ನಟ ಯಶ್ 
ಸಿನಿಮಾ ಸುದ್ದಿ

ಹೊಸವರ್ಷದಲ್ಲಿ 'ಕೆ ಜಿ ಎಫ್'ನಲ್ಲಿ ಯಶ್! ನಾಳೆ ನಟನ ಹುಟ್ಟುಹಬ್ಬ

2008 ರಲ್ಲಿ ಕಿರುತೆರೆಯಿಂದ ಬೆಳ್ಳಿತೆರೆಗೆ ಜಿಗಿದು 'ಮೊಗ್ಗಿನ ಮನಸು' ಸಿನೆಮಾದಲ್ಲಿ ನಟಿಸಿದ ಮೇಲೆ ನಟ ಯಶ್ ಹಿಂದಿರುಗಿ ನೋಡಿದ್ದೇ ಇಲ್ಲ. ಕನ್ನಡ ಚಿತ್ರರಂಗದ ಜನಪ್ರಿಯ ಸ್ಟಾರ್ ನಟನಾಗಿ ಬೆಳೆದಿರುವ ಇವರು ನಾಳೆ

ಬೆಂಗಳೂರು: ೨೦೦೮ ರಲ್ಲಿ ಕಿರುತೆರೆಯಿಂದ ಬೆಳ್ಳಿತೆರೆಗೆ ಜಿಗಿದು 'ಮೊಗ್ಗಿನ ಮನಸು' ಸಿನೆಮಾದಲ್ಲಿ ನಟಿಸಿದ ಮೇಲೆ ನಟ ಯಶ್ ಹಿಂದಿರುಗಿ ನೋಡಿದ್ದೇ ಇಲ್ಲ. ಕನ್ನಡ ಚಿತ್ರರಂಗದ ಜನಪ್ರಿಯ ಸ್ಟಾರ್ ನಟನಾಗಿ ಬೆಳೆದಿರುವ ಇವರು ನಾಳೆ ತಮ್ಮ ೩೧ ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ನಟಿ ರಾಧಿಕಾ ಪಂಡಿತ್ ಜೊತೆಗೆ ಇತ್ತೀಚೆಗಷ್ಟೇ ಸಪ್ತಪದಿ ತುಳಿದಿರುವ ನಟ, ಹೊಸ ವರ್ಷವನ್ನು ಪ್ರಶಾಂತ್ ನೀಲ್ ಅವರ 'ಕೆಜಿಎಫ್' ಮೂಲಕ ಪ್ರಾರಂಭಿಸಲು ತವಕದಿಂದಿದ್ದಾರೆ. 
ಭಾರಿ ಬಜೆಟ್ ನಲ್ಲಿ ನಿರ್ಮಾಣವಾಗುತ್ತಿರುವ ಈ ಬಹು ನಿರೀಕ್ಷಿತ ಸಿನೆಮಾ ಈ ತಿಂಗಳಲ್ಲಿ ಚಿತ್ರೀಕರಣ ಪ್ರಾರಂಭಿಸುವ ಸಾಧ್ಯತೆಯಿದೆ. ಈ ಸಿನೆಮಾದ ಬಗ್ಗೆ ಮಾತನಾಡುವ ನಿರ್ದೇಶಕ ಪ್ರಶಾಂತ್ "ಇದು ೧೯೭೦ ರ ಹಿನ್ನಲೆಯ ಕಥೆ ಮತ್ತು ಆ ಸಮಯದ ಪ್ರದೇಶವನ್ನು ಬಾದಾಮಿ ಮತ್ತು ಕೋಲಾರದಲ್ಲಿ ಸೃಷ್ಟಿಸುತ್ತಿದ್ದೇವೆ" ಎನ್ನುತ್ತಾರೆ.
"ಅಲ್ಲಿ ನಾವು ಮುಂದಿನ ನಾಲ್ಕೈದು ತಿಂಗಳು ಕ್ಯಾಂಪ್ ಹೂಡಲಿದ್ದೇವೆ. ಈ ವಿಷಯದ ಬಗ್ಗೆ ಸುಮಾರು ಒಂದು ವರೆ ವರ್ಷ ಅಧ್ಯಯನ ಮಾಡಿದ್ದೇವೆ. ನಿರ್ದೇಶನ ತಂಡದಲ್ಲಿ ಏಳು ಸದಸ್ಯರಿದ್ದೇವೆ" ಎಂದು ತಿಳಿಸುವ ಪ್ರಶಾಂತ್ ಈ ಸಿನೆಮಾದ ಕಥೆ ಇಂದಿಗೂ ಪ್ರಸ್ತುತ ಎನ್ನುತ್ತಾರೆ. 
ಸದ್ಯಕ್ಕೆ ಯಶ್ ಮಾತ್ರ ಮುಖ್ಯ ತಾರಾಗಣಕ್ಕೆ ಅಂತಿಮವಾಗಿದ್ದು, ಮುಖ್ಯ ಪಾತ್ರಗಳಿಗಾಗಿ ಅನಂತ ನಾಗ್, ರಮ್ಯ ಕೃಷ್ಣ ಮತ್ತು ಅಚ್ಯುತ್ ಕುಮಾರ್ ಅವರನ್ನು ಚಿತ್ರತಂಡ ಪರಿಗಣಿಸುತ್ತಿದೆ. "ಮುಖ್ಯ ತಾರಾಗಣದಲ್ಲಿ ೧೫ ಕಲಾವಿದರು ಇರಲಿದ್ದಾರೆ. ೭೦ ರ ದಶಕಕ್ಕೆ ಒಗ್ಗಿಕೊಳ್ಳುವ ಹೊಸ ಮುಖಗಳನ್ನು ಪರಿಚಯಿಸಲಿದ್ದೇವೆ" ಎಂದು ಕೂಡ ಪ್ರಶಾಂತ್ ತಿಳಿಸುತ್ತಾರೆ. ರವಿ ಬಸರೂರ್ ಸಂಗೀತ ಮತ್ತು ಭುವನ್ ಗೌಡ ಸಿನೆಮ್ಯಾಟೋಗ್ರಫಿ ಸಿನೆಮಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ಕರ್ನಾಟಕದ ಇತಿಹಾಸದಲ್ಲೇ ಮೊದಲು: ಪ್ರತಿಭಟಿಸುವುದಾದರೆ ಸದನದ ಬಾವಿಗೆ ಬನ್ನಿ; ವಿಪಕ್ಷ ಶಾಸಕರಿಗೆ ಸ್ಪೀಕರ್ ಆಹ್ವಾನ, BJP ಕಿಡಿ!

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸೌಧ ಆವರಣದಲ್ಲಿ ಪ್ರತಿಭಟನೆ; ಸಿಎಂ ಡಿಕೆಶಿ ವಿರುದ್ಧ ವಾಗ್ದಾಳಿ; Video

ತಪ್ಪಾದ DPR ಸಿದ್ಧಪಡಿಸುವ ಸಲಹೆಗಾರರೇ ಹೆದ್ದಾರಿ ಅಪಘಾತಗಳು ಮತ್ತು ಸಾವುಗಳಿಗೆ 'ತಪ್ಪಿತಸ್ಥರು': ನಿತಿನ್ ಗಡ್ಕರಿ ಕಠಿಣ ಕ್ರಮದ ಎಚ್ಚರಿಕೆ!

ಕೇವಲ 4 ಚಿತ್ರ ಮಾಡಿದ ನಟನಿಗೆ 'ಸರ್' ಅಂತೀರಲ್ಲ ಶಿವಣ್ಣ; ಸೆಂಚೂರಿ ಸ್ಟಾರ್ ವಿರುದ್ಧ ಕನ್ನಡಿಗರ ಬೇಸರ, Video!