ಸಿಎಂ ಸಿದ್ದರಾಮಯ್ಯ ಅವರಿಂದ ರಾಜ್ಯ ಚಲನ ಚಿತ್ರ ಪ್ರಶಸ್ತಿ ಪ್ರಧಾನ 
ಸಿನಿಮಾ ಸುದ್ದಿ

ಮಲ್ಟಿಪ್ಲೆಕ್ಸ್ ಗಳಲ್ಲಿ ಟಿಕೆಟ್ ದರ ನಿಗದಿ ಶೀಘ್ರವೇ ಜಾರಿ, ಕನ್ನಡ ಚಿತ್ರ ಪ್ರದರ್ಶಕರಿಗೂ ಪ್ರಶಸ್ತಿ: ಸಿಎಂ

ಮಲ್ಟಿಪ್ಲೆಕ್ಸ್ ಗಳಲ್ಲಿ ಚಿತ್ರಗಳಿಗೆ ಗರಿಷ್ಠ ಟಿಕೆಟ್‌ ದರ ರು. 200 ಇರಬೇಕು ಎಂದು ಪ್ರಸಕ್ತ ವರ್ಷದ ಬಜೆಟ್‌ನಲ್ಲಿ ಘೋಷಿಸಿದ್ದೇನೆ. ಈ ಕುರಿತು ಒಂದೆರಡು ದಿನಗಳಲ್ಲಿ ಆದೇಶ ...

ಬೆಂಗಳೂರು: ಮಲ್ಟಿಪ್ಲೆಕ್ಸ್ ಗಳಲ್ಲಿ ಚಿತ್ರಗಳಿಗೆ ಗರಿಷ್ಠ ಟಿಕೆಟ್‌ ದರ ರು. 200 ಇರಬೇಕು ಎಂದು ಪ್ರಸಕ್ತ ವರ್ಷದ ಬಜೆಟ್‌ನಲ್ಲಿ ಘೋಷಿಸಿದ್ದೇನೆ. ಈ ಕುರಿತು ಒಂದೆರಡು ದಿನಗಳಲ್ಲಿ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ. 
ನಗರದ ಅಂಬೇಡ್ಕರ್‌‌ ಭವನದಲ್ಲಿ ನಡೆದ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು ಕನ್ನಡ ಚಿತ್ರಗಳು ಮಲ್ಟಿಪ್ಲೆಕ್ಸ್‌ಗಳಲ್ಲಿ ಸಂಜೆ 4.30 ಮತ್ತು 7.30ಕ್ಕೆ ಪ್ರದರ್ಶನಗೊಳ್ಳಬೇಕು, ಮುಂದಿನ ವರ್ಷದಿಂದ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಏಕ ಕಾಲದಲ್ಲಿ ಡಾ.ರಾಜಕುಮಾರ್ ಅವರ ಜನ್ಮ ದಿನಾಚರಣೆಯನ್ನು ಆಚರಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
ರಾಜ್ಯದಲ್ಲಿ ಹೆಚ್ಚು ಕನ್ನಡ ಚಿತ್ರಗಳನ್ನು ಪ್ರದರ್ಶಿಸುವ ಪ್ರದರ್ಶಕರಿಗೂ ಮುಂದಿನ ವರ್ಷದಿಂದ ಪ್ರಶಸ್ತಿ ನೀಡಲಾಗುವುದು ಎಂದು ಹೇಳಿದ ಅವರು, ದೆಹಲಿಯ ಕನ್ನಡ ಸಂಘದ ಆವರಣದಲ್ಲಿ ಡಾ.ರಾಜಕುಮಾರ್ ಅವರ ಪ್ರತಿಮೆ ಸ್ಥಾಪನೆ ಮಾಡಲಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಜೀವಿತಾವಧಿ ಸಾಧನೆಗಾಗಿ ಹಿರಿಯರಾದ ಆದವಾನಿ ಲಕ್ಷ್ಮೀದೇವಿ ಅವರಿಗೆ ಡಾ.ರಾಜಕುಮಾರ್ ಪ್ರಶಸ್ತಿ, ಕೆ.ವಿ. ರಾಜು ಅವರಿಗೆ ಪುಟ್ಟಣ್ಣ ಕಣಗಾಲ್ ಮತ್ತು ಕೆ. ಚಿನ್ನಪ್ಪ ಅವರಿಗೆ ಡಾ.ವಿಷ್ಣುವರ್ಧನ್ ಪ್ರಶಸ್ತಿ ಪ್ರದಾನ ಮಾಡಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT