ಐಪಿಎಸ್ ಅಧಿಕಾರಿ ರೂಪಾ ಮತ್ತು ನಿರ್ದೇಶಕ ಎಎಂಆರ್ ರಮೇಶ್ 
ಸಿನಿಮಾ ಸುದ್ದಿ

ತೆರೆಯ ಮೇಲೆ ಬರಲಿದೆ ಡಿಐಜಿ ರೂಪಾ ಕಥೆ: ಐಪಿಎಸ್ ಅಧಿಕಾರಿ ಭೇಟಿ ಮಾಡಿದ ಎಎಂಆರ್ ರಮೇಶ್

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಎಐಎಡಿಎಂಕೆ ನಾಯಕಿ ಶಶಿಕಲಾ ಅವರಿಗೆ ವಿಐಪಿ ಸೌಲಭ್ಯ ಸೇರಿದಂತೆ ಅಲ್ಲಿ ನಡೆಯುವ ಅಕ್ರಮ ...

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಎಐಎಡಿಎಂಕೆ ನಾಯಕಿ ಶಶಿಕಲಾ ಅವರಿಗೆ ವಿಐಪಿ ಸೌಲಭ್ಯ ಸೇರಿದಂತೆ ಅಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳ ಬಗ್ಗೆ ವರದಿ ನೀಡಿ ಕರ್ನಾಟಕದಾದ್ಯಂತ ಮನೆ ಮಾತಾಗಿರುವ ಐಪಿಎಸ್ ಅಧಿಕಾರಿ ರೂಪಾ ಅವರ ಜೀವನ ಚರಿತ್ರೆ ಸಿನಿಮಾವಾಗಿ ಮೂಡಿ ಬರಲಿದೆ.
ಸೈನೈಡ್ ಮತ್ತು ಅಟ್ಟಹಾಸ ಸಿನಿಮಾ ನಿರ್ದೇಶಕ ಎಎಂಆರ್ ರಮೇಶ್ ಕಳೆದ ವಾರ ರೂಪಾ ಅವರನ್ನು ಭೇಟಿ ಮಾಡಿದ್ದಾರೆ. ರೂಪಾ ಅವರ ಜೀವನ ಚರಿತ್ರೆ ಬಗ್ಗೆ ಸಿನಿಮಾ ಮಾಡಲು ಹೊರಟಿರುವ ರಮೇಶ್ ರೂಪಾ ಅವರ ಕೌಟುಂಬಿಕ ಹಿನ್ನೆಲೆ ಮತ್ತು ಜೀವನ ಶೈಲಿಗಳ ಬಗ್ಗೆ ಮಾಹಿತಿ ಪಡೆದು ಕೊಂಡಿದ್ದಾರೆ. 
ಪರಪ್ಪನ ಅಗ್ರಹಾರ ಜೈಲು ಪ್ರಕರಣದ ಬಗ್ಗೆ ಮಾತ್ರ ಸಿನಿಮಾ ಮಾಡುವ ಉದ್ದೇಶವಿತ್ತು. ಆದರೆ ಅವರ ಜೀವನದ ಕೆಲ ವಿಷಯಗಳ ಬಗ್ಗೆ ಮಾಹಿತಿ ಅಗತ್ಯವಿತ್ತು, ಹೀಗಾಗಿ ಅವರನ್ನು ಭೇಟಿ ಮಾಡಿ ಮಾಹಿತಿ ಸಂಗ್ರಹಿಸಿದ್ದೇನೆ ಎಂದು ರಮೇಶ್ ತಿಳಿಸಿದ್ದಾರೆ, ಸಿಐಡಿ ಅಧಿಕಾರಿ ಶರತ್ ಚಂದ್ರ ಸೇರಿದಂತೆ ಮತ್ತಿತ್ತರ ಅಧಿಕಾರಿಗಳನ್ನು ಭೇಟಿ ಮಾಡಿ ನಂತರ ಚಿತ್ರಕಥೆ ಬರೆಯುವುದಾಗಿ ಹೇಳಿದ್ದಾರೆ.
ರೂಪಾ ಅವರ ಪಾತ್ರವನ್ನು ಯಾರು ನಿರ್ವಹಿಸಲಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ರಮೇಶ್, ಅನುಷ್ಕಾ ಶೆಟ್ಟಿ ಅಥವಾ ನಯನಾ ತಾರಾ ಹೆಸರುಗಳು ನನ್ನ ತಲೆಯಲ್ಲಿವೆ, ಚಿತ್ರಕಥೆ ಅಂತಿಮಗೊಂಡ ನಂತರ ನಾಯಕಿ ಆಯ್ಕೆ ನಡೆಯಲಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT