ಪೂಜಾಗಾಂಧಿ 
ಸಿನಿಮಾ ಸುದ್ದಿ

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ: ನಟಿ ಪೂಜಾಗಾಂಧಿ ಖುಲಾಸೆ

ನಟಿ ಪೂಜಾಗಾಂಧಿ ಇದೀಗ ನಿರಾಳರಾಗಿದ್ದಾರೆ. ರಾಯಚೂರಿನಲ್ಲಿ ಅವರ ವಿರುದ್ಧ ದಾಖಲಾಗಿದ್ದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಅವರು ಖುಲಾಸೆಗೊಂಡಿದ್ದಾರೆ.

ರಾಯಚೂರು: ನಟಿ ಪೂಜಾಗಾಂಧಿ ಇದೀಗ ನಿರಾಳರಾಗಿದ್ದಾರೆ. ರಾಯಚೂರಿನಲ್ಲಿ ಅವರ ವಿರುದ್ಧ ದಾಖಲಾಗಿದ್ದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಅವರು ಖುಲಾಸೆಗೊಂಡಿದ್ದಾರೆ.
ಸಾಕ್ಷ್ಯಾಧಾರ ಕೊರತೆಯಾಗಿರುವ ಕಾರಣ ನಟಿಯ ವಿರುದ್ಧದ ಆರೋಪ ಸಾಬೀತಾಗಿಲ್ಲ. ಹೀಗಾಗಿ ಅವರನ್ನು ಖುಲಾಸೆಗೊಳಿಸಿರುವುದಾಗಿ ರಾಯಚೂರಿನ ಜೆಎಂಎಫ್ ಸಿ 2ನೇ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದೆ. ನ್ಯಾಯಾಧೀಶೆ ಪೂರ್ಣಿಮಾ ಯಾದವ್ ಪೂಜಾಗಾಂಧಿ ಅವರನ್ನು ಖುಲಾಸೆಗೊಳಿಸಿ ತೀರ್ಪು ಪ್ರಕಟಿಸಿದ್ದಾರೆ.
ಪ್ರಕರಣ ವಿವರ: 2013 ರಲ್ಲಿ ರಾಯಚೂರು ನಗರ ಕ್ಷೇತ್ರಕ್ಕೆ ಬಿಎಸ್ಆರ್ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಪೂಜಾಗಾಂಧಿ ಅನುಮತಿ ಇಲ್ಲದೆ ವಾಹನವನ್ನು ಚುನಾವಣಾ ಪ್ರಚಾರಕ್ಕೆ ಬಳಸಿ ನೀತಿ ಸಂಹಿತೆುಲ್ಲಂಘನೆ ಮಾಡಿದ್ದಾರೆಂದು ದೂರು ದಾಖಲಾಗಿತ್ತು. ಸದರಬಜಾರ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಐದು ಬಾರಿ ವಿಚಾರಣೆಗೆ ಗೈರಾಗಿದ್ದ ನಟಿಯ ವಿರುದ್ಧ ವಾರಂಟ್ ಜಾರಿಗೊಂಡಿತ್ತು.
ಇಂದು ಈ ಪ್ರಕರಣದ ಅಂತಿಮ ತೀರ್ಪು ಬಂದಿದ್ದು ಪೂಜಾಗಾಂಧಿಗೆ ದೊಡ್ಡ ಬಿಡುಗಡೆ ಸಿಕ್ಕಿದೆ. "ನಾಲ್ಕುವರೆ ವರ್ಷಗಳ ನಂತರ ನನಗೆ ನ್ಯಾಯ ದಕ್ಕಿದೆ. ತೀರ್ಪು ಕೇಳಿ ಸಂತಸವಾಗಿದೆ." ಎಂದು ತೀರ್ಪಿನ ನಂತರ ಪೂಜಾಗಾಂಧಿ ಪ್ರತಿಕ್ರಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT