'ಮಾಸಿ ಗುಡಿ' ನಿರ್ದೇಶಕ ನಾಗಶೇಖರ್ ಮತ್ತು ಛಾಯಾಗ್ರಾಹಕ ಸತ್ಯ ಹೆಗಡೆ 
ಸಿನಿಮಾ ಸುದ್ದಿ

ನಮ್ಮ ನೆಲದಲ್ಲೇ ಛಾಯಾಗ್ರಹಣ ಮಾಡಲಿಷ್ಟ; ಇಲ್ಲೇ ಹೆಚ್ಚು ಸೌಂದರ್ಯ ಇದೆ: ಸತ್ಯ ಹೆಗಡೆ

ಸಿನೆಮ್ಯಾಟೋಗ್ರಾಫರ್ ಸತ್ಯ ಹೆಗಡೆ ತಮ್ಮ ಛಾಯಾಗ್ರಹಣದ ಮೂಲಕ ಇಡೀ ಕರ್ನಾಟಕವನ್ನು ಸೆರೆಹಿಡಿಯಲು ಪ್ರಯತ್ನಿಸಿದ್ದಾರೆ. ತಮ್ಮ ೧೫ ವರ್ಷಗಳ ಅನುಭವದಲ್ಲಿ ೨೫ಕ್ಕೂ ಹೆಚ್ಚು ಸಿನೆಮಾಗಳ

ಬೆಂಗಳೂರು: ಸಿನೆಮ್ಯಾಟೋಗ್ರಾಫರ್ ಸತ್ಯ ಹೆಗಡೆ ತಮ್ಮ ಛಾಯಾಗ್ರಹಣದ ಮೂಲಕ ಇಡೀ ಕರ್ನಾಟಕವನ್ನು ಸೆರೆಹಿಡಿಯಲು ಪ್ರಯತ್ನಿಸಿದ್ದಾರೆ. ತಮ್ಮ ೧೫ ವರ್ಷಗಳ ಅನುಭವದಲ್ಲಿ ೨೫ಕ್ಕೂ ಹೆಚ್ಚು ಸಿನೆಮಾಗಳ ಮೇಲೆ ಕೆಲಸ ಮಾಡಿರುವ ಸತ್ಯ ಹಲವು ಪ್ರಶಸ್ತಿಗಳಿಗೂ ಭಾಜನರಾಗಿದ್ದಾರೆ. ಈಗ ಅವರ ಛಾಯಾಗ್ರಹಣದ, ನಾಗಶೇಖರ್ ನಿರ್ದೇಶನದ 'ಮಾಸ್ತಿ ಗುಡಿ' ಬಿಡುಗಡೆಗೆ ಸಿದ್ಧವಾಗಿದೆ. 
'ಸಂಜು ವೆಡ್ಸ್ ಗೀತಾ' ಮತ್ತು 'ಮೈನಾ'ದಂತಹ ಹಿಟ್ ಚಿತ್ರಗಳಿಗೆ ಛಾಯಾಗ್ರಹಣ ಮಾಡಿರುವ ಸತ್ಯ, ಒಳ್ಳೆಯ ಕಥೆಗೆ ಒಳ್ಳೆಯ ಹಿನ್ನಲೆ ದೃಶ್ಯಗಳು ಬೇಕು. ಅದು ಇಲ್ಲದೆ ಹೋದರೆ ಸ್ಕ್ರಿಪ್ಟ್ ಎಷ್ಟೇ  ಭದ್ರವಾಗಿದ್ದರೂ ಬಿದ್ದುಹೋಗುತ್ತದೆ ಎನ್ನುತ್ತಾರೆ. "'ಸಂಜು ವೆಡ್ಸ್ ಗೀತಾ'ದಲ್ಲಿ ತೋರಿಸಲಾದ ಬೀದರ್ ನ ಸುಂದರ ತಾಣಗಳಾಗಲೀ ಅಥವಾ ಮೈನಾದಲ್ಲಿ ತೋರಿಸಲಾದ ದೂಧ್ ಸಾಗರ್ ಜಲಪಾತವಾಗಲಿ ಸಿನೆಮಾಗೆ ಸಹಕರಿಸಿವೆ. ದೂಧ್ ಸಾಗರ್ ಜಲಪಾತವನ್ನು ಮೈನಾ ಜಲಪಾತ ಎಂದೇ ಜನ ಈಗ ಕರೆಯುತ್ತಾರೆ. ಕನ್ನಡ ಚಿತ್ರರಂಗದ ಮೂಲಕ ರಾಜ್ಯದ ಅತ್ಯುತ್ತಮ ಪಾತ್ರಗಳನ್ನೂ ಸೆರೆಹಿಡಿದಿರುವುದಕ್ಕೆ ಖುಷಿಯಿದೆ. ಸ್ಕ್ರಿಪ್ಟ್ ಗೆ ಹೊಂದಾಣಿಕೆಯಾದಾಗ ಮಾತ್ರ ಛಾಯಾಗ್ರಹಣ ಸುಂದರವಾಗುವುದು, ಮತ್ತು ನಿರ್ದೇಶಕರ ಹಾಗು ನನ್ನ ಹೊಳಹುಗಳು ಸೇರಿದಾಗಲೇ ಇದು ಯಶಸ್ವಿಯಾಗುವುದು" ಎನ್ನುತ್ತಾರೆ ಸತ್ಯ ಹೆಗಡೆ.
ನಟ ವಿಜಯ್ ಅವರ 'ದುನಿಯಾ', 'ಜಂಗ್ಲಿ' ನಂತರ 'ಮಾಸ್ತಿ ಗುಡಿ' ನಟನೊಂದಿಗೆ ಸತ್ಯ ಅವರಿಗೆ ಮೂರನೇ ಸಿನೆಮಾ. "ನನ್ನನ್ನು ನೋಡಿದಾಗಲೆಲ್ಲಾ ವಿಜಯ್ ಒಂದೇ ಮಾತು ಹೇಳುತ್ತಾರೆ..ನನ್ನನ್ನು ಚೆನ್ನಾಗಿ ತೋರ್ಸಿ ಎಂದು..  ಅವರ ಬಲ ನಟನೆ ಮತ್ತು ಆಕ್ಷನ್ ದೃಶ್ಯಗಳಲ್ಲಿ ಇದೆ. ಆದರೆ 'ಮಾಸ್ತಿ ಗುಡಿ'ಯಲ್ಲಿ ಅವರು ವಿಭಿನ್ನವಾಗಿ ಕಾಣಿಸಿಕೊಳ್ಳಲಿದ್ದಾರೆ" ಎನ್ನುತ್ತಾರೆ ಸತ್ಯ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT