ಶ್ರೀಮುರಳಿ ಜೊತೆ ಚಿತ್ರತಂಡದ ಸೆಲ್ಫಿ 
ಸಿನಿಮಾ ಸುದ್ದಿ

ಹೊಂಬಾಳೆ ಫಿಲಮ್ಸ್ ಮುಂದಿನ ಚಿತ್ರದಲ್ಲಿ ಶ್ರೀಮುರಳಿ ನಾಯಕ

ಚೊಚ್ಚಲ ನಿರ್ದೇಶಕ ನರ್ತನ್ ನಿರ್ದೇಶನದ ಮಫ್ತಿ ಚಿತ್ರದ ಯಶಸ್ಸಿನ ನಂತರ ನಟ ಶ್ರೀಮುರಳಿ ಸತತ .....

ಬೆಂಗಳೂರು: ಚೊಚ್ಚಲ ನಿರ್ದೇಶಕ ನರ್ತನ್ ನಿರ್ದೇಶನದ ಮಫ್ತಿ ಚಿತ್ರದ ಯಶಸ್ಸಿನ ನಂತರ ನಟ ಶ್ರೀಮುರಳಿ ಸತತ ಮೂರು ಚಿತ್ರಗಳ ಹಿಟ್ ಗಳನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.
ಈ ಹಿಂದೆ ಶ್ರೀಮುರಳಿಯವರ ಉಗ್ರಂ ಮತ್ತು ರಥಾವರ ಚಿತ್ರ ಕೂಡ ಗೆದ್ದಿದ್ದವು. ಹಾಗಾದರೆ ಇವರ ಮುಂದಿನ ಪ್ಲಾನ್ ಏನು? ಜಯಣ್ಣ ಕಂಬೈನ್ಸ್ ನಲ್ಲಿ ಎಂಬುದು ತಿಳಿದುಬಂದಿದೆ. 
 ಶ್ರೀಮುರಳಿ ಇತ್ತೀಚೆಗೆ ಕಾರ್ತಿಕ್ ಗೌಡ, ಯೋಗಿ  ಜಿ ರಾಜ್, ರಾಜನ್ ಅವರ ಜೊತೆಗೆ ತೆಗೆದ ಸೆಲ್ಫಿಯನ್ನು ಅಪ್ ಲೋಡ್ ಮಾಡಿದ್ದು ಅವರ ಜೊತೆ ಇನ್ನೊಂದು ಚಿತ್ರ ಮಾಡುತ್ತಾರೆಯೇ ಎಂಬ ಕುತೂಹಲ ಸಾಮಾಜಿಕ ತಾಣದಲ್ಲಿ ಅವರ ಅಭಿಮಾನಿಗಳಿಗೆ ಉಂಟಾಗಿತ್ತು. ಅದೀಗ ನಿಜವಾಗುವ ಸುದ್ದಿ ಬಂದಿದೆ.
ರಾಜಕುಮಾರ್ ನಂತಹ ಹಿಟ್ ಸಿನಿಮಾ ಕೊಟ್ಟ ಮತ್ತು ಯಶ್ ನಟನೆಯ ಕೆಜಿಎಫ್ ನಂತಹ ಬಿಗ್ ಬಜೆಟ್ ಚಿತ್ರ ನಿರ್ಮಿಸಿದ ವಿಜಯ್ ಕಿರಗಂದೂರು ಅವರ ಹೊಂಬಾಳೆ ಫಿಲ್ಮ್ಸ್  ಕಾರ್ತಿಕ್ ಗೌಡ ನಿರ್ಮಾಣ ಹೌಸ್ ನಡಿ ಕೆಆರ್ ಜಿ ಸ್ಟುಡಿಯೊದಡಿ ಶ್ರೀಮುರಳಿ ನಟನೆಯ ಚಿತ್ರ ನಿರ್ಮಾಣವಾಗಲಿದೆ.
ಚಿತ್ರವನ್ನು ಯೋಗಿ ಜಿ ರಾಜ್ ನಿರ್ದೇಶಿಸಲಿದ್ದಾರೆ. ಚಿತ್ರದ ಸ್ಕ್ರಿಪ್ಟ್ ಆರಂಭವಾಗಿದ್ದು ತಂಡ ಈಗಾಗಲೇ ಕೆಲಸ ಆರಂಭಿಸಿದೆ. ಶೂಟಿಂಗ್ ಸ್ಥಳವನ್ನು ಆಯ್ಕೆ ಮಾಡಲು ಚಂಡ ಈಗಾಗಲೇ ಸ್ಥಳವನ್ನು ಹುಡುಕಿಕೊಂಡು ಹೊರಟಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಎಲ್ಲರ ಹುಬ್ಬೇರಿಸಿದ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT