ಹರ್ಷ-ಪುನೀತ್ ರಾಜಕುಮಾರ್ 
ಸಿನಿಮಾ ಸುದ್ದಿ

ನನ್ನ ಮತ್ತು ಪುನೀತ್ ರಾಜಕುಮಾರ್ ನಡುವಿನ ಒಡನಾಟ 18 ವರ್ಷಕ್ಕೂ ಹಳೆಯದ್ದು: ನಿರ್ದೇಶಕ ಹರ್ಷ

ಇದೇ ಮೊದಲ ಬಾರಿಗೆ ಕನ್ನಡದ ರಾಜರತ್ನ ಪುನೀತ್ ರಾಜಕುಮಾರ್ ನಾಯಕನಾಗಿ ಅಭಿನಯಿಸುತ್ತಿರುವ ಅಂಜನಿಪುತ್ರ ಚಿತ್ರವನ್ನು ನಿರ್ದೇಶಿಸುತ್ತಿರುವ ಸ್ಯಾಂಡಲ್ವುಡ್...

ಇದೇ ಮೊದಲ ಬಾರಿಗೆ ಕನ್ನಡದ ರಾಜರತ್ನ ಪುನೀತ್ ರಾಜಕುಮಾರ್ ನಾಯಕನಾಗಿ ಅಭಿನಯಿಸುತ್ತಿರುವ ಅಂಜನಿಪುತ್ರ ಚಿತ್ರವನ್ನು ನಿರ್ದೇಶಿಸುತ್ತಿರುವ ಸ್ಯಾಂಡಲ್ವುಡ್ ನ ನಿರ್ದೇಶಕ ಹರ್ಷ ತಾನು ಕಳೆದ 18 ವರ್ಷಗಳಿಂದ ಪುನೀತ್ ಅವರೊಂದಿಗೆ ಕೆಲಸ ಮಾಡಿಕೊಂಡು ಬಂದಿರುವುದಾಗಿ ಹೇಳಿದ್ದಾರೆ. 
ತಮ್ಮ ಚಿತ್ರಕ್ಕಾಗಿ ವಿಲಕ್ಷಣ ಸ್ಥಳಗಳನ್ನು ಹುಡುಕುವ ಹರ್ಷ ಅಂಜನಿಪುತ್ರ ಚಿತ್ರಕ್ಕಾಗಿ ಸ್ಕಾಟ್ ಲ್ಯಾಂಡ್ ಅನ್ನು ಆಯ್ಕೆ ಮಾಡಿಕೊಂಡಿದ್ದರು. ಚಿತ್ರ ಕೆಲ ಹಾಡುಗಳನ್ನು ಸ್ಕಾಟ್ ಲ್ಯಾಂಡ್ ನಲ್ಲಿ ಚಿತ್ರೀಕರಿಸಿಕೊಂಡು ಮರಳಿರುವ ಹರ್ಷ ಇಂದು ತಮ್ಮ 37 ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. 
ಈ ಬಗ್ಗೆ ಸಿಟಿ ಎಕ್ಸ್ ಪ್ರೆಸ್ ಜತೆ ಮಾತನಾಡಿದ ಹರ್ಷ ಅವರು ತಾವು ಚಿತ್ರರಂಗಕ್ಕೆ ಬಂದು 18 ವರ್ಷಗಳಾಗಿದ್ದು ಅಲ್ಲಿಂದ ಪುನೀತ್ ಅವರೊಂದಿಗೆ ಒಡನಾಟವನ್ನು ಇಟ್ಟುಕೊಂಡಿರುವುದಾಗಿ ಹೇಳಿದ್ದಾರೆ. ಅಂಜನಿಪುತ್ರ ಇದು ನನ್ನ ನಿರ್ದೇಶನದ 7ನೇ ಚಿತ್ರ. ಪ್ರತಿಯೊಂದು ಚಿತ್ರದ ನಿರ್ದೇಶನವು ನನಗೆ ಹೊಸ ಪ್ರಾರಂಭದಂತೆ ಕಾಣುತ್ತದೆ. ಮತ್ತು ಪ್ರಯಾಣವು ಫಲಪ್ರದವಾಗಿದೆ ಎಂದರು. 
ನೃತ್ಯ ನಿರ್ದೇಶಕನಾಗಿ ಚಿತ್ರರಂಗಕ್ಕೆ ಕಾಲಿಟ್ಟ ನಾನು ಪುನೀತ್ ರಾಜಕುಮಾರ್ ಅವರ ಹಲವು ಹಾಡುಗಳಿಗೆ ನೃತ್ಯ ಸಂಯೋಜಿಸಿದ್ದೇನೆ. ಹೀಗಾಗಿ ಅವರೊಂದಿಗೆ ಕೆಲಸ ಮಾಡಲು ನನಗೆ ಯಾವುದೇ ರೀತಿಯ ಅಂಜಿಕೆ ಇಲ್ಲ ಎಂದರು. 
ಅಂಜನಿಪುತ್ರ ಚಿತ್ರದ ಚಿತ್ರೀಕರಣ ಈಗಾಗಲೇ ಶೇಕಡ 80ರಷ್ಟು ಮುಕ್ತಾಯವಾಗಿದೆ. ಇನ್ನೂ 25 ದಿನಗಳ ಚಿತ್ರೀಕರಣ ಬಾಕಿ ಇದೆಯಂತೆ. ಚಿತ್ರದಲ್ಲಿ ಕಿರಿಕ್ ಪಾರ್ಟಿಯ ರಶ್ಮಿಕ ಮಂದಣ್ಣ, ರಮ್ಯಾ ಕೃಷ್ಣ, ಸಾಧು ಕೋಕಿಲ, ಚಿಕ್ಕಣ್ಣ, ಮುಕೇಶ್ ರಿಷಿ ಸೇರಿದಂತೆ ಹಲವು ಅಭಿನಯಿಸಿದ್ದಾರೆ. ಚಿತ್ರವನ್ನು ಎಂಎನ್ ಕುಮಾರ್ ನಿರ್ಮಿಸುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel