ಅಂಜನಿಪುತ್ರದ ಸ್ಟಿಲ್ 
ಸಿನಿಮಾ ಸುದ್ದಿ

ಪುನೀತ್ ಅಭಿನಯದ 'ಅಂಜನಿಪುತ್ರ' ಪ್ರದರ್ಶನಕ್ಕೆ ಕೋರ್ಟ್ ತಡೆ!

ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ 'ಅಂಜನಿಪುತ್ರ' ಚಿತ್ರ ಪ್ರದರ್ಶನಕ್ಕೆ ಸೆಷೆನ್ಸ್ ಕೋರ್ಟ್ ಶನಿವಾರ ತಡೆಯಾಜ್ಞೆ ನೀಡಿದೆ....

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ 'ಅಂಜನಿಪುತ್ರ' ಚಿತ್ರ ಪ್ರದರ್ಶನಕ್ಕೆ ಸೆಷೆನ್ಸ್ ಕೋರ್ಟ್ ಶನಿವಾರ ತಡೆಯಾಜ್ಞೆ ನೀಡಿದೆ.

ಚಿತ್ರದಲ್ಲಿ ವಕೀಲರ ವಿರುದ್ಧ ಅವಹೇಳನಕಾರಿ ಸಂಭಾಷಣೆ ಬಳಕೆ ಮಾಡಲಾಗಿದ್ದು, ಚಿತ್ರ ಪ್ರದರ್ಶನಕ್ಕೆ ತಡೆ ನೀಡಬೇಕು ಎಂದು ಕೋರಿ ವಕೀಲ ನಾರಾಯಣಸ್ವಾಮಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಜನವರಿ 2ರ ವರೆಗೆ ಚಿತ್ರ ಪ್ರದರ್ಶನಕ್ಕೆ ತಡೆಯಾಜ್ಞೆ ನೀಡಿದೆ.

ಇಂದು ಸಂಜೆ 7.30ರ ನಂತರ ರಾಜ್ಯಾದ್ಯಾಂತ ಎಲ್ಲಾ ಚಿತ್ರಮಂದರಿಗಳಲ್ಲಿ ಚಿತ್ರ ಪ್ರದರ್ಶನ ಸ್ಥಗಿತಗೊಳಿಸುವಂತೆ ಕೋರ್ಟ್ ಆದೇಶಿಸಿದೆ.

'ನೀನು ಗಂಟೆ ಅಲ್ಲಾಡಿಸೋ ಹಾಗಿದ್ರೆ, ಕೋರ್ಟ್ ನಲ್ಲಿ ಅಲ್ಲಾಡ್ಸು. ಇಲ್ಲಿ ಅಲ್ಲಾಡಿಸಿದ್ರೆ ಕಟ್ ಮಾಡಿ ಬಿಡ್ತೀನಿ' ಎಂದು ರವಿ ಶಂಕರ್ ಇನ್ಸ್ ಪೆಕ್ಟರ್ ಆಗಿ ವಕೀಲರಿಗೆ ಹೇಳುವ ದೃಶ್ಯ ಸಿನಿಮಾದಲ್ಲಿದೆ. ಈ ಸಂಭಾಷಣೆಯಿಂದ ವಕೀಲರಿಗೆ ಅವಮಾನವಾಗಿದೆ. ಹೀಗಾಗಿ ಒಂದೋ ಅಂಜನಿಪುತ್ರ ಸಿನಿಮಾ ಪ್ರದರ್ಶನ ರದ್ದು ಮಾಡಿ, ಇಲ್ಲವೇ ವಕೀಲರ ಬಗೆಗಿನ ಅವಹೇಳನಕಾರಿ ಮಾತನ್ನು ತೆಗೆಯುವಂತೆ ಅರ್ಜಿಯಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಎ.ಹರ್ಷ ನಿರ್ದೇಶನದ ಹಾಗೂ ಎಮ್ ಎನ್.ಕುಮಾರ್ ನಿರ್ಮಾಣದ ಅಂಜನಿಪುತ್ರ ಕಳೆದ ಗುರುವಾರ ತೆರೆ ಕಂಡಿದ್ದು, ಪವರ್ ಸ್ಟಾರ್ ಪುನೀತ್ ಗೆ ರಶ್ಮಿಕಾ ಮಂದಣ್ಣ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT