ನಟ ಅರುಣ್ ಸಾಗರ್ ಗೋದಾಮಿಗೆ ಬೆಂಕಿ: ಲಕ್ಷಾಂತರ ಮೌಲ್ಯದ ಕಲಾಕೃತಿಗಳು ಬೆಂಕಿಗಾಹುತಿ 
ಸಿನಿಮಾ ಸುದ್ದಿ

ನಟ ಅರುಣ್ ಸಾಗರ್ ಗೋದಾಮಿಗೆ ಬೆಂಕಿ: ಲಕ್ಷಾಂತರ ಮೌಲ್ಯದ ಕಲಾಕೃತಿಗಳು ಬೆಂಕಿಗಾಹುತಿ

ಸ್ಯಾಂಡಲ್'ವುಡ್ ನಟ ಹಾಗೂ ಕಲಾ ನಿರ್ದೇಶಕ ಅರುಣ್ ಸಾಗರ್ ಅವರ ಆರ್ಟ್ ಗ್ಯಾಲರಿ ಮತ್ತು ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ಮೌಲ್ಯದ ಕಲಾಕೃತಿಗಳು...

ಬೆಂಗಳೂರು: ಸ್ಯಾಂಡಲ್'ವುಡ್ ನಟ ಹಾಗೂ ಕಲಾ ನಿರ್ದೇಶಕ ಅರುಣ್ ಸಾಗರ್ ಅವರ ಆರ್ಟ್ ಗ್ಯಾಲರಿ ಮತ್ತು ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ಮೌಲ್ಯದ ಕಲಾಕೃತಿಗಳು ಬೆಂಕಿಗಾಹುತಿಯಾಗಿರುವುದಾಗಿ ತಿಳಿದುಬಂದಿದೆ.

ಫೆಬ್ರವರಿ 15 ರಂದು ಅಗ್ನಿ ಅವಘಡ ಸಂಭವಿಸಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಗ್ನಿ ಅವಘಡದಲ್ಲಿ ಚಲನಚಿತ್ರ ಹಾಗೂ ಧಾರವಾಹಿಗಳಿಗೆ ಬಳಸಲಾಗುತ್ತಿದ್ದ ಸಾವಿರಾರು ಅಪೂರ್ವ ಕಲಾಕೃತಿಗಳು ಸುಟ್ಟು ಭಸ್ಮವಾಗಿದ್ದು, ರೂ.75 ಲಕ್ಷಕ್ಕೂ ಅಧಿಕ ನಷ್ಟವಾಗಿದೆ ಎಂದು ಮೂಲಗಳು ತಿಳಿಸಿವೆ.

ಉತ್ತರಹಳ್ಳಿಯಲ್ಲಿ 1.5 ಎಕರೆ ಜಾಗದಲ್ಲಿ ಅರುಣ್ ಸಾಗರ್ ಅವರ ಗೋದಾಮು ಇದ್ದು, 3 ಗೋದಾಮಿನಲ್ಲಿ ಕಲಾಕೃತಿಗಳು ಹಾಗೂ ಇನ್ನಿತರೆ ವಸ್ತುಗಳನ್ನು ಸಂಗ್ರಹಿಸಡಲಾಗಿತ್ತು. ಬುಧವಾರ ಸಂಜೆ ವೇಳೆಗೆ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನ ಪಟ್ಟಿದರಾದರೂ ಬೆಂಕಿ ನಂದಿಸಲು ಸಾಧ್ಯವಾಗಿಲ್ಲ. ನಂತರ ಅಗ್ನಿ ಶಾಮಕದಳ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ. ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕಾಗಮಿಸುವಷ್ಟರಲ್ಲಿ ಬೆಂಕಿ ಕೆನ್ನಾಲಿಗೆ ಮೂರು ಗೋದಾಮುಗಳಿಗೆ ಹೊತ್ತಿಕೊಂಡಿದೆ. ಬೆಂಕಿ ನಂದಿಸಲು ಸಾಕಷ್ಟು ಅಗ್ನಿಶಾಮಕ ದಳದ ಸಿಬ್ಬಂದಿಗಳು ಸಾಕಷ್ಟು ಹರಸಾಹಸ ಪಟ್ಟಿದ್ದಾರೆ.

15 ವರ್ಷಗಳಿಂದ ಪಟ್ಟ ಪರಿಶ್ರಮಗಳು ಗೋದಾಮಿನಲ್ಲಿರಿಸಲಾಗಿತ್ತು. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಲು ಸಾಧ್ಯವಿಲ್ಲ. ಸ್ಥಳದಲ್ಲಿ ವಿದ್ಯುತ್ ಸಂಬಂಧಿಸಿದ ವೈರ್ ಗಳಾಗಲೀ ಇನ್ನಾವುದೇ ವಸ್ತುಗಳಿರಲಿಲ್ಲ. ಪಕ್ಕದಲ್ಲಿ ಖಾಲಿ ಜಾಗವಿದ್ದು, ಅಲ್ಲಿಂದ ಬೆಂಕಿ ಬಂದಿರಬಹುದು. ಯಾವ ಕಾರಣಕ್ಕೆ ಬೆಂಕಿ ತಗುಲಿದೆ ಎಂಬುದು ಗೊತ್ತಾಗುತ್ತಿಲ್ಲ. ನನಗೆ ಯಾರ ಮೇಲೆಯೂ ಅನುಮಾನಗಳಿಲ್ಲ. ಈಗಾಗಲೇ ಪೊಲೀಸರು ಪ್ರಕರಣ ಸಂಬಂಧ ಎಫ್ಐಆರ್ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆಂದು ಅರುಣ್ ಸಾಗರ್ ಅವರು ಖಾಸಗಿ ಮಾಧ್ಯಮವೊಂದರಲ್ಲಿ ಹೇಳಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT