ಅಕ್ಷರ ಗೌಡ 
ಸಿನಿಮಾ ಸುದ್ದಿ

'ಕೊನೆಗೂ ಕನ್ನಡದಲ್ಲಿ ಕೆಲಸ ಮಾಡುವ ಅವಕಾಶ ಸಿಕ್ಕಿತು': ಅಕ್ಷರ ಗೌಡ

ಅಕ್ಷರ ಗೌಡ ಕನ್ನಡ ಚಿತ್ರರಂಗದಲ್ಲಿ ಪಾದಾರ್ಪಣೆ ಮಾಡುತ್ತಿರುವ ಚಿತ್ರ 'ಪ್ರೇಮದಲ್ಲಿ', ಎಂಜಿನಿಯರ್ ವೃತ್ತಿ ತೊರೆದು ಚಲನಚಿತ್ರ ನಿರ್ದೇಶಕನಾಗಿರುವ ಹರಿಪ್ರಸಾದ್ ಜಯಣ್ಣ ಅವರ ಮೊದಲ ಚಿತ್ರ ಕೂಡ. ಹರಿ

ಬೆಂಗಳೂರು: ಅಕ್ಷರ ಗೌಡ ಕನ್ನಡ ಚಿತ್ರರಂಗದಲ್ಲಿ ಪಾದಾರ್ಪಣೆ ಮಾಡುತ್ತಿರುವ ಚಿತ್ರ 'ಪ್ರೇಮದಲ್ಲಿ', ಎಂಜಿನಿಯರ್ ವೃತ್ತಿ ತೊರೆದು ಚಲನಚಿತ್ರ ನಿರ್ದೇಶಕನಾಗಿರುವ ಹರಿಪ್ರಸಾದ್ ಜಯಣ್ಣ ಅವರ ಮೊದಲ ಚಿತ್ರ ಕೂಡ. ಹರಿ ಯೋಗರಾಜ್ ಭಟ್ ಗರಡಿಯಲ್ಲಿ ಪಳಗಿದವರು. ಮಾಡೆಲ್ ಲೋಕದಿಂದ ನಟನೆಗೆ ಜಿಗಿದಿರುವ ಅಮೀತ ಕೌಲ್ ಕೂಡ ಚಲನಚಿತ್ರದ ಭಾಗವಾಗಿದ್ದಾರೆ. 
ನ್ಯೂಯಾರ್ಕ್ ಫಿಲಂ ಅಕಾಡೆಮಿಯಲ್ಲಿ ನಿರ್ದೇಶನ ತರಬೇತಿ ಪಡೆದಿದ್ದ ಅಕ್ಷರ ತಮಿಳಿನ 'ಉಯರಿತಿರು ೪೨೦' ಸಿನೆಮಾದ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿ, 'ರಂಗ್ರೆಜ್' ಮೂಲಕ ಬಾಲಿವುಡ್ ಪ್ರವೇಶಿಸಿದ್ದರು. 'ತುಫಾಕಿ', 'ಇರಂಬು ಕೂತಿರೈ' ಸಿನೆಮಾಗಳಲ್ಲಿ ವಿಶೇಷ ಪಾತ್ರದಲ್ಲಿ ನಟಿಸಿದ್ದ ನಟಿ, ತಮ್ಮ ಮುಂದಿನ ಸಿನೆಮಾ 'ಭೋಗನ್' ಎದುರುನೋಡುತ್ತಿದ್ದಾರೆ. ಪ್ರಭುದೇವ ಮತ್ತು ಡಾ. ಕೆ ಗಣೇಶ್ ನಿರ್ಮಾಣದ ಈ ಚಿತ್ರದಲ್ಲಿ, ಜಯಂ ರವಿ, ಹಂಸಿಕಾ ಮೋಟ್ವಾನಿ ಮತ್ತು ಅರವಿಂದ್ ಸ್ವಾಮಿ ನಟಿಸುತ್ತಿದ್ದಾರೆ. ಅಲ್ಲದೆ 'ಮಾಯಾವನ್' ಮತ್ತು 'ಸಂಗಿಲಿ ಬುಂಗಿಲಿ ಕಧ್ ಆವಾ ತೊರೆ' ಸಿನಿಮಾದಲ್ಲಿಯೂ ನಟಿಸುತ್ತಿದ್ದಾರೆ. 
ಹಲವು ದಿನಗಳಿಂದ ಕನ್ನಡ ಚಿತ್ರರಂಗದಲ್ಲಿ ನಟಿಸುವ ಆಸೆ ಹೊತ್ತಿದ್ದ ನಟಿ, ಈಗ ಪಾದಾರ್ಪಣೆಗೆ ಉತ್ಸುಕರಾಗಿದ್ದಾರೆ. "೨೦೧೭ ನನಗೆ ಉತ್ತಮ ಆರಂಭ" ಎನ್ನುತ್ತಾರೆ. ವಿಶೇಷ ಎಂದರೆ ನಿರ್ದೇಶಕರ ಜೊತೆಗೆ ಒಂದೇ ಅಕಾಡೆಮಿಯಲ್ಲಿ ಇವರಿಬ್ಬರು ಅಧ್ಯಯನ ಮಾಡಿರುವುದು. "ಹರಿಪ್ರಸಾದ್ ೨೦೧೧ ರಲ್ಲಿ ಉತ್ತೀರ್ಣಯರಾದರೆ ನಾನು ೨೦೧೪ ರಲ್ಲಿ ಅಕಾಡೆಮಿಯಿಂದ ಹೊರಬಂದೆ" ಎನ್ನುತ್ತಾರೆ ನಟಿ. 
ತೆಲುಗಿನಲ್ಲಿಯೂ ಪಾದಾರ್ಪಣೆ ಮಾಡಲಿರುವ ನಟಿ, ವಿವರಗಳನ್ನು ಅಧಿಕೃತ ಘೋಷಣೆಯ ನಂತರ ನೀಡುವುದಾಗಿ ಹೇಳುತ್ತಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel