ಸತೀಶ್ ನೀನಾಸಂ 
ಸಿನಿಮಾ ಸುದ್ದಿ

ಮಂಡ್ಯ ಆಡುಭಾಷೆ ಮೂಲಕ 'ಅಯೋಗ್ಯ'ನಾಗಿ ಸತೀಶ್ ನೀನಾಸಂ!

ಟೈಗರ್ ಗಲ್ಲಿ ಮತ್ತು ಚಂಬಲ್ ಸಿನಿಮಾಗಳ ನಂತರ ಸತೀಶ್ ನಿನಾಸಂ ಅಯೋಗ್ಯ ಸಿನಿಮಾದಲ್ಲಿ ನಟಿಸುತ್ತಿದ್ದಾರೆ...

ಟೈಗರ್ ಗಲ್ಲಿ ಮತ್ತು ಚಂಬಲ್ ಸಿನಿಮಾಗಳ ನಂತರ ಸತೀಶ್ ನಿನಾಸಂ ಅಯೋಗ್ಯ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ನಾಳೆ, ವರಲಕ್ಷ್ಮಿ ಹಬ್ಬದ ದಿನ ನಡೆಯಲಿರುವ ಸಿನಿಮಾ ಮುಹೂರ್ತದಲ್ಲಿ ಯೋಗರಾಜ್ ಭಟ್, ಸೂರಿ, ನಟ ಸುದೀಪ್ ಮತ್ತು ಪುನೀತ್ ರಾಜ್ ಕುಮಾರ್ ಮೊದಲಾದವರು ಭಾಗವಹಿಸಲಿದ್ದಾರೆ.
ದಶಕದವರೆಗೆ ನಿರ್ದೇಶಕ ಯೋಗರಾಜ್ ಭಟ್ ಅವರ ಜೊತೆ ಕೆಲಸ ಮಾಡಿದ್ದ ಮಹೇಶ್ ಕುಮಾರ್ ಇದೀಗ ಸ್ವತಂತ್ರ ನಿರ್ದೇಶಕರಾಗಿ ಅಯೋಗ್ಯದಲ್ಲಿ ಕೆಲಸ ಮಾಡಲಿದ್ದಾರೆ. ತಮ್ಮ ಶಿಷ್ಯರನ್ನು ಹುರಿದುಂಬಿಸಿಕೊಂಡು ಬರುತ್ತಿರುವ ಯೋಗರಾಜ್ ಭಟ್ ಈ ಚಿತ್ರಕ್ಕೆ ಹಾಡು ಬರೆಯಲಿದ್ದಾರೆ.
ಹಳ್ಳಿಯ ವಾತಾವರಣದ  ಕಥೆಯನ್ನು ಹೊಂದಿರುವ ಅಯೋಗ್ಯದಲ್ಲಿ ಸತೀಶ್ ಮಂಡ್ಯ ಶೈಲಿಯಲ್ಲಿ ಮಾತನಾಡಲಿದ್ದಾರೆ. ನಾನು ಹಳ್ಳಿಯಲ್ಲಿ ಬೆಳೆದಿರುವುದರಿಂದ ಹಳ್ಳಿಯವರ ಭಾವನೆ, ಜೀವನ ಶೈಲಿ ಅರ್ಥವಾಗುತ್ತದೆ. ಹಳ್ಳಿಯವರು ಸಿನಿಮಾದಲ್ಲಿ ಏನು ನೋಡಲು ಬಯಸುತ್ತಾರೆ ಎಂಬುದು ಕೂಡ ಗೊತ್ತಾಗುತ್ತದೆ. ಸರಳ ಹಾಸ್ಯವನ್ನು ಹಳ್ಳಿ ಜನರು ಬಯಸುತ್ತಾರೆ. ಈ ಚಿತ್ರದಲ್ಲಿ ಕೂಡ ಅದನ್ನೇ ನಿರೀಕ್ಷಿಸಬಹುದು ಎನ್ನುತ್ತಾರೆ ಸತೀಶ್. ಚಿತ್ರದ ಶೂಟಿಂಗ್ ಸೆಪ್ಟೆಂಬರ್ ಮೊದಲ ವಾರದಲ್ಲಿ ಪ್ರಾರಂಭವಾಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT