ಅಕ್ಷರ ಗೌಡ 
ಸಿನಿಮಾ ಸುದ್ದಿ

'ಕೊನೆಗೂ ಕನ್ನಡದಲ್ಲಿ ಕೆಲಸ ಮಾಡುವ ಅವಕಾಶ ಸಿಕ್ಕಿತು': ಅಕ್ಷರ ಗೌಡ

ಅಕ್ಷರ ಗೌಡ ಕನ್ನಡ ಚಿತ್ರರಂಗದಲ್ಲಿ ಪಾದಾರ್ಪಣೆ ಮಾಡುತ್ತಿರುವ ಚಿತ್ರ 'ಪ್ರೇಮದಲ್ಲಿ', ಎಂಜಿನಿಯರ್ ವೃತ್ತಿ ತೊರೆದು ಚಲನಚಿತ್ರ ನಿರ್ದೇಶಕನಾಗಿರುವ ಹರಿಪ್ರಸಾದ್ ಜಯಣ್ಣ ಅವರ ಮೊದಲ ಚಿತ್ರ ಕೂಡ. ಹರಿ

ಬೆಂಗಳೂರು: ಅಕ್ಷರ ಗೌಡ ಕನ್ನಡ ಚಿತ್ರರಂಗದಲ್ಲಿ ಪಾದಾರ್ಪಣೆ ಮಾಡುತ್ತಿರುವ ಚಿತ್ರ 'ಪ್ರೇಮದಲ್ಲಿ', ಎಂಜಿನಿಯರ್ ವೃತ್ತಿ ತೊರೆದು ಚಲನಚಿತ್ರ ನಿರ್ದೇಶಕನಾಗಿರುವ ಹರಿಪ್ರಸಾದ್ ಜಯಣ್ಣ ಅವರ ಮೊದಲ ಚಿತ್ರ ಕೂಡ. ಹರಿ ಯೋಗರಾಜ್ ಭಟ್ ಗರಡಿಯಲ್ಲಿ ಪಳಗಿದವರು. ಮಾಡೆಲ್ ಲೋಕದಿಂದ ನಟನೆಗೆ ಜಿಗಿದಿರುವ ಅಮೀತ ಕೌಲ್ ಕೂಡ ಚಲನಚಿತ್ರದ ಭಾಗವಾಗಿದ್ದಾರೆ. 
ನ್ಯೂಯಾರ್ಕ್ ಫಿಲಂ ಅಕಾಡೆಮಿಯಲ್ಲಿ ನಿರ್ದೇಶನ ತರಬೇತಿ ಪಡೆದಿದ್ದ ಅಕ್ಷರ ತಮಿಳಿನ 'ಉಯರಿತಿರು ೪೨೦' ಸಿನೆಮಾದ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿ, 'ರಂಗ್ರೆಜ್' ಮೂಲಕ ಬಾಲಿವುಡ್ ಪ್ರವೇಶಿಸಿದ್ದರು. 'ತುಫಾಕಿ', 'ಇರಂಬು ಕೂತಿರೈ' ಸಿನೆಮಾಗಳಲ್ಲಿ ವಿಶೇಷ ಪಾತ್ರದಲ್ಲಿ ನಟಿಸಿದ್ದ ನಟಿ, ತಮ್ಮ ಮುಂದಿನ ಸಿನೆಮಾ 'ಭೋಗನ್' ಎದುರುನೋಡುತ್ತಿದ್ದಾರೆ. ಪ್ರಭುದೇವ ಮತ್ತು ಡಾ. ಕೆ ಗಣೇಶ್ ನಿರ್ಮಾಣದ ಈ ಚಿತ್ರದಲ್ಲಿ, ಜಯಂ ರವಿ, ಹಂಸಿಕಾ ಮೋಟ್ವಾನಿ ಮತ್ತು ಅರವಿಂದ್ ಸ್ವಾಮಿ ನಟಿಸುತ್ತಿದ್ದಾರೆ. ಅಲ್ಲದೆ 'ಮಾಯಾವನ್' ಮತ್ತು 'ಸಂಗಿಲಿ ಬುಂಗಿಲಿ ಕಧ್ ಆವಾ ತೊರೆ' ಸಿನಿಮಾದಲ್ಲಿಯೂ ನಟಿಸುತ್ತಿದ್ದಾರೆ. 
ಹಲವು ದಿನಗಳಿಂದ ಕನ್ನಡ ಚಿತ್ರರಂಗದಲ್ಲಿ ನಟಿಸುವ ಆಸೆ ಹೊತ್ತಿದ್ದ ನಟಿ, ಈಗ ಪಾದಾರ್ಪಣೆಗೆ ಉತ್ಸುಕರಾಗಿದ್ದಾರೆ. "೨೦೧೭ ನನಗೆ ಉತ್ತಮ ಆರಂಭ" ಎನ್ನುತ್ತಾರೆ. ವಿಶೇಷ ಎಂದರೆ ನಿರ್ದೇಶಕರ ಜೊತೆಗೆ ಒಂದೇ ಅಕಾಡೆಮಿಯಲ್ಲಿ ಇವರಿಬ್ಬರು ಅಧ್ಯಯನ ಮಾಡಿರುವುದು. "ಹರಿಪ್ರಸಾದ್ ೨೦೧೧ ರಲ್ಲಿ ಉತ್ತೀರ್ಣಯರಾದರೆ ನಾನು ೨೦೧೪ ರಲ್ಲಿ ಅಕಾಡೆಮಿಯಿಂದ ಹೊರಬಂದೆ" ಎನ್ನುತ್ತಾರೆ ನಟಿ. 
ತೆಲುಗಿನಲ್ಲಿಯೂ ಪಾದಾರ್ಪಣೆ ಮಾಡಲಿರುವ ನಟಿ, ವಿವರಗಳನ್ನು ಅಧಿಕೃತ ಘೋಷಣೆಯ ನಂತರ ನೀಡುವುದಾಗಿ ಹೇಳುತ್ತಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT