ಪುನೀತ್ ರಾಜಕುಮಾರ್ 
ಸಿನಿಮಾ ಸುದ್ದಿ

ಇನ್ಮುಂದೆ ತಮ್ಮದೇ ನಿರ್ಮಾಣದ ಚಿತ್ರಗಳಲ್ಲಿ ಮಾತ್ರ ಪುನೀತ್ ನಟನೆ!

ನಟನಾ ವೃತ್ತಿ ಆರಂಭಿಸಿದಾಗಿನಿಂದಲೂ ಯಶಸ್ಸನ್ನೇ ಕಾಣುತ್ತಿರುವ ನಟ ಪುನೀತ್ ರಾಜ್ ಕುಮಾರ್, ಮತ್ತೊಂದು ಎತ್ತರಕ್ಕೇರಲು ಸಿದ್ಧತೆ ನಡೆಸುತ್ತಿದ್ದಾರೆ....

ಬೆಂಗಳೂರು: ನಟನಾ ವೃತ್ತಿ ಆರಂಭಿಸಿದಾಗಿನಿಂದಲೂ ಯಶಸ್ಸನ್ನೇ ಕಾಣುತ್ತಿರುವ ನಟ ಪುನೀತ್ ರಾಜ್ ಕುಮಾರ್, ಮತ್ತೊಂದು ಎತ್ತರಕ್ಕೇರಲು ಸಿದ್ಧತೆ ನಡೆಸುತ್ತಿದ್ದಾರೆ.
ಪಿಆರ್ ಕೆ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗುವ ಸಿನಿಮಾಗಳಲ್ಲಿ ಮಾತ್ರ ನಟಿಸಲು ಪುನೀತ್ ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.ಸದ್ಯ ತಾವು ಒಪ್ಪಿಕೊಂಡಿರುವ ಸಿನಿಮಾಗಳನ್ನು ಮುಗಿಸಿದ ನಂತರ ಕೇವಲ ತಮ್ಮ ಬ್ಯಾನರ್ ನ ಸಿನಿಮಾಗಳಲ್ಲಿ ಮಾತ್ರ ಪುನೀತ್ ನಟಿಸಲಿದ್ದಾರೆ.
ಸದ್ಯಕ್ಕೆ ಎಂಎನ್ ಕುಮಾರ್ ನಿರ್ಮಾಣದಲ್ಲಿ ಹರ್ಷ ನಿರ್ದೇಶಿಸುತ್ತಿರುವ  ಅಂಜನೀಪುತ್ರದಲ್ಲಿ ಪುನೀತ್ ನಟಿಸುತ್ತಿದ್ದಾರೆ. ರಾಕ್ ಲೈನ್ ವೆಂಕಟೇಶ್ ಮತ್ತು ಹೊಂಬಾಳೆ ಪ್ರೊಡಕ್ಷನ್ ಸಿನಿಮಾಗಳಿಗೂ ಪುನೀತ್ ಕಮಿಟ್ ಆಗಿದ್ದಾರೆ. ಇ ಸಿನಿಮಾಗಳು ಮುಗಿದ ನಂತರ ಬೇರೆ ಯಾವುದೇ ಬ್ಯಾನರ್ ಗಳಡಿ ಪುನೀತ್ ಅಭಿನಯಿಸುವುದಿಲ್ಲವಂತೆ.
ಪುನೀತ್ ತಾಯಿ ಪಾರ್ವತಮ್ಮ ರಾಜ್ ಕುಮಾರ್ ತಮ್ಮ ವಜ್ರೇಶ್ವರಿ ಮತ್ತು ಪೂರ್ಣಿಮಾ ಎಂಟರ್ ಪ್ರೈಸಸ್  ನಡಿ 80 ಯಶಸ್ವಿ ಸಿನಿಮಾ ನೀಡಿದ್ದಾರೆ. ಅವುಗಳಲ್ಲಿ ತ್ರಿಮೂರ್ತಿ, ಹಾಲು ಜೇನು, ಕವಿರತ್ನ ಕಾಳಿದಾಸ ಮತ್ತು ಜೀವನ ಚೈತ್ರ ಸಿನಿಮಾಗಳು ಸೇರಿವೆ.
ಪುನೀತ್ ತಮ್ಮ ಕಿರಿಯ ವಯಸ್ಸಿನಲ್ಲಿಯೇ ಈ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗುವ ಆತ್ಮ ವಿಶ್ವಾಸದಲ್ಲಿದ್ದಾರೆ. ಮುಂದಿನ ದಿನಗಳಲ್ಲಿಯೂ ಪುನೀತ್ ಕೇವಲ ತಮ್ಮ ನಟನಾ ವೃತ್ತಿಯ ಬಗ್ಗೆ ಮಾತ್ರ ಗಮನ ಕೇಂದ್ರೀಕರಿಸಲಿದ್ದು, ಪಿಆರ್ ಕೆ ಪ್ರೊಡಕ್ಷನ್ ಹೊಣೆಗಾರಿಕೆಯನ್ನು ಪತ್ನಿ ಅಶ್ವಿನಿ ಪುನೀತ್ ನೋಡಿಕೊಳ್ಳಲಿದ್ದಾರೆ.
ಈ ಪ್ರೊಡಕ್ಷನ್ ಹೌಸ್ ಈಗಾಗಲೇ ಧಾರಾವಾಹಿಗಳನ್ನು ನಿರ್ಮಿಸುತ್ತಿದ್ದು, ಬೇರೆ ನಿರ್ದೇಶಕ ಹಾಗೂ ನಟರ ಸಿನಿಮಾಗಳನ್ನು ನಿರ್ಮಿಸುತ್ತಿದೆ.
ಪುನೀತ್ ಮುಂದಿನ ಪ್ರಾಜೆಕ್ಟ್ ತಮ್ಮ ಪಿಆರ್ ಕೆ ಬ್ಯಾನರ್ ನಲ್ಲೇ ನಡೆಯಲಿದ್ದು, ಶಶಾಂಕ್ ಸಿನಿಮಾ ನಿರ್ದೇಶಿಸಲಿದ್ದಾರೆ. ಹೇಮಂತ್ ರಾವ್ ಕವಲು ದಾರಿ ನಿರ್ದೇಶಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT