ಪೂಜಾಗಾಂಧಿ 
ಸಿನಿಮಾ ಸುದ್ದಿ

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ: ನಟಿ ಪೂಜಾಗಾಂಧಿ ಖುಲಾಸೆ

ನಟಿ ಪೂಜಾಗಾಂಧಿ ಇದೀಗ ನಿರಾಳರಾಗಿದ್ದಾರೆ. ರಾಯಚೂರಿನಲ್ಲಿ ಅವರ ವಿರುದ್ಧ ದಾಖಲಾಗಿದ್ದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಅವರು ಖುಲಾಸೆಗೊಂಡಿದ್ದಾರೆ.

ರಾಯಚೂರು: ನಟಿ ಪೂಜಾಗಾಂಧಿ ಇದೀಗ ನಿರಾಳರಾಗಿದ್ದಾರೆ. ರಾಯಚೂರಿನಲ್ಲಿ ಅವರ ವಿರುದ್ಧ ದಾಖಲಾಗಿದ್ದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಅವರು ಖುಲಾಸೆಗೊಂಡಿದ್ದಾರೆ.
ಸಾಕ್ಷ್ಯಾಧಾರ ಕೊರತೆಯಾಗಿರುವ ಕಾರಣ ನಟಿಯ ವಿರುದ್ಧದ ಆರೋಪ ಸಾಬೀತಾಗಿಲ್ಲ. ಹೀಗಾಗಿ ಅವರನ್ನು ಖುಲಾಸೆಗೊಳಿಸಿರುವುದಾಗಿ ರಾಯಚೂರಿನ ಜೆಎಂಎಫ್ ಸಿ 2ನೇ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದೆ. ನ್ಯಾಯಾಧೀಶೆ ಪೂರ್ಣಿಮಾ ಯಾದವ್ ಪೂಜಾಗಾಂಧಿ ಅವರನ್ನು ಖುಲಾಸೆಗೊಳಿಸಿ ತೀರ್ಪು ಪ್ರಕಟಿಸಿದ್ದಾರೆ.
ಪ್ರಕರಣ ವಿವರ: 2013 ರಲ್ಲಿ ರಾಯಚೂರು ನಗರ ಕ್ಷೇತ್ರಕ್ಕೆ ಬಿಎಸ್ಆರ್ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಪೂಜಾಗಾಂಧಿ ಅನುಮತಿ ಇಲ್ಲದೆ ವಾಹನವನ್ನು ಚುನಾವಣಾ ಪ್ರಚಾರಕ್ಕೆ ಬಳಸಿ ನೀತಿ ಸಂಹಿತೆುಲ್ಲಂಘನೆ ಮಾಡಿದ್ದಾರೆಂದು ದೂರು ದಾಖಲಾಗಿತ್ತು. ಸದರಬಜಾರ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಐದು ಬಾರಿ ವಿಚಾರಣೆಗೆ ಗೈರಾಗಿದ್ದ ನಟಿಯ ವಿರುದ್ಧ ವಾರಂಟ್ ಜಾರಿಗೊಂಡಿತ್ತು.
ಇಂದು ಈ ಪ್ರಕರಣದ ಅಂತಿಮ ತೀರ್ಪು ಬಂದಿದ್ದು ಪೂಜಾಗಾಂಧಿಗೆ ದೊಡ್ಡ ಬಿಡುಗಡೆ ಸಿಕ್ಕಿದೆ. "ನಾಲ್ಕುವರೆ ವರ್ಷಗಳ ನಂತರ ನನಗೆ ನ್ಯಾಯ ದಕ್ಕಿದೆ. ತೀರ್ಪು ಕೇಳಿ ಸಂತಸವಾಗಿದೆ." ಎಂದು ತೀರ್ಪಿನ ನಂತರ ಪೂಜಾಗಾಂಧಿ ಪ್ರತಿಕ್ರಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT