ಬಾಲಿವುಡ್ ನಟ ಅಮಿರ್ ಖಾನ್ 
ಸಿನಿಮಾ ಸುದ್ದಿ

ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ನಟ ಅಮಿರ್ ಖಾನ್ ತೀವ್ರ ಖಂಡನೆ

ಹೊಸ ವರ್ಷಾಚರಣೆ ವೇಳೆ ನಗರದ ಎಂ.ಜಿ. ರಸ್ತೆ ಹಾಗೂ ಬ್ರಿಗೇಡ್ ರಸ್ತೆಯಲ್ಲಿ ಮಹಿಳೆಯರ ಮೇಲೆ ನಡೆದ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಬಾಲಿವುಡ್ ನಟ ಅಮಿರ್ ಖಾನ್ ಅವರು ತೀವ್ರವಾಗಿ ಖಂಡಿಸಿದ್ದಾರೆ...

ಮುಂಬೈ: ಹೊಸ ವರ್ಷಾಚರಣೆ ವೇಳೆ ನಗರದ ಎಂ.ಜಿ. ರಸ್ತೆ ಹಾಗೂ ಬ್ರಿಗೇಡ್ ರಸ್ತೆಯಲ್ಲಿ ಮಹಿಳೆಯರ ಮೇಲೆ ನಡೆದ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಬಾಲಿವುಡ್ ನಟ ಅಮಿರ್ ಖಾನ್ ಅವರು ತೀವ್ರವಾಗಿ ಖಂಡಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಮಹಿಳೆಯರ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಅವರು, ಘಟನೆ ನಿಜಕ್ಕೂ ಆಘಾತವನ್ನುಂಟು ಮಾಡಿದೆ. ಈ ರೀತಿಯ ಘಟನೆಗಳನ್ನು ತೀವ್ರವಾಗಿ ಖಂಡಿಸುತ್ತೇನೆ. ಇಂತಹ ಅಪರಾಧ ಪ್ರಕರಣಗಳಿಂದಾಗಿ ದೇಶ ತಲೆತಗ್ಗಿಸುವಂತಾಗಿದೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ನಡೆಸಿರುವ ಘಟನೆ ತೀವ್ರ ಅಸಮಾಧಾನವನ್ನು ತಂದಿದೆ. ಘಟನೆ ತೀವ್ರ ನೋವುಂಟು ಮಾಡಿದೆ. ನಮ್ಮ ದೇಶದಲ್ಲಿ ಈ ರೀತಿಯ ಘಟನೆಗಳು ನಡೆಸುತ್ತಿರುವುದಕ್ಕೆ ನಾಚಿಕೆಯಾಗುತ್ತಿದೆ. ಈ ರೀತಿಯ ಘಟನೆಗಳು ಮರುಕಳಿಸದಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸೂಕ್ತ ರೀತಿಯ ಕ್ರಮ ಕೈಗೊಳ್ಳಬೇಕಿದೆ. ಈ ರೀತಿಯ ಸಮಸ್ಯೆಗಳಿಗೆ ಯಾವುದೇ ಪರಿಹಾರಗಳಿಲ್ಲ.

ಮಹಿಳೆಯ ಮೇಲಿನ ದೌರ್ಜನ್ಯದ ವಿರುದ್ಧ ಕ್ರಮ ಕೈಗೊಳ್ಳಬೇಕೆಂದರೆ, ಕಠಿಣ ಕಾನೂನನ್ನು ಪಾಲನೆ ಮಾಡಬೇಕಿದೆ. ಸಂತ್ರಸ್ತರಿಗೆ ನ್ಯಾಯ ದೊರಕಿಸಲು ಆರೋಪಿಗಳ ವಿರುದ್ಧ ಶೀಘ್ರಗತಿಯಲ್ಲಿ ಶಿಕ್ಷೆ ನೀಡುವ ಅಗತ್ಯವಿದ. ನಮ್ಮ ಕಾನೂನು ಅತ್ಯಂತ ಕಠಿಣವಾಗಬೇಕಿದೆ. ಈ ರೀತಿಯ ಘಟನೆಗಳು ಅಮೆರಿಕದಲ್ಲಿ ನಡೆದರೆ ಆರೋಪಿಗಳಿಗೆ 2-3 ತಿಂಗಳಿನಲ್ಲಿ ಶಿಕ್ಷೆಯಾಗುತ್ತದೆ ಹಾಗೂ ಪ್ರಕರಣವನ್ನು ಅಲ್ಲಿಗೆ ಮುಚ್ಚಿಹಾಕುತ್ತಾರೆ. ಆದರೆ, ಇಲ್ಲಿನ ಪರಿಸ್ಥಿತಿಯೇ ಬೇರೆಯಾಗಿದೆ. ಮಹಿಳೆಯ ಮೇಲೆ ದೌರ್ಜನ್ಯವೆಸಗಿದ ಬಳಿಕ ಜನರು ಏನೂ ಆಗುವುದಿಲ್ಲ ಎಂದು ತಿಳಿಯುತ್ತಾರೆ. ಇಂತಹ ಜನರಿಗೆ ಉದಾಹರಣೆಯಾಗುವಂತರ ಕಠಿಣ ನಿರ್ಧಾರ ಹಾಗೂ ಕಾನೂನನ್ನು ಸರ್ಕಾರ ಜಾರಿಗೆ ತರಬೇಕಿದೆ. ತಪ್ಪಿತಸ್ಥರಿಗೆ ಶೀಘ್ರಗತಿಯಲ್ಲಿ ಶಿಕ್ಷೆ ನೀಡಿ ಜೈಲಿಗೆ ಹಾಕಬೇಕು. ಆಗ, ನಮ್ಮ ದೇಶದಲ್ಲಿನ ಪರಿಸ್ಥಿತಿ ಬದಲಾಗುತ್ತದೆ. ಅಪರಾಧ ಮಾಡುವುದಕ್ಕೂ ಮುನ್ನ ಜನರು ಹೆದರುತ್ತಾರೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT