ಯಾಯಾಲಯಕ್ಕೆ ತಿಳಿಸಿದರು. ಸಿಬಿಐ ಅಧಿಕಾರಿಗಳ ಈ ಮನವಿಯನ್ನು ತಿರಸ್ಕರಿಸಿದ ನ್ಯಾಯಾಲಯವು, ಪ್ರಕರಣವನ್ನು ತನಿಖೆ ನಡೆಸುವಂತೆ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ. 
ಕೆಲ ದಿನಗಳ ಹಿಂದಷ್ಟೇ ಕಲಾಭವನ್ ಮಣಿಯವರ ಮರಣೋತ್ತರ ಪರೀಕ್ಷಾ ವರದಿಯೊಂದು ಬಹಿರಂಗಗೊಂಡಿತ್ತು. ಕಲಾಭವನ್ ಅವರು ಅನಾರೋಗ್ಯದಿಂದಾಗಿ ಮೃತಪಟ್ಟಿಲ್ಲ. ಅವರ ದೇಹದಲ್ಲಿ ಅಪಾಯಕಾರಿ ಕೀಟನಾಶಕ ಇರುವುದಾಗಿ ತಿಳಿದುಬಂದಿತ್ತು. 
ಮಣಿ ಅವರ ಅಂಗಾಂಗಳ ಮಾದರಿಯನ್ನು ಕೇರಳದ ಕಕನಾಡುವಿನಲ್ಲಿರುವ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಪರೀಕ್ಷೆ ನಡೆಸಿದ ತಜ್ಞರು ಮಣಿಯವರ ದೇಹದಲ್ಲಿ ಅತ್ಯಂತ ಅಪಾಯಕಾರಿ ವಿಷ ಪತ್ತೆಯಾಗಿದೆ ಎಂದು ಹೇಳಿದ್ದರು. ಕ್ರೋರ್ ಪೈರಿಪೋಸ್ ಎಂಬ ಅತಿ ಅಪಾಯಕಾರಿ ಕೀಟನಾಶಕ ಮಣಿಯವರ ದೇಹದ ಅಂಗಗಳಲ್ಲಿ ಕಂಡುಬಂದಿದ್ದು, ಇದೇ ಕಾರಣಕ್ಕೆ ಅವರು ಮೃತಪಟ್ಟಿದ್ದರೆಂದು ವರದಿಗಳು ತಿಳಿಸಿದ್ದವು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT