ಸಂಗ್ರಹ ಚಿತ್ರ 
ಸಿನಿಮಾ ಸುದ್ದಿ

"ಅಲೆಮಾರಿ" ಸಂತು ನಿರ್ದೇಶನದ ಚಿತ್ರಕ್ಕೆ "ಕೆಂಡಸಂಪಿಗೆ" ವಿಕ್ಕಿ ನಾಯಕ

ದುನಿಯಾ ಸೂರಿ ನಿರ್ದೇಶನದ ಕೆಂಡಸಂಪಿಗೆ ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ಉದಯೋನ್ಮುಖ ನಾಯಕ ನಟ ಎಂದು ಛಾಪು ಮೂಡಿಸಿದ್ದ ನಟ ವಿಕ್ಕಿ ವರುಣ್ ಬರೊಬ್ಬರಿ ಒಂದೂವರೆ ವರ್ಷದ ಬಳಿಕ ಮತ್ತೊಂದು ಚಿತ್ರಕ್ಕೆ ಸಹಿ ಹಾಕಿದ್ದಾರೆ.

ಬೆಂಗಳೂರು: ದುನಿಯಾ ಸೂರಿ ನಿರ್ದೇಶನದ ಕೆಂಡಸಂಪಿಗೆ ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ಉದಯೋನ್ಮುಖ ನಾಯಕ ನಟ ಎಂದು ಛಾಪು ಮೂಡಿಸಿದ್ದ ನಟ ವಿಕ್ಕಿ ವರುಣ್ ಬರೊಬ್ಬರಿ ಒಂದೂವರೆ ವರ್ಷದ ಬಳಿಕ  ಮತ್ತೊಂದು ಚಿತ್ರಕ್ಕೆ ಸಹಿ ಹಾಕಿದ್ದಾರೆ.

ಈ ಹಿಂದೆ ಅಲೆಮಾರಿ ಚಿತ್ರ ನಿರ್ದೇಶಿಸಿದ್ದ ಸಂತೋಷ್ ಅಲಿಯಾಸ್ ಅಲೆಮಾರಿ ಸಂತು ನಿರ್ದೇಶನದ ಚಿತ್ರದಲ್ಲಿ ವಿಕ್ಕಿ ವರುಣ್ ನಾಯಕನಟನಾಗಿ ಕಾಣಿಸಿಕೊಳ್ಳುತ್ತಿದ್ದು, ಈ ಬಗ್ಗೆ ಸ್ವತಃ ನಿರ್ದೇಶಕ ಸಂತು ಸ್ಪಷ್ಟನೆ ನೀಡಿದ್ದಾರೆ.  ನಗರದಿಂದ ಹಳ್ಳಿಗೆ ತೆರಳು ಹುಡುಗನ ಪಾತ್ರಕ್ಕಾಗಿ ನಾನು ನಟನನ್ನು ಹುಡುಕುತ್ತಿದ್ದೆ. ಆಗ ನನಗದೆ ಸಿಕ್ಕಿದ್ದೇ ವಿಕ್ಕಿ. ಈ ಪಾತ್ರಕ್ಕೆ ವಿಕ್ಕಿ ವರುಣ್ ತುಂಬಾ ಚೆನ್ನಾಗಿ ಒಗ್ಗುತ್ತಾರೆ ಎಂದು ಹೇಳಿದ್ದಾರೆ. ಇನ್ನು ಈ ಚಿತ್ರವನ್ನು  ಒಪ್ಪಿಕೊಳ್ಳುವುದಕ್ಕೂ ಮೊದಲು ವಿಕ್ಕಿ ಸುಮಾರು 30 ಕಥೆಗಳನ್ನು ಕೇಳಿದ್ದರಂತೆ. ಆದರೆ ಆ ಕಥೆಗಳಾವುದೂ ವಿಕ್ಕಿಗೆ ಒಪ್ಪಿಗೆಯಾಗದ ಕಾರಣ ಈ ವರೆಗೂ ಯಾವುದೇ ಚಿತ್ರವನ್ನೂ ಒಪ್ಪಿಕೊಂಡಿರಲಿಲ್ಲ.

ಈ ಬಗ್ಗೆ ಕೇಳಿದಾಗ ಉತ್ತರಿಸಿದ ನಟ ವಿಕ್ಕಿ, ನಿರ್ದೇಶಕ ಸಂತು ನನಗೆ ಸುಮಾರು 1 ವರ್ಷದಿಂದ ಪರಿಚಯ. ನಾನು ಇಷ್ಟಪಡುವ ಕಥೆ ದೊರಯದಿದ್ದ ಕಾರಣದಿಂದಲೇ ನಾನು ಒಂದೂವರ ವರ್ಷ ಕಾದೆ. ಈಗ ಸಂತು ಅವರ  ಕಥೆಯನ್ನು ಒಪ್ಪಿಕೊಂಡಿದ್ದೇನೆ. ಚಿತ್ರರಂಗದಲ್ಲಿ ನನಗೆ ಅತ್ಯುತ್ತಮ ಆರಂಭ ದೊರೆಯಿತು. ಹೀಗಾಗಿ ನನ್ನ ಎರಡನೇ ಪಯಣವನ್ನು ತುಂಬಾ ಜಾಗರೂಕನಾಗಿ ಆರಿಸಿಕೊಳ್ಳಬೇಕು ಎಂಬ ಕಾರಣಕ್ಕೆ ಇಷ್ಟು ತಡ ಮಾಡಿದೆ. ನನ್ನ ಪ್ರಕಾರ  ಸಂತು ಓರ್ವ ಉತ್ತಮ ಕಥೆಗಾರ ಮತ್ತು ನಿರ್ದೇಶಕ. ಚಿಕ್ಕದಾಗಿ ಮತ್ತು ಮನಃಮುಟ್ಟುವಂತೆ ನನಗೆ ಕಥೆ ಹೇಳಿದ್ದರು. ಇದೀಗ ಆ ಚಿಕ್ಕ ಕಥೆಯನ್ನೇ ಬೆಳೆಸಿ ಸಿನಿಮಾ ಮಾಡಲಾಗುತ್ತಿದೆ. ಚಿತ್ರಕ್ಕೆ ಸಂಬಂಧಿಸಿದಂತೆ ಸಿದ್ಧತೆ  ನಡೆಸಲಾಗುತ್ತಿದ್ದು, ಶೀಘ್ರದಲ್ಲೇ ಚಿತ್ರೀಕರಣ ಆರಂಭಿಸುತ್ತೇವೆ ಎಂದು ವಿಕ್ಕಿ ವರುಣ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗೃಹ ಲಕ್ಷ್ಮಿ ಹಣ: ಸಚಿವೆ ಲಕ್ಮಿ ಹೆಬ್ಬಾಳ್ಕರ್ ಸದನಕ್ಕೆ ತಪ್ಪು ಮಾಹಿತಿ ನೀಡಿದ್ರಾ? 'ಡಿನ್ನರ್ ಪಾಲಿಟಿಕ್ಸ್' ಬಗ್ಗೆ ಬಿಜೆಪಿ ಕಿಡಿ!

'ಏನೋ ತಪ್ಪಾಗಿದೆ...' ಕರೂರ್ ಕಾಲ್ತುಳಿತ ಪ್ರಕರಣದಲ್ಲಿ ಮದ್ರಾಸ್ ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್ ಪ್ರಶ್ನೆ!

ದರ್ಶನ್ ಜೈಲ್‌ನಲ್ಲಿ ಇದ್ರೂ ರಾಜ್ಯಾದ್ಯಂತ 'ಡೆವಿಲ್' ಫೀವರ್, ಮೊದಲ ದಿನದ ಗಳಿಕೆ ಎಷ್ಟು?

ಮಾಲೀಕರೇ ವಿದೇಶಿಗರಿಗೆ ಮನೆ ಬಾಡಿಗೆ ಕೊಡುವ ಮುನ್ನ ಎಚ್ಚರ; ಡ್ರಗ್ಸ್ ಮಾರಾಟಗಾರರಿರುವ ಕಟ್ಟಡ ಕೆಡವಲು ಸರ್ಕಾರ ಚಿಂತನೆ!

ಕಾಂಗ್ರೆಸ್ ವಿರುದ್ಧ ತರೂರ್ ಬಂಡಾಯ ಬಾವುಟ?; ರಾಹುಲ್ ಗಾಂಧಿ ನೇತೃತ್ವದ ಸಭೆಗೆ ಮತ್ತೆ ಗೈರು!

SCROLL FOR NEXT