ಚೇತನ್ ಕುಮಾರ್ ನಿರ್ದೇಶನದ ಬಹದ್ದೂರ್ ಚಿತ್ರ 2014ರಲ್ಲಿ ಬಿಡುಗಡೆಯಾಗಿ ಬಾಕ್ಸ್ ಆಫೀಸ್ ನಲ್ಲಿ ಉತ್ತಮ ಗಳಿಕೆ ಕಂಡಿತ್ತು. ಇದೀಗ ಈ ಚಿತ್ರ ತೆಲುಗಿನಲ್ಲಿ ರಿಮೇಕ್ ಆಗುತ್ತಿದ್ದು ಚಿತ್ರದಲ್ಲಿ ರಾಮ್ ಚರಣ್ ತೇಜಾ ಅಭಿನಯಿಸುತ್ತಿದ್ದು ಚಿತ್ರೀಕರಣಕ್ಕೆ ವೇದಿಕೆ ಸಿದ್ಧಗೊಂಡಿದೆ. ಇನ್ನು ಚಿತ್ರಕ್ಕೆ ಅಲ್ಲು ಅರ್ಜುನ್ ಹಿನ್ನಲೆ ಧ್ವನಿ ನೀಡಲಿದ್ದಾರೆ. ಕನ್ನಡದ ಬಹದ್ದೂರ್ ಚಿತ್ರಕ್ಕೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಿನ್ನಲೆ ಧ್ವನಿ ನೀಡಿದ್ದರು.
ಬಹದ್ದೂರ್ ಚಿತ್ರದಲ್ಲಿ ಧೃವ ಸರ್ಜಾ ಭರ್ಜರಿಯಾಗಿ ಕಾಣಿಸಿಕೊಂಡಿದ್ದರು. ಚಿತ್ರವನ್ನು ಆರ್ಎಸ್ ಪ್ರೋಡಕ್ಷನ್ ನಿರ್ಮಿಸಿತ್ತು. ಅಂದು ಚಿತ್ರ ತೆರೆಕಂಡಾಗ ತೆಲುಗಿನ ಸ್ಟಾರ್ ನಿರ್ಮಾಪಕ ಅಲ್ಲು ಅರವಿಂದ್ ಅವರು ಚಿತ್ರವನ್ನು ನೋಡಿ ಶಹಬ್ಬಾಸ್ ಅಂದಿದ್ದು ಅಲ್ಲದೆ ಚಿತ್ರದ ರಿಮೇಕ್ ಹಕ್ಕನ್ನು ಪಡೆದುಕೊಂಡಿದ್ದರು. ಇದೀಗ ಎರಡು ವರ್ಷಗಳ ಬಳಿಕ ಬಹದ್ದೂರ್ ಚಿತ್ರ ನಿರ್ಮಾಣಕ್ಕೆ ವೇದಿಕೆ ಸಿದ್ಧವಾಗಿದೆ.
ಸದ್ಯ ರಾಮ್ ಚರಣ್ ತೇಜಾ ಸುಕುಮಾರ್ ನಿರ್ದೇಶನದ ಚಿತ್ರದಲ್ಲಿ ಅಭಿನಯಿಸುತ್ತಿದ್ದು ಆ ಚಿತ್ರದ ಚಿತ್ರೀಕರಣ ಮುಗಿದ ನಂತರ ರಾಮ್ ಚರಣ್ ತೇಜಾ ಬಹದ್ದೂರ್ ಆಗಲಿದ್ದಾರೆ.
ಬಹದ್ದೂರ್ ಚಿತ್ರ ತೆಲುಗಿಗೆ ರಿಮೇಕ್ ಆಗುತ್ತಿರುವುದಕ್ಕೆ ಹರ್ಷ ವ್ಯಕ್ತಪಡಿಸಿರುವ ನಿರ್ದೇಶಕ ಚೇತನ್ ಕುಮಾರ್ ನಿಜಕ್ಕೂ ಇದು ಖುಷಿಯ ವಿಚಾರ. ನನ್ನ ಮೊದಲ ಚಿತ್ರ ತೆಲುಗಿಗೆ ರಿಮೇಕ್ ಆಗುತ್ತಿದೆ. ಬಹದ್ದೂರ್ ಚಿತ್ರ ಬಿಡುಗಡೆಯಾದ ಸಂದರ್ಭದಲ್ಲಿ ಅಲ್ಲು ಅರವಿಂದ್ ಅವರು ಓರಿಯನ್ ಮಾಲ್ ನಲ್ಲಿ ಚಿತ್ರವನ್ನು ವಿಕ್ಷೀಸಿದ್ದರು. ಅದಕ್ಕೆ ನಮ್ಮ ಪ್ರಯತ್ನವನ್ನು ಪ್ರಶಂಸಿಸಿದ್ದ ಅವರು ಚಿತ್ರದ ರಿಮೇಕ್ ಹಕ್ಕನ್ನು ಪಡೆದುಕೊಂಡಿದ್ದಾರೆ ಎಂದು ನಿರ್ಮಾಪಕ ಶ್ರೀಕಾಂತ್ ಅವರು ಹೇಳಿದ್ದರು ಎಂದು ಚೇತನ್ ಹೇಳಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos