ಅನೂಪ್ ಭಂಡಾರಿ-ಪುನೀತ್ ರಾಜಕುಮಾರ್
ಅನೂಪ್ ಭಂಡಾರಿ ನಿರ್ದೇಶನದ ನಿರೂಪ್ ಭಂಡಾರಿ ನಟನೆಯ ರಾಜರಥ ಚಿತ್ರ ಜನವರಿ 25ರಂದು ಕನ್ನಡ ಹಾಗೂ ತೆಲುಗಿನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ.
ರಾಜರಥ ಚಿತ್ರದಲ್ಲಿ ತಮಿಳಿನ ಖ್ಯಾತ ನಟ ಆರ್ಯ ಸಹ ಪಾತ್ರವೊಂದರಲ್ಲಿ ಅಭಿನಯಿಸಿದ್ದಾರೆ. ಇನ್ನು ಇದೇ ಚಿತ್ರಕ್ಕಾಗಿ ನಿರ್ದೇಶಕ ಅನೂಪ್ ಭಂಡಾರಿ ಅವರು ಸ್ಯಾಂಡಲ್ವುಡ್ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಮತ್ತು ತೆಲುಗಿನ ನಟ ರಾಣಾ ದಗ್ಗುಬಾಟಿ ಅವರನ್ನು ಕರೆತರಲು ತೀರ್ಮಾನಿಸಿದ್ದಾರೆ.
ಕನ್ನಡ ಹಾಗೂ ತೆಲುಗಿನಲ್ಲಿ ಚಿತ್ರ ನಿರ್ಮಾಣವಾಗುತ್ತಿದ್ದು ಕನ್ನಡದಲ್ಲಿ ಪುನೀತ್ ಹಾಗೂ ತೆಲುಗಿನಲ್ಲಿ ರಾಣಾ ದಗ್ಗುಬಾಟಿಗಾಗಿ ನಿರ್ದೇಶಕರು ಪಾತ್ರವೊಂದನ್ನು ಸೃಷ್ಟಿಸಿದ್ದಾರೆ. ಖ್ಯಾತ ನಟರು ಯಾವ ಪಾತ್ರದಲ್ಲಿ ಅಭಿನಯಿಸಲಿದ್ದಾರೆ ಎಂಬುದನ್ನು ನಿರ್ದೇಶಕರು ಬಹಿರಂಗಪಡಿಸಿಲ್ಲ.
ಪಾತ್ರವೊಂದನ್ನು ಸೃಷ್ಟಿಸಿರುವ ಅನೂಪ್ ಭಂಡಾರಿ ಅವರು ಇದಕ್ಕಾಗಿ ಪುನೀತ್ ರಾಜಕುಮಾರ್ ಅವರನ್ನು ಮುಖಾಮುಖಿ ಸಂದರ್ಶಿಸಿಲ್ಲ. ಚಿತ್ರದಲ್ಲಿನ ತಮ್ಮ ಪಾತ್ರದ ಕುರಿತಂತೆ ಪುನೀತ್ ರಾಜಕುಮಾರ್ ಅವರನ್ನು ದೂರವಾಣಿ ಕರೆ ತಿಳಿಸಿದ್ದು ಇದಕ್ಕೆ ಪುನೀತ್ ಅವರನ್ನು ಅಭಿನಯಿಸುವುದಾಗಿ ಒಪ್ಪಿಕೊಂಡಿರುವುದಾಗಿ ಅನೂಪ್ ಭಂಡಾರಿ ಹೇಳಿದ್ದಾರೆ.
ಇನ್ನು ತೆಲುಗಿನ ರಾಜರಥಂ ಚಿತ್ರದ ಪಾತ್ರಕ್ಕಾಗಿ ಬಾಹುಬಲಿ ಖ್ಯಾತಿಯ ರಾಣಾ ದಗ್ಗುಬಾಟಿಯನ್ನು ಸಂಪರ್ಕಿಸುವಂತೆ ಆರ್ಯ ಸಲಹೆ ನೀಡಿದ್ದರು. ಅಂತೆ ನಾನು ರಾಣಾ ಅವರಿಗೆ ಕರೆ ಮಾಡಿ ತಿಳಿಸಿದ್ದು ಅವರು ಸಹ ಅಭಿನಯಿಸುವುದಾಗಿ ಒಪ್ಪಿಕೊಂಡಿದ್ದಾರೆ. ಶೀಘ್ರದಲ್ಲೇ ಚಿತ್ರೀಕರಣ ಮುಗಿಸಿ ಅಂದುಕೊಂಡಂತೆ ಜನವರಿ 25ಕ್ಕೆ ದೇಶಾದ್ಯಂತ ಚಿತ್ರ ಬಿಡುಗಡೆ ಮಾಡಲು ಚಿತ್ರತಂಡ ತೀರ್ಮಾನಿಸಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos