ನಟ ಯಶ್ 
ಸಿನಿಮಾ ಸುದ್ದಿ

ಹೊಸವರ್ಷದಲ್ಲಿ 'ಕೆ ಜಿ ಎಫ್'ನಲ್ಲಿ ಯಶ್! ನಾಳೆ ನಟನ ಹುಟ್ಟುಹಬ್ಬ

2008 ರಲ್ಲಿ ಕಿರುತೆರೆಯಿಂದ ಬೆಳ್ಳಿತೆರೆಗೆ ಜಿಗಿದು 'ಮೊಗ್ಗಿನ ಮನಸು' ಸಿನೆಮಾದಲ್ಲಿ ನಟಿಸಿದ ಮೇಲೆ ನಟ ಯಶ್ ಹಿಂದಿರುಗಿ ನೋಡಿದ್ದೇ ಇಲ್ಲ. ಕನ್ನಡ ಚಿತ್ರರಂಗದ ಜನಪ್ರಿಯ ಸ್ಟಾರ್ ನಟನಾಗಿ ಬೆಳೆದಿರುವ ಇವರು ನಾಳೆ

ಬೆಂಗಳೂರು: ೨೦೦೮ ರಲ್ಲಿ ಕಿರುತೆರೆಯಿಂದ ಬೆಳ್ಳಿತೆರೆಗೆ ಜಿಗಿದು 'ಮೊಗ್ಗಿನ ಮನಸು' ಸಿನೆಮಾದಲ್ಲಿ ನಟಿಸಿದ ಮೇಲೆ ನಟ ಯಶ್ ಹಿಂದಿರುಗಿ ನೋಡಿದ್ದೇ ಇಲ್ಲ. ಕನ್ನಡ ಚಿತ್ರರಂಗದ ಜನಪ್ರಿಯ ಸ್ಟಾರ್ ನಟನಾಗಿ ಬೆಳೆದಿರುವ ಇವರು ನಾಳೆ ತಮ್ಮ ೩೧ ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ನಟಿ ರಾಧಿಕಾ ಪಂಡಿತ್ ಜೊತೆಗೆ ಇತ್ತೀಚೆಗಷ್ಟೇ ಸಪ್ತಪದಿ ತುಳಿದಿರುವ ನಟ, ಹೊಸ ವರ್ಷವನ್ನು ಪ್ರಶಾಂತ್ ನೀಲ್ ಅವರ 'ಕೆಜಿಎಫ್' ಮೂಲಕ ಪ್ರಾರಂಭಿಸಲು ತವಕದಿಂದಿದ್ದಾರೆ. 
ಭಾರಿ ಬಜೆಟ್ ನಲ್ಲಿ ನಿರ್ಮಾಣವಾಗುತ್ತಿರುವ ಈ ಬಹು ನಿರೀಕ್ಷಿತ ಸಿನೆಮಾ ಈ ತಿಂಗಳಲ್ಲಿ ಚಿತ್ರೀಕರಣ ಪ್ರಾರಂಭಿಸುವ ಸಾಧ್ಯತೆಯಿದೆ. ಈ ಸಿನೆಮಾದ ಬಗ್ಗೆ ಮಾತನಾಡುವ ನಿರ್ದೇಶಕ ಪ್ರಶಾಂತ್ "ಇದು ೧೯೭೦ ರ ಹಿನ್ನಲೆಯ ಕಥೆ ಮತ್ತು ಆ ಸಮಯದ ಪ್ರದೇಶವನ್ನು ಬಾದಾಮಿ ಮತ್ತು ಕೋಲಾರದಲ್ಲಿ ಸೃಷ್ಟಿಸುತ್ತಿದ್ದೇವೆ" ಎನ್ನುತ್ತಾರೆ.
"ಅಲ್ಲಿ ನಾವು ಮುಂದಿನ ನಾಲ್ಕೈದು ತಿಂಗಳು ಕ್ಯಾಂಪ್ ಹೂಡಲಿದ್ದೇವೆ. ಈ ವಿಷಯದ ಬಗ್ಗೆ ಸುಮಾರು ಒಂದು ವರೆ ವರ್ಷ ಅಧ್ಯಯನ ಮಾಡಿದ್ದೇವೆ. ನಿರ್ದೇಶನ ತಂಡದಲ್ಲಿ ಏಳು ಸದಸ್ಯರಿದ್ದೇವೆ" ಎಂದು ತಿಳಿಸುವ ಪ್ರಶಾಂತ್ ಈ ಸಿನೆಮಾದ ಕಥೆ ಇಂದಿಗೂ ಪ್ರಸ್ತುತ ಎನ್ನುತ್ತಾರೆ. 
ಸದ್ಯಕ್ಕೆ ಯಶ್ ಮಾತ್ರ ಮುಖ್ಯ ತಾರಾಗಣಕ್ಕೆ ಅಂತಿಮವಾಗಿದ್ದು, ಮುಖ್ಯ ಪಾತ್ರಗಳಿಗಾಗಿ ಅನಂತ ನಾಗ್, ರಮ್ಯ ಕೃಷ್ಣ ಮತ್ತು ಅಚ್ಯುತ್ ಕುಮಾರ್ ಅವರನ್ನು ಚಿತ್ರತಂಡ ಪರಿಗಣಿಸುತ್ತಿದೆ. "ಮುಖ್ಯ ತಾರಾಗಣದಲ್ಲಿ ೧೫ ಕಲಾವಿದರು ಇರಲಿದ್ದಾರೆ. ೭೦ ರ ದಶಕಕ್ಕೆ ಒಗ್ಗಿಕೊಳ್ಳುವ ಹೊಸ ಮುಖಗಳನ್ನು ಪರಿಚಯಿಸಲಿದ್ದೇವೆ" ಎಂದು ಕೂಡ ಪ್ರಶಾಂತ್ ತಿಳಿಸುತ್ತಾರೆ. ರವಿ ಬಸರೂರ್ ಸಂಗೀತ ಮತ್ತು ಭುವನ್ ಗೌಡ ಸಿನೆಮ್ಯಾಟೋಗ್ರಫಿ ಸಿನೆಮಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI ಇಂಪ್ಯಾಕ್ಟ್ ಶೃಂಗಸಭೆ ಟಾರ್ಗೆಟ್: ವಿದೇಶಿಗರಿಂದ ದಾಳಿ ಸಾಧ್ಯತೆ, ಗುಪ್ತಚರ ವರದಿ ಬೆನ್ನಲ್ಲೇ G20 ಗ್ರೇಡ್ ಸೈಬರ್ ಭದ್ರತಾ ವ್ಯವಸ್ಥೆ!

'ಕರಾವಳಿ' ಹೂಡಿಕೆ ವಿವಾದ: ಪ್ರಿಯಾಂಕ್ ಖರ್ಗೆ ಸಹಜವಾಗಿ ಹೇಳಿದ್ದಾರೆ, ಆದರೆ ದಕ್ಷಿಣ ಕನ್ನಡ ಬದಲಾಗುತ್ತಿದೆ; ಪರಮೇಶ್ವರ್

T20 World Cup: Super 8 ಪ್ರವೇಶಿಸಿ ಜಿಂಬಾಬ್ವೆ ಇತಿಹಾಸ ಸೃಷ್ಟಿ; 17 ವರ್ಷಗಳ ನಂತರ Australia ಟೂರ್ನಿನಿಂದ ಔಟ್!

News wrap of the day 17-02-2026| Muda case: CS ಶಾಲಿನಿ ರಜನೀಶ್ ವಿರುದ್ಧ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ, ಆಡಿಯೋ ಬಿಡುಗಡೆ; ನಾಯಿ, ನಾಯಕತ್ವ: ಮಹದೇವಪ್ಪ ಹೇಳಿಕೆಗೆ DK Suresh ಪ್ರತಿಕ್ರಿಯೆ ಏನು?

ಭಾರತದಲ್ಲಿ ವಯಸ್ಸಿನ ಆಧಾರದ ಮೇಲೆ 'ಸಾಮಾಜಿಕ ಜಾಲತಾಣ ನಿಷೇಧ' ಕುರಿತು ಚರ್ಚೆ: ಅಶ್ವಿನಿ ವೈಷ್ಣವ್

SCROLL FOR NEXT