ಎಚ್ ಡಿ ಕುಮಾರ ಸ್ವಾಮಿ 
ಸಿನಿಮಾ ಸುದ್ದಿ

ಹೆಚ್ ಡಿಕೆ ಆಡಳಿತ ಕುರಿತು ಸಿನಿಮಾ: ಅರ್ಜುನ್ ಸರ್ಜಾ ನಾಯಕ

ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿಯವರ ಕುರಿತು ಚಿತ್ರ ನಿರ್ದೇಶಕ...

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿಯವರ ಕುರಿತು ಚಿತ್ರ ನಿರ್ದೇಶಕ ಎಸ್.ನಾರಾಯಣ್ ಚಿತ್ರ ನಿರ್ಮಿಸಲು ಹೊರಟಿದ್ದಾರೆ. 
ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿ 20 ತಿಂಗಳ ಆಡಳಿತಾವಧಿಯ ವಿಷಯಗಳು, ಅವರ ಅಧಿಕಾರದಲ್ಲಿ ಕೈಗೊಂಡ ಜನಪ್ರಿಯ ಕಾರ್ಯಕ್ರಮಗಳು, ಅವರು ಜನರಿಗೆ ಉಪಯೋಗವಾಗುವಂತಹ ಏನೇನು ಕಾರ್ಯಕ್ರಮಗಳನ್ನು ತಂದರು ಮತ್ತು ಅವರ ಜೀವನದ ಕೆಲವು ಸಂಗತಿಗಳು ಚಿತ್ರದಲ್ಲಿ ಒಳಗೊಂಡಿರುತ್ತದೆ. 
ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಮೇ 8ರಂದು ಶೂಟಿಂಗ್ ಆರಂಭವಾಗಲಿದ್ದು, ಚಿತ್ರಕ್ಕೆ ಭೂಮಿಪುತ್ರ ಎಂದು ಶೀರ್ಷಿಕೆ ಇಡಲಾಗಿದೆ. ಕುಮಾರಸ್ವಾಮಿ ಅವರ ಪಾತ್ರವನ್ನು ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ಅವರು ವಹಿಸಲಿದ್ದಾರೆ.
ಚಿತ್ರಕ್ಕೆ ಕೆ.ಪ್ರಭು ಅವರು ಬಂಡವಾಳ ಹಾಕಿ ನಿರ್ಮಿಸುತ್ತಿದ್ದಾರೆ.
ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿಯವರು ಅನೇಕ ಜನಪರ ಕೆಲಸಗಳನ್ನು ಮಾಡಿದ್ದಾರೆ. ಸಾಮಾನ್ಯ ಜನರ ಕೈಗೂ ಅವರು ಸಿಗುತ್ತಿದ್ದರು. ನಿರ್ಮಾಪಕರು ಅವರ ಆಡಳಿತದ ಬಗ್ಗೆ ಕೆಲವೊಂದು ಆಸಕ್ತಿಕರ ಸಂಗತಿಗಳನ್ನು ಹೇಳಿದರು. ನನಗೂ ಅದು ಇಷ್ಟವಾಗಿ ನಿರ್ದೇಶನ ಮಾಡಲು ಒಪ್ಪಿಕೊಂಡೆ ಎಂದು ಎಸ್.ನಾರಾಯಣ್ ಪ್ರತಿಕ್ರಿಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

SCROLL FOR NEXT