ಗಗನ್ ಕಾಂಜ್ ಮತ್ತು ಅರ್ಜಿತ್ ಲವಾಣಿಯಾ 
ಸಿನಿಮಾ ಸುದ್ದಿ

ಕಾರು ಅಪಘಾತ: ಸ್ಥಳದಲ್ಲೇ ಇಬ್ಬರು ಕಿರುತೆರೆ ಕಲಾವಿದರ ದಾರುಣ ಸಾವು

ಖಾಸಗಿ ಚಾನೆಲ್ ನಲ್ಲಿ ಪ್ರಸಾರವಾಗುತ್ತಿರುವ ಪೌರಾಣಿಕ ಧಾರಾವಾಹಿ ಮಹಾಕಾಳಿಯ ಕಲಾವಿದರಾದ ಗಗನ್ ಕಾಂಗ್ ಮತ್ತು ಅರ್ಜಿತ್ ಲವಾಣಿಯ ಕಾರು ...

ಮುಂಬಯಿ: ಖಾಸಗಿ ಚಾನೆಲ್ ನಲ್ಲಿ ಪ್ರಸಾರವಾಗುತ್ತಿರುವ ಪೌರಾಣಿಕ ಧಾರಾವಾಹಿ ಮಹಾಕಾಳಿಯ ಕಲಾವಿದರಾದ ಗಗನ್ ಕಾಂಗ್ ಮತ್ತು ಅರ್ಜಿತ್ ಲವಾಣಿಯ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಶನಿವಾರ ರಾತ್ರಿ ಶೂಟಿಂಗ್ ಮುಗಿಸಿ ಮನೆಗೆ ವಾಪಸಾಗುವ ವೇಳೆ ಸಂಭವಿಸಿದ ಅಪಘಾತದಲ್ಲಿ ಮೃತ ಪಟ್ಟಿದ್ದಾರೆ. ಅಂಬರ್ ಗಾನ್ ನಿಂದ ಮುಂಬೈಗೆ  ಹೊರಟ್ಟಿದ್ದ ಕಾರು ಕಂಟೈನರ್ ವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಕಲಾವಿದರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, 
ಗಗನ್ ಮತ್ತು ಅರ್ಜಿತ್ ಉತ್ತಮ ಗೆಳೆಯರಾಗಿದ್ದು, ಹನುಮಾನ್ ಧಾರಾವಾಹಿಯಲ್ಲಿ ಗಗನ್ ಹನುಮಂತನ ತಂದೆ ಕೇಸರಿ ಪಾತ್ರದಲ್ಲಿ ನಟಿಸಿದ್ದರು, ಮಹಾಕಾಳಿ ಧಾರಾವಾಹಿಯಲ್ಲಿ ಗಗನ್ ದೇವೇಂದ್ರ ಹಾಗೂ ಅರ್ಜಿತ್ ನಂದಿ ಪಾತ್ರದಲ್ಲಿ ನಟಿಸುತ್ತಿದ್ದರು. 
ಕಳೆದ ಎರಡು ವಾರಗಳ ಹಿಂದಷ್ಟೇ ಧಾರಾವಾಹಿ ಆರಂಭವಾಗಿತ್ತು. ಇನ್ನೂ ಈ ಇಬ್ಬರು ಕಲಾವಿದರ ಸಾವಿನ ಬಗ್ಗೆ ಧಾರಾವಾಹಿ ತಂಡ ತೀವ್ರ ಆಘಾತ ವ್ಯಕ್ತ ಪಡಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT