ಸೌಂದರ್ಯ ರಜನೀಕಾಂತ್ 
ಸಿನಿಮಾ ಸುದ್ದಿ

ಆಟೋಗೆ ಸೌಂದರ್ಯ ರಜನೀಕಾಂತ್ ಕಾರು ಡಿಕ್ಕಿ: ಪರಿಸ್ಥಿತಿ ಉದ್ವಿಗ್ನಗೊಳ್ಳದಂತೆ ಸಮಯ ಪ್ರಜ್ಞೆ ಮೆರೆದ ಧನುಷ್

ಸೂಪರ್ ಸ್ಟಾರ್ ರಜನೀಕಾಂತ್ ಪುತ್ರಿ ಸೌಂದರ್ಯ ರಜನೀಕಾಂತ್ ಮಂಗಳವಾರ ಬೆಳಗ್ಗೆ ಆಟೋಗೆ ಗುದ್ದಿ ಅಪಘಾತಕ್ಕೆ ಕಾರಣರಾಗಿದ್ದಾರೆ...

ಚೆನ್ನೈ: ಸೂಪರ್ ಸ್ಟಾರ್ ರಜನೀಕಾಂತ್ ಪುತ್ರಿ ಸೌಂದರ್ಯ ರಜನೀಕಾಂತ್  ಮಂಗಳವಾರ ಬೆಳಗ್ಗೆ  ಆಟೋಗೆ ಗುದ್ದಿ ಅಪಘಾತಕ್ಕೆ ಕಾರಣರಾಗಿದ್ದಾರೆ.

ಆಳ್ವಾರ್ ಪೇಟೆ ಪ್ರದೇಶದಲ್ಲಿ ನಿಂತಿದ್ದ ಆಟೋಗೆ ಸೌಂದರ್ಯ ರಜನೀಕಾಂತ್ ಕಾರು ಡಿಕ್ಕಿ ಹೊಡೆದಿದೆ.  ಘಟನೆಯಲ್ಲಿ ಆಟೋ ಚಾಲಕ ಗಾಯಗೊಂಡಿದ್ದಾನೆ, ಜೊತೆಗೆ ಸೌಂದರ್ಯ ರಜನೀಕಾಂತ್ ವಿರುದ್ಧ ಎಫ್ ಐಆರ್ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ವರದಿ ತಿಳಿಸಿದೆ.

ಪರಿಸ್ಥಿತಿ ಗಂಭೀರತೆ ಅರಿತ ಸೌಂದರ್ಯ ಕೂಡಲೇ ಸಹೋದರಿ ಐಶ್ವರ್ಯಾ ಮನೆಗೆ ತೆರಳಿ ತನ್ನ ಬಾವ ಹಾಗೂ ತಮಿಳು ಚಿತ್ರರಂಗದ ಖ್ಯಾತ ನಾಯಕ ಧನುಷ್ ಅವರನ್ನು ಸ್ಥಳಕ್ಕೆ ಕರೆ ತಂದಿದ್ದಾರೆ.

ತಮಿಳು ಚಿತ್ರರಂಗದ ಬಹಳ ವಿಧೇಯ ನಟ ಎಂದು ಪ್ರಸಿದ್ಧಿಯಾಗಿರುವ ಧನುಷ್ ಸ್ಥಳಕ್ಕೆ ಬಂದು ಆಟೋ ಚಾಲಕನ ಮನವೊಲಿಸಿ, ವೈದ್ಯಕೀಯ ವೆಚ್ಚ ಭರಿಸಿ,  ಆಟೋಗೆ ಆಗಿರುವ ಹಾನಿ ಸರಿಪಡಿಸಲು ಹಣದ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ಧನುಷ್ ಆಗಮನದ ನಂತರ ಪರಿಸ್ಥಿತಿ ಶಾಂತವಾಗಿದೆ. ನಿರ್ಮಾಪಕಿಯಾಗಿರುವ ಸೌಂದರ್ಯ ರಜನೀಕಾಂತ್ ಧನುಷ್ ಜೊತೆ ವಿಐಪಿ ಎಂಬ ಸಿನಿಮಾ ಮಾಡುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT