ಹಿರಿಯ ನಟ ಕಮಲ್ ಹಾಸನ್ 
ಸಿನಿಮಾ ಸುದ್ದಿ

ಭ್ರಷ್ಟಾಚಾರದಿಂದ ಸ್ವಾತಂತ್ರ್ಯ ಪಡೆಯುವವರೆಗೂ ಗುಲಾಮರಾಗಿರುತ್ತೇವೆ: ಕಮಲ್ ಹಾಸನ್

ಭ್ರಷ್ಟಾಚಾರದಿಂದ ಮುಕ್ತವಾಗದೆ ಭಾರತೀಯರು ನಿಜವಾದ ಸ್ವಾತಂತ್ರ್ಯವನ್ನು ಗಳಿಸಲು ಸಾಧ್ಯವಿಲ್ಲ ಎಂದು...

ಚೆನ್ನೈ: ಭ್ರಷ್ಟಾಚಾರದಿಂದ ಮುಕ್ತವಾಗದೆ ಭಾರತೀಯರು ನಿಜವಾದ ಸ್ವಾತಂತ್ರ್ಯವನ್ನು ಹೊಂದಲು ಸಾಧ್ಯವಿಲ್ಲ ಎಂದು ಖ್ಯಾತ ನಟ ಕಮಲ್ ಹಾಸನ್ ಅಭಿಪ್ರಾಯಪಟ್ಟಿದ್ದಾರೆ.
ಭ್ರಷ್ಟಾಚಾರದಿಂದ ಸ್ವಾತಂತ್ರ್ಯ ಸಿಗದೆ ನಾವಿನ್ನೂ ಗುಲಾಮರಾಗಿದ್ದೇವೆ. ಒಂದು ಹೊಸ ಸ್ವಾತಂತ್ರ್ಯ ಚಳವಳಿಗೆ ಧೈರ್ಯ ಮತ್ತು ಪ್ರತಿಜ್ಞೆ ಮಾಡುವವರು ಬಂದರೆ ನಾವು ಗೆಲ್ಲುತ್ತೇವೆ ಎಂದು ಕಮಲ್ ಹಾಸನ್ ಟ್ವೀಟ್ ಮಾಡಿದ್ದಾರೆ.
ಮತ್ತೊಂದು ಟ್ವೀಟ್ ನಲ್ಲಿ ಅವರು, ಉತ್ತಮ ತಮಿಳು ನಾಡು ರಾಜ್ಯ ನನ್ನ ಧ್ಯೇಯವಾಗಿದೆ. ನನ್ನ ಧ್ವನಿಗೆ ಧ್ಯೈರ್ಯ ತುಂಬುವವರು ಯಾರಿದ್ದಾರೆ? ಡಿಎಂಕೆ, ಎಐಎಡಿಎಂಕೆ ಮತ್ತು ಇತರ ರಾಜಕೀಯ ಪಕ್ಷಗಳು ನನಗೆ ಸಹಾಯ ಮಾಡುವ ಯಂತ್ರಗಳಾಗಿವೆ. ಆ ಉಪಕರಣಗಳು ಮೊಂಡಾಗಿದ್ದರೆ ಬೇರೆ ಹುಡುಕಬೇಕು ಎಂದರು.
ಭ್ರಷ್ಟಾಚಾರ ಮತ್ತು ಹಲವು ದುರ್ಘಟನೆಗಳ ನಂತರವೂ ಜನರು ತಮಿಳು ನಾಡಿನಲ್ಲಿ ಮುಖ್ಯಮಂತ್ರಿ ರಾಜಿನಾಮೆಯನ್ನು ಏಕೆ ಕೇಳಲಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ. 
ಅವರು ಟ್ವೀಟ್ ನಲ್ಲಿ ಯಾರನ್ನೂ ನೇರವಾಗಿ ಹೆಸರಿಸದೆ, ಒಂದು ರಾಜ್ಯದ ಮುಖ್ಯಮಂತ್ರಿ ಅವಘಡ ಮತ್ತು ಭ್ರಷ್ಟಾಚಾರಕ್ಕೆ ರಾಜಿನಾಮೆ ನೀಡಬೇಕೆಂದು ಜನರು ಒತ್ತಾಯಿಸಿದರೆ, ತಮಿಳು ನಾಡಿನಲ್ಲೇಕೆ ಯಾವುದೇ ರಾಜಕೀಯ ಪಕ್ಷಗಳು ಮುಖ್ಯಮಂತ್ರಿಯವರ ರಾಜಿನಾಮೆ ಕೇಳುತ್ತಿಲ್ಲ. ಇಲ್ಲಿ ಸಾಕಷ್ಟು ಅಪರಾಧಗಳು ನಡೆದಿವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT