ಉಪೇಂದ್ರ 
ಸಿನಿಮಾ ಸುದ್ದಿ

ಬೆಂಗಳೂರಿನ ಅಂಡರ್ ವರ್ಲ್ಡ್ ಡಾನ್ ಜಯರಾಜ್ ಪಾತ್ರದಲ್ಲಿ ಉಪೇಂದ್ರ

ಮಮ್ಮಿ ಸೇವ್ ಮಿ ಚಿತ್ರದ ಯಶಸ್ಸಿನ ನಂತರ ಮತ್ತೊಂದು ಸಿನಿಮಾ ಮಾಡಲು ಹೊರಟಿರುವ ನಿರ್ದೇಶಕ ಲೋಹಿತ್ ಅಂಡರ್ ವರ್ಲ್ಡ್ ಡಾನ್ ಎಂ ಪಿ ಜಯರಾಜ್ ...

ಬೆಂಗಳೂರು: ಮಮ್ಮಿ ಸೇವ್ ಮಿ ಚಿತ್ರದ ಯಶಸ್ಸಿನ ನಂತರ ಮತ್ತೊಂದು ಸಿನಿಮಾ ಮಾಡಲು ಹೊರಟಿರುವ ನಿರ್ದೇಶಕ ಲೋಹಿತ್ ಅಂಡರ್ ವರ್ಲ್ಡ್ ಡಾನ್ ಎಂ ಪಿ ಜಯರಾಜ್ ಕುರಿತು ಸಿನಿಮಾ ಮಾಡಲು ತಯಾರಿ ನಡೆಸಿದ್ದಾರೆ.

ಚಿತ್ರದ ಕುರಿತು ಜನವರಿ 15ರ ನಂತರ ಅಧಿಕೃತ ಮಾಹಿತಿ ಹೊರಬೀಳಲಿದೆ ಎಂದು ಮೂಲಗಳು ತಿಳಿಸಿವೆ. ಅಗ್ನಿ ಶ್ರೀಧರ್ ಚಿತ್ರದಲ್ಲಿ ಪಾತ್ರ ಮಾಡಲಿದ್ದು, ಸ್ಕ್ರಿಪ್ಟ್ ತಯಾರಾಗುತ್ತಿದೆ. ಜಯರಾಜ್ ಪಾತ್ರವನ್ನು ಉಪೇಂದ್ರ ನಿರ್ವಹಿಸಲಿದ್ದಾರೆ.

ಅಂದುಕೊಂಡಂತೆ ಎಲ್ಲವೂ ಆದರೆ ಅಂದರ್ ಬಾಹರ್ ಚಿತ್ರ ನಿರ್ಮಿಸಿದ್ದ ಭಾಸ್ಕರ್ ಉಪೇಂದ್ರ ಅವರ 54ನೇ ಚಿತ್ರ ವನ್ನು ನಿರ್ಮಿಸಲಿದ್ದಾರೆ. ಚಿತ್ರದ ಬಗ್ಗೆ ಪ್ರಕಟಿಸಲು ಇದು ಸಮಯವಲ್ಲ, ಏಕೆಂದರೆ ಉಪೇಂದ್ರ ಅವರು ಹಲವು ಚಿತ್ರಗಳಿಗೆ ಸಹಿ ಮಾಡಿದ್ದಾರೆ . ಆದರೆ ಚಿತ್ರದಲ್ಲಿ ಪಾತ್ರ ಮಾಡು ಅವರು ಒಪ್ಪಿದ್ದಾರೆ.

1980ರ ದಶಕದ ಭೂಗತ ಜಗತ್ತಿನ ನೈಜ ಕಥೆಯನ್ನು ಅಗ್ನಿ ಶ್ರೀಧರ್ ಗಿಂತ ಚೆನ್ನಾಗಿ ವರ್ಣಿಸಲು ಮತ್ಯಾರಿಂದಲೂ ಸಾಧ್ಯವಿಲ್ಲ,  ಹೀಗಾಗಿ ಅವರೇ ಸಂಭಾಷಣೆ ಬರೆಯುತ್ತಿದ್ದಾರೆ.

ಉಪೇಂದ್ರ ಸದ್ಯ ನಾಗಣ್ಣ ಅವರ ಕಣ್ಣೇಶ್ವರ ಚಿತ್ರದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಅದಾದ ನಂತರ ಕೆ. ಮಾದೇಶ ಅವರ ಉಪ್ಪಿ ರುಪಿ ಹಾಗೂ ಶಶಾಂಕ್ ಮತ್ತು ಮಂಜು ಮಾಂಡವ್ಯ ಅವರ ಮುಂದಿಮ ಚಿತ್ರಗಳಿಗೆ ಉಪೇಂದ್ರ ಸಹಿಹಾಕಿದ್ದಾರೆ.

ಇನ್ನೂ ಸ್ಯಾಂಡಲ್ ವುಡ್ ನಲ್ಲಿ ನೆಲೆ ಕಂಡುಕೊಳ್ಳಲು ಯತ್ನಿಸುತ್ತಿರುವ  ಡಾನ್ ಜಯರಾಜ್ ಪುತ್ರ ಅಜಿತ್ ಜಯರಾಜ್ ತಮ್ಮ ತಂದೆಯ ಬಗ್ಗೆ ಒಂದು ಸಿನಿಮಾ ಮಾಡಬೇಕೆಂದು ಬಯಸಿದ್ದರು. ನನ್ನ ತಂದೆ ರೌಡಿಯಾಗಿದ್ದರೂ, ಹಲವರಿಗೆ ಅವರು ರಾಬಿನ್ ವುಡ್ ಆಗಿದ್ದರು ಎಂದು ಸಿಟಿ ಎಕ್ಸ್ ಪ್ರೆಸ್ ಜೊತೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದರು.

ತಾನು ಅಂಕಲ್ ಎಂದು ಭಾವಿಸಿರುವ ಅಗ್ನಿ ಶ್ರೀಧರ್ ಚಿತ್ರಕ್ಕೆ ಸಂಭಾಷಣೆ ಬರೆಯುತ್ತಿರುವುದು ತನಗೆ ಸಂತಸ ತಂದಿದೆ ಎಂದು ಅಜಿತ್ ಹೇಳಿದ್ದಾರೆ. ಇನ್ನೂ ಉಪೇಂದ್ರ ಅವರ ಚಿತ್ರ ನಿರ್ದೇಶಿಸುತ್ತಿರುವುಕ್ಕೆ ಲೋಹಿತ್ ಹರ್ಷ ವ್ಯಕ್ತ ಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT