ಪ್ರೇಮ ಬರಹ ಪೋಸ್ಟರ್ 
ಸಿನಿಮಾ ಸುದ್ದಿ

'ಪ್ರೇಮ ಬರಹ'ದಲ್ಲಿ ಆಂಜನೇಯನಿಗೆ ಅರ್ಜುನ್ ಸರ್ಜಾ ಜೈ!

ಅರ್ಜುನ್ ಸರ್ಜಾ ಆಂಜನೇಯನ ಭಕ್ತ ಅನ್ನೋದು ಎಲ್ಲರಿಗೂ ಗೊತ್ತೇ ಇದೆ. ತಮ್ಮದೇ ನಿರ್ದೇಶನದ 'ಪ್ರೇಮ ಬರಹ' ಚಿತ್ರಕ್ಕೆ ಅವರು ಆಂಜನೇಯನ ಕುರಿತಾದ ಹಾಡೊಂದನ್ನು ಕಡೆಗೂ ಸೇರಿಸಿದ್ದಾರೆ.

ಅರ್ಜುನ್ ಸರ್ಜಾ ಆಂಜನೇಯನ ಭಕ್ತ ಅನ್ನೋದು ಎಲ್ಲರಿಗೂ ಗೊತ್ತೇ ಇದೆ. ತಮ್ಮದೇ ನಿರ್ದೇಶನದ 'ಪ್ರೇಮ ಬರಹ' ಚಿತ್ರಕ್ಕೆ ಅವರು ಆಂಜನೇಯನ ಕುರಿತಾದ ಹಾಡೊಂದನ್ನು ಕಡೆಗೂ ಸೇರಿಸಿದ್ದಾರೆ.

ಆಂಜನೇಯನ ಕುರಿತಾದ ಹಾಡಿನಲ್ಲಿ ಸ್ಟಾರ್ ನಟರಾದ ದರ್ಶನ್, ಚಿರಂಜೀವಿ ಸರ್ಜಾ ಮತ್ತು ಧ್ರುವ ಸರ್ಜಾ ಸ್ಟೆಪ್ ಹಾಕಿದ್ದಾರೆ. ಹಾಡನ್ನು ಬೆಂಗಳೂರಿನಲ್ಲಿ ಬೃಹತ್ ಆಂಜನೇಯನ ಮೂರ್ತಿ ಎದುರು ಚಿತ್ರೀಕರಿಸಲಾಗಿದೆ.

1993ರಲ್ಲಿ ಬಿಡುಗಡೆಯಾದ 'ಪ್ರತಾಪ್' ಚಿತ್ರ ಪ್ರೇಮ ಬರಹ ಕೋಟಿ ತರಹ ಹಾಡಿನಿಂದ ಈ ಚಿತ್ರದ ಶೀರ್ಷಿಕೆ ಆಯ್ದುಕೊಳ್ಳಲಾಗಿದೆ.

ನಮ್ಮ ತಂಡ ಸೆಟ್ ಗೆ ಭೇಟಿ ನೀಡಿದ ಸಂದರ್ಭ, ಚಿತ್ರದ ನಿರ್ದೇಶಕ-ನಟ ಅರ್ಜುನ್ ಸರ್ಜಾ ಅವರು ಜೈ ಶ್ರೀರಾಮ್ ಎಂದು ಮುದ್ರಿಸಲಾಗಿದ್ದ ಕುರ್ತಾ ತೊಟ್ಟು ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು. ದರ್ಶನ್ ಮತ್ತು ಚಿರಂಜೀವಿ ಸರ್ಜಾ ಅವರು ಇಂದಿನಿಂದ ಚಿತ್ರೀಕರಣದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ.

ಪ್ರೇಮ ಬರಹದಲ್ಲಿ ಚಂದನ್ ಕುಮಾರ್ ನಾಯಕರಾಗಿ ಐಶ್ವರ್ಯ ಅರ್ಜುನ್ ಅವರು ನಾಯಕಿಯಾಗಿ ನಟಿಸುತ್ತಿದ್ದಾರೆ, ಐಶ್ವರ್ಯ ಅವರಿಗೆ ಇದು ಕನ್ನಡದಲ್ಲಿ ಮೊದಲ ಚಿತ್ರ. ಚಿತ್ರದಲ್ಲಿ ಸಾಧು ಕೋಕಿಲ, ರಂಗಾಯಣ ರಘು ಮತ್ತು ಸುಹಾಸಿನಿ ಅವರ ತಾರಾಗಣ ಇದೆ. ಈ ಚಿತ್ರಕ್ಕೆ ತಮಿಳಿನಲ್ಲಿ 'ಸೊಲ್ಲಿ ವಿಡವ' ಎಂಬ ಶೀರ್ಷಿಕೆ ಕೊಡಲಾಗಿದ್ದು, ಅದಕ್ಕೂ ಚಂದನ್, ಐಶ್ವರ್ಯ ನಾಯಕ-ನಾಯಕಿಯಾಗಿರುತ್ತಾರೆ. ಎರಡೂ ಭಾಷೆಗೆ ಜೆಸ್ಸಿ ಗಿಫ್ಟ್ ಅವರ ಸಂಗೀತ, ವೇಣುಗೋಪಾಲ ಅವರ ಛಾಯಾಗ್ರಹಣ ಇದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

SCROLL FOR NEXT