ಸತ್ಯರಾಜ್ 
ಸಿನಿಮಾ ಸುದ್ದಿ

ಕನ್ನಡಿಗರ ವಿರುದ್ಧ ಹೇಳಿಕೆ: ಕೊನೆಗೂ ವಿಷಾದ ವ್ಯಕ್ತಪಡಿಸಿದ 'ಕಟ್ಟಪ್ಪ' ಸತ್ಯರಾಜ್

9 ವರ್ಷಗಳ ಹಿಂದೆ ಕಾವೇರಿ ವಿವಾದದ ಸಂದರ್ಭದಲ್ಲಿ ಕನ್ನಡಿಗರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದ ತಮಿಳು ನಟ ಸತ್ಯರಾಜ್ ಕೊನೆಗೂ ಕನ್ನಡಿಗರ...

ಬೆಂಗಳೂರು: 9 ವರ್ಷಗಳ ಹಿಂದೆ ಕಾವೇರಿ ವಿವಾದದ ಸಂದರ್ಭದಲ್ಲಿ ಕನ್ನಡಿಗರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದ ತಮಿಳು ನಟ ಸತ್ಯರಾಜ್ ಕೊನೆಗೂ ಕನ್ನಡಿಗರ ಹೋರಾಟಕ್ಕೆ ತಲೆಬಾಗಿ ಬಹಿರಂಗವಾಗಿ ವಿಷಾದ ವ್ಯಕ್ತಪಡಿಸಿದ್ದಾರೆ. 
ಭಾರತದ ಬಹುನಿರೀಕ್ಷಿತ ಬಾಹುಬಲಿ 2 ಚಿತ್ರ ಕರ್ನಾಟದಲ್ಲಿ ಬಿಡುಗಡೆಗೆ ಕನ್ನಡಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದವು. ಕನ್ನಡಿಗರನ್ನು ತುಚ್ಛವಾಗಿ ಕಂಡು ಅವಹೇಳನಕಾರಿಯಾಗಿ ಮಾತನಾಡಿದ್ದ ಸತ್ಯರಾಜ್ ಕನ್ನಡಿಗರ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಬಾಹುಬಲಿ 2 ಚಿತ್ರ ಕರ್ನಾಟಕದಲ್ಲಿ ಬಿಡುಗಡೆಯಾಗಲು ಬಿಡುವುದಿಲ್ಲ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಸೇರಿದಂತೆ ಕನ್ನಡ ಪರ ಸಂಘಟನೆಗಳು ಒಗ್ಗಟ್ಟು ಪ್ರದರ್ಶಿಸಿದ್ದವು. ಇದೀಗ ಕನ್ನಡಿಗರ ಹೋರಾಟಕ್ಕೆ ಮಣಿದಿರುವ ಬಾಹುಬಲಿ ಚಿತ್ರದ ಪಾತ್ರಧಾರಿ ಕಟ್ಟಪ್ಪ ಬಹಿರಂಗವಾಗಿ ವಿಷಾದ ವ್ಯಕ್ತಪಡಿಸಿದ್ದಾರೆ.
ಕಾವೇರಿ ವಿವಾದದ ಸಮಯದಲ್ಲಿ ಅಂದರೆ 9 ವರ್ಷಗಳ ಹಿಂದೆ ಈ ರೀತಿಯ ಹೇಳಿಕೆ ನೀಡಿದ್ದೆ. ಇದರಿಂದ ಕನ್ನಡಿಗರಿಗೆ ನೋವುಂಟು ಮಾಡಿದಕ್ಕೆ ಕ್ಷಮೆ ಇರಲಿ. ನಾನೆಂದಿಗೂ ಕನ್ನಡಿಗರ ವಿರೋಧಿಯಲ್ಲ. ನನ್ನಲ್ಲಿ ಕ್ಷಮೆ ಇರಲಿ. ಬಾಹುಬಲಿ 2 ಚಿತ್ರದಲ್ಲಿ ನಾನೊಬ್ಬ ಪಾತ್ರಧಾರಿಯಷ್ಟೇ ಇದರಿಂದ ಚಿತ್ರದ ಬಿಡುಗಡೆಗೆ ತೊಂದರೆಯಾಗುವುದು ಬೇಡ. ಚಿತ್ರದ ಬಿಡುಗಡೆಗೆ ಕನ್ನಡಿಗರು ಅವಕಾಶ ಮಾಡಿಕೊಡಬೇಕು ಎಂದು ತಾನು ಮಾತನಾಡಿರುವ ವಿಡಿಯೋವನ್ನು ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT