ಸಾಹೇಬ ಚಿತ್ರದಲ್ಲಿ ಮನೋರಂಜನ್ ಮತ್ತು ಶಾನ್ವಿ ಶ್ರೀವಾಸ್ತವ 
ಸಿನಿಮಾ ಸುದ್ದಿ

ಗಣೇಶ ಹಬ್ಬಕ್ಕೆ ಬರಲಿದ್ದಾನೆ ಸಾಹೇಬ

ಗಣೇಶ ಹಬ್ಬಕ್ಕೆ ಮುಗುಳು ನಗೆ, ಭಜರಂಗಿ ಚಿತ್ರಗಳ ಬಿಡುಗಡೆ ಮುಂದಕ್ಕೆ ಹೋಗಿದ್ದು ರವಿಚಂದ್ರನ್ ಪುತ್ರ ಮನೋರಂಜನ್....

ಗಣೇಶ ಹಬ್ಬಕ್ಕೆ ಮುಗುಳು ನಗೆ, ಭಜರಂಗಿ ಚಿತ್ರಗಳ ಬಿಡುಗಡೆ ಮುಂದಕ್ಕೆ ಹೋಗಿದ್ದು ರವಿಚಂದ್ರನ್ ಪುತ್ರ ಮನೋರಂಜನ್ ನಟಿಸಿರುವ ಚೊಚ್ಚಲ ಚಿತ್ರ ಸಾಹೇಬ ಮುಂದಿನ ವಾರ ಗಣೇಶ ಹಬ್ಬಕ್ಕೆ ಬಿಡುಗಡೆಯಾಗುತ್ತಿದೆ. ನಿನ್ನೆ ಚಿತ್ರ ವೀಕ್ಷಿಸಿದ್ದ ಸೆನ್ಸಾರ್ ಮಂಡಳಿ ಯು/ಎ ಸರ್ಟಿಫಿಕೇಟ್ ನೀಡಿ ಬಿಡುಗಡೆಗೆ ಒಪ್ಪಿಗೆ ನೀಡಿದೆ.
ತಯಾರಿಗೆ ಹೆಚ್ಚು ಸಮಯ ತೆಗೆದುಕೊಂಡಿದ್ದ ಚಿತ್ರತಂಡ ಜೂನ್ ನಲ್ಲಿ ಚಿತ್ರ ಬಿಡುಗಡೆಗೊಳಿಸುವ ಯೋಜನೆ ಹಾಕಿಕೊಂಡಿತ್ತು. ಆದರೆ ಪ್ರಾಣಿ ಸೆನ್ಸಾರ್ ಮಂಡಳಿಯಿಂದ ಚಿತ್ರದಲ್ಲಿ ಆನೆ ಬಳಸಿದ್ದಕ್ಕೆ ಒಪ್ಪಿಗೆ ಸಿಗಲು ತಡವಾದ್ದರಿಂದ ಬಿಡುಗಡೆ ವಿಳಂಬವಾಯಿತು. ಇದೀಗ ಎಲ್ಲಾ ವಿಘ್ನಗಳನ್ನು ನಿವಾರಿಸಿ ಸಾಹೇಬ ಇದೇ 25ರಂದು ತೆರೆಗೆ ಬರುತ್ತಿದೆ.
ಜಯಣ್ಣ ಕಂಬೈನ್ಸ್ ಅಡಿ ತಯಾರಾದ ಚಿತ್ರಕ್ಕೆ ನಿರ್ದೇಶಕ ಭರತ್ ಆಕ್ಷನ್, ಕಟ್ ಹೇಳಿದ್ದಾರೆ. ಅವರು ಶ್ರೀಮುರಳಿ ನಟನೆಯ ಕಾಂತಿ ಚಿತ್ರದ ನಂತರ ಸಾಹೇಬ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಚಿತ್ರದಲ್ಲಿ ನಾಯಕಿಯಾಗಿ ಶಾನ್ವಿ ಶ್ರೀವಾಸ್ತವ ನಟಿಸಿದ್ದು ವಿ.ಹರಿಕೃಷ್ಣ ಅವರ ಸಂಗೀತ ಮತ್ತು ಜಿಎಸ್ ವಿ ಸೀತಾರಾಮ್ ಅವರ ಛಾಯಾಗ್ರಹಣವಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT