ಶಿವರಾಜ್ ಕುಮಾರ್ 
ಸಿನಿಮಾ ಸುದ್ದಿ

ತೆರೆ ಮೇಲೆ ಮತ್ತೆ 'ಭೈರತಿ ರಣಗಲ್ಲು' ಆರ್ಭಟ

ಸ್ಯಾಂಡಲ್‌ವುಡ್‌ನಲ್ಲಿ ಸದ್ದು ಮಾಡಿದ್ದ ಶ್ರೀಮುರಳಿ ಅಭಿನಯದ ಮಫ್ತಿ ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ನಿರ್ವಹಿಸಿದ್ದ ಭೈರತಿ ರಣಗಲ್ಲು ಪಾತ್ರದ ಹೆಸರು ಇದೀಗ...

ಸ್ಯಾಂಡಲ್‌ವುಡ್‌ನಲ್ಲಿ ಸದ್ದು ಮಾಡಿದ್ದ ಶ್ರೀಮುರಳಿ ಅಭಿನಯದ ಮಫ್ತಿ ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ನಿರ್ವಹಿಸಿದ್ದ ಭೈರತಿ ರಣಗಲ್ಲು ಪಾತ್ರದ ಹೆಸರು ಇದೀಗ ಸಿನಿಮಾ ಟೈಟಲ್ ಆಗಿದೆ. 
ಶಿವರಾಜ್ ಕುಮಾರ್ ನಿರ್ವಹಿಸಿದ್ದ ಭೈರತಿ ರಣಗಲ್ಲು ಪಾತ್ರವು ಅಭಿಮಾನಿಗಳಿಂದ ಹೆಚ್ಚು ಪ್ರಶಂಸೆಗೆ ಪಾತ್ರವಾಗಿತ್ತು. ಈ ಹಿನ್ನೆಲೆಯಲ್ಲಿ ಇದೇ ಶೀರ್ಷಿಕೆಯನ್ನಿಟ್ಟುಕೊಂಡು ಚಿತ್ರ ತಯಾರಾಗಲಿದೆ. ಈ ಚಿತ್ರ ಶಿವರಾಜ್ ಕುಮಾರ್ ಅವರ ಸ್ವಂತ ಬ್ಯಾನರ್ ಶ್ರೀ ಮುತ್ತು ಪ್ರೋಡೆಕ್ಷನ್ ಅಡಿಯಲ್ಲಿ ನಿರ್ಮಾಣವಾಗುತ್ತಿದ್ದು ಮಫ್ತಿ ಚಿತ್ರವನ್ನು ನಿರ್ದೇಶಿಸಿದ್ದ ನರ್ತನ್ ಮತ್ತು ಛಾಯಾಗ್ರಾಹಕ ನವೀನ್ ಕುಮಾರ್ ಮತ್ತೆ ಈ ಚಿತ್ರಕ್ಕೆ ಒಂದಾಗಲಿದ್ದಾರೆ. 
ಚಿತ್ರದಲ್ಲಿ ಶಿವರಾಜ್ ಕುಮಾರ್ ಗೆಟಪ್, ಸ್ಟೈಲ್ ಅಭಿಮಾನಿಗಳಿಗೆ ಸಿಕ್ಕಾಪಟ್ಟೆ ಇಷ್ಟವಾಗಿತ್ತು. ಚಿತ್ರದಲ್ಲಿ ಸಂಪೂರ್ಣವಾಗಿ ಕಪ್ಪು ಶರ್ಟ್ ಮತ್ತು ಪಂಚೆ ಧರಿಸಿ ಭೈರತಿ ರಣಗಲ್ಲು ಎಂಬ ಡಾನ್ ಪಾತ್ರದಲ್ಲಿ ಶಿವರಾಜ್ ಕುಮಾರ್ ಮಿಂಚಿದ್ದರು. 
ಈ ಬಗ್ಗೆ ಸಿಟಿ ಎಕ್ಸ್ ಪ್ರೆಸ್ ಜತೆ ಮಾತನಾಡಿರುವ ಶಿವರಾಜ್ ಕುಮಾರ್ ಅವರು, ನಮ್ಮ ಪಾತ್ರವನ್ನು ಜನರು ಗುರುತಿಸಿ ನಮ್ಮನ್ನು ಪ್ರೋತ್ಸಾಹಿಸಿದಾಗ ನಮಗೆ ಹೆಚ್ಚು ತೃಪ್ತಿ ನೀಡುತ್ತದೆ. ಭೈರತಿ ರಣಗಲ್ಲು ಪಾತ್ರ ನೀಡಿದ್ದಕ್ಕಾಗಿ ನಿರ್ದೇಶಕ ನರ್ತನ್ ಗೆ ನಾನು ಧನ್ಯವಾದ ಹೇಳಬೇಕು. ಈ ಪಾತ್ರವು ನನಗೆ ಒಂದು ನಿರ್ದಿಷ್ಟ ಗುರುತನ್ನು ನೀಡಿದೆ ಎಂದರು. 
ಇನ್ನು ಇದೇ ಶೀರ್ಷಿಕೆಯನ್ನಿಟ್ಟುಕೊಂಡು ನನ್ನ ಸ್ವಂತ ಬ್ಯಾನರ್ ನಲ್ಲಿ ಚಿತ್ರಕ್ಕೆ ಬಂಡವಾಳ ಹೂಡಲು ನಿರ್ಧರಿಸಿದ್ದೇನೆ. ಭೈರತಿ ರಣಗಲ್ಲು ಪಾತ್ರವು ಮತ್ತೆ ಬೆಳ್ಳಿಪರದೆ ಮೇಲೆ ವಿಜೃಂಭಿಸಬೇಕು. ಹಾಗಂತ ಈ ಚಿತ್ರ ನನ್ನ ಸ್ವಂತ ಬ್ಯಾನರ್ ನ ಮೊದಲ ಚಿತ್ರವೇನಲ್ಲ. ಮೊದಲಿಗೆ ಇತರ ಕಲಾವಿದರ ಚಿತ್ರವನ್ನು ತಯಾರಿಸಲು ನಾನು ಯೋಜನೆ ರೂಪಿಸಿದ್ದೇನೆ. ಆ ಯೋಜನೆಯ ಮಾತುಕತೆಗಳು ನಡೆದ ನಂತರ ಚಿತ್ರದ ಕುರಿತು ಅಧಿಕೃತ ಮಾಹಿತಿ ನೀಡುತ್ತೇನೆ ಎಂದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT