ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ನಟ ಸುದೀಪ್ 
ಸಿನಿಮಾ ಸುದ್ದಿ

ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ನಟ ಕಿಚ್ಚಾ ಸುದೀಪ್, ವಿಷ್ಣು ಸ್ಮಾರಕಕ್ಕಾಗಿ ಮನವಿ!

ಖ್ಯಾತ ನಟ ಕಿಚ್ಚಾ ಸುದೀಪ್ ಅವರು ಸೋಮವಾರ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು, ದಿವಂಗತ ನಟ ಸಾಹಸ ಸಿಂಹ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣ ಕುರಿತಂತೆ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ.

ಬೆಂಗಳೂರು: ಖ್ಯಾತ ನಟ ಕಿಚ್ಚಾ ಸುದೀಪ್ ಅವರು ಸೋಮವಾರ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು, ದಿವಂಗತ ನಟ ಸಾಹಸ ಸಿಂಹ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣ ಕುರಿತಂತೆ ಚರ್ಚೆ ಮಾಡಿದ್ದಾರೆ  ಎನ್ನಲಾಗಿದೆ.
ಸಿಎಂ ನಿವಾಸ ಕಾವೇರಿಗೆ ತೆರಳಿದ್ದ ನಟ ಸುದೀಪ್ ಅವರು, ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸುಮಾರು ಒಂದು ಗಂಟೆಗೂ ಅಧಿಕ ಕಾಲ ಚರ್ಚಿಸಿದರು. ಈ ವೇಳೆ ನಟ ಸುದೀಪ್ ಸಾಹಸಸಿಂಹ ವಿಷ್ಣುವರ್ಧನ್ ಅವರ  ಸಮಾಧಿಯ ಸ್ಥಳವನ್ನು ಪುಣ್ಯಭೂಮಿ ಮಾಡುವಂತೆ ಸಿಎಂಗೆ ಮನವಿ ಮಾಡಿದ್ದಾರೆ. ಅಲ್ಲದೆ ಈ ಕಾರ್ಯಕ್ಕೆ ಅಭಿಮಾನಿಗಳಾದ ನಾವು ಯಾವುದೇ ರೀತಿಯ ಆರ್ಥಿಕ ಮತ್ತು ಇತರೆ ನೆರವು ನೀಡಲು ಸಿದ್ಧ. ಈ ಬಗ್ಗೆ ಇರುವ ಕಾನೂನು  ತೊಡಕುಗಳನ್ನು ಮಾತ್ರ ನಿವಾರಿಸಿಕೊಡುವಂತೆ ಸಿಎಂ ಸಿದ್ದರಾಮಯ್ಯ ಅವರ ಬಳಿ ಸುದೀಪ್ ಮನವಿ ಮಾಡಿದ್ದಾರೆ.
ಅಲ್ಲದೆ ಇದೇ ಡಿಸೆಂಬರ್ 30ರಂದು ವಿಷ್ಣು ಪುಣ್ಯತಿಥಿ ಇದ್ದು ಅಷ್ಟರೊಳಗೆ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡುವಂತೆ ಸುದೀಪ್ ಮನವಿ ಮಾಡಿದ್ದಾರೆ. 
ಇನ್ನು ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಟ ಸುದೀಪ್, "ಸಾಹಸಸಿಂಹ ವಿಷ್ಣುವರ್ಧನ್ ಅವರ ಸಮಾಧಿಯ ಸ್ಥಳವನ್ನು ಪುಣ್ಯಭೂಮಿ ಮಾಡುವಂತೆ ಸಿಎಂಗೆ ಮನವಿ ಮಾಡಿದ್ದೇನೆ. ವಿಷ್ಣು ಸಮಾಧಿಯ 100 ಎಕರೆ  ಜಾಗವನ್ನ ನಾವೇ ಖರೀದಿ ಮಾಡುತ್ತೇವೆ. ಸಮಾಧಿಯನ್ನು ಸ್ಥಳಾಂತರ ಮಾಡೋದು ಬೇಡ, ಸಮಾಧಿ ಜಾಗವನ್ನ ಪುಣ್ಯಭೂಮಿ ಅಂತಾ ಅಭಿವೃದ್ಧಿ ಮಾಡಿ ಎಂದು ಮನವಿ ಮಾಡಿದ್ದೇನೆ. ವಿಷ್ಣು ವರ್ಧನ್ ಅವರ ಪತ್ನಿ ಭಾರತಿ ಅವರ  ಆಸೆಯಂತೆ ಇಲ್ಲಿ ಬದಲಾಗಿ ಸ್ಮಾರಕವನ್ನು ಮೈಸೂರಿನಲ್ಲಿ ಮಾಡಿದರೂ ನಮಗೆ ಬೇಸರವಿಲ್ಲ. ಆದರೆ ಸ್ಮಾರಕ ಕಾರ್ಯ ತಡವಾಗುವುದು ಬೇಡ.. ಈಗಾಗಲೇ 8 ವರ್ಷಗಳಾದರೂ ವಿಷ್ಣು ಸ್ಮಾರಕ ಯೋಜನೆ ನೆನೆಗುದಿಗೆ ಬಿದ್ದಿದೆ.  ಹೀಗಾಗಿ ಈ ಬಗ್ಗೆ ಸಿಎಂ ಸಿದ್ಗರಾಮಯ್ಯ ಅವರಿಗೆ ಮನವಿ ಮಾಡಿದ್ದೇನೆ. ಸಿಎಂ ಸಿದ್ದರಾಮಯ್ಯ ಅವರು ಕೂಡ ಸಕಾರಾತ್ಮಕವಾಗಿ ಸ್ಪಂದನೆ ನೀಡಿದ್ದಾರೆ. ಜೊತೆಗೆ ಪುಣ್ಯಭೂಮಿ ಮಾಡಿಕೊಡೋದಾಗಿ ಸಿಎಂ ಭರವಸೆ ನೀಡಿದ್ದಾರೆ  ಎಂದು ಸುದೀಪ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

SCROLL FOR NEXT