ಶೃತಿ ಹರಿಹರನ್ ಮತ್ತು ನೀನಾಸಂ ಸತೀಶ 
ಸಿನಿಮಾ ಸುದ್ದಿ

ಬ್ಯೂಟಿಫ‌ುಲ್‌ ಮನಸ್ಸುಗಳು ಸಿನಿಮಾ ಮಹಿಳೆಯರಿಗೆ ಅರ್ಪಣೆ

ನೈಜ ಘಟನೆಯ ಕಥೆಯ ಮೇಲೆ ನಿರ್ದೇಶಕ ಜಯತೀರ್ಥ ಬ್ಯೂಟಿಫುಲ್ ಮನಸ್ಸುಗಳು ಎಂಬ ಸಿನಿಮಾ ನಿರ್ದೇಶಿಸಲು ...

ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಬೆಂಗಳೂರಿನಲ್ಲಿ ನಡೆದ ಸಾಮೂಹಿಕ ಲೈಂಗಿಕ ದೌರ್ಜನ್ಯ ಇನ್ನೂ ಮಾಸಿಲ್ಲ, ಇಂಥಹುದೇ ಒಂದು ನೈಜ ಘಟನೆಯ ಕಥೆಯ ಮೇಲೆ ನಿರ್ದೇಶಕ ಜಯತೀರ್ಥ ಬ್ಯೂಟಿಫುಲ್ ಮನಸ್ಸುಗಳು ಎಂಬ ಸಿನಿಮಾ ನಿರ್ದೇಶಿಸಲು ಹೊರಟಿದ್ದಾರೆ.

ನಿನಾಸಂ ಸತೀಶ್ ಮತ್ತು ಶೃತಿ ಹರಿಹರನ್ ಪ್ರಮುಖ ಪಾತ್ರಗಳಲ್ಲಿ ನಟಿಸಲಿದ್ದಾರೆ.  2013 ರಲ್ಲಿ ನಡೆದ ನೈಜ ಘಟನೆಯೊಂದರ ಕಥೆ ಆಧರಿಸಿ ಸಿನಿಮಾ ನಿರ್ಮಿಸಲಾಗುತ್ತಿದೆ. ಹೆಣ್ಣಿನ ಸೌಂದರ್ಯವೇ ಕೆಲವೊಮ್ಮೆ ಅವಳ ನೋವಿಗೂ ಕಾರಣವಾಗುತ್ತದೆ ಎಂಬ ಸತ್ಯ ಈ ಕಥೆಯಲ್ಲಿ ಹೇಳಲಾಗಿದೆ. ಇದೊಂದು ಸರಳ ಸುಂದರ ರೋಮ್ಯಾಂಟಿಕ್ ಕಥೆಯಾಗಿದೆ.

ಪರಸ್ಪರ ಪ್ರೀತಿಸುವ ಇಬ್ಬರು ಯುವಕ ಯುವತಿಯರು, ಅಹಿತಕರ ಘಟನೆಗಳಲ್ಲಿ ಸಿಲುಕಿಕೊಂಡು ತಮ್ಮ ಸಂಬಂಧದಿಂದ ದೂರವಾಗಿ ಇಬ್ಬರು ನೋವನುಭವಿಸುತ್ತಾರೆ.

ಮಂಗಳೂರಿನಲ್ಲಿ ನಡೆದ ಈ ಘಟನೆಯ ಸಂತ್ರಸ್ತರನ್ನು ನಿರ್ದೇಶಕ ಭೇಟಿ ಮಾಡಿ ಅವರಿಂದ ಎಲ್ಲಾ ಮಾಹಿತಿಗಳನ್ನು ಪಡೆದಿದ್ದಾರೆ. ಘಟನೆ ನಡೆದ ನಂತರ ಸಮಾದ ಮತ್ತು ಪೊಲೀಸರ ವಿಚಾರಣೆ ವೇಳೆ ಅನುಭವಿಸಿದ ಸಮಸ್ಯೆಗಳ ಬಗ್ಗೆ ವಿವರ ಪಡೆದು ಕೊಂಡಿದ್ದಾರೆ. ಈ ಕಥೆ ಕೇಳಿದ ಮೇಲೆ ನನಗೆ ವಿಭಿನ್ನವಾದ ಚಿತ್ರ ನಿರ್ಮಿಸಬೇಕು ಎಂದು ನನಗೆ ಅನ್ನಿಸಿದೆ ಎಂದು ಜಯತೀರ್ಥ ಹೇಳಿದ್ದಾರೆ.

ರಾಜ್ಯದ ಎಲ್ಲಾ ಮಹಿಳೆಯರಿಗೂ ಈ ಸಿನಿಮಾ ಸಮರ್ಪಿಸುವುದಾಗಿ ಹೇಳಿದ್ದಾರೆ. ಪಂಚಿಂಗ್ ಡೈಲಾಗ್ಸ್ ಗಳಿದ್ದು ಮನ ತಣಿಸುವ ಹಾಡುಗಳಿವೆ. ಭಾವನೆಗಳ ಜೊತೆಗಿನ ಈ ಕಥೆ ತೀರಾ ವಿಭಿನ್ನವಾಗಿದೆ ಎಂದು ಹೇಳಿದ್ದಾರೆ.ಸಿನಿಮಾದಲ್ಲಿ ಅಚ್ಯುತಕುಮಾರ್, ತಬಲನಾಣಿ ಪ್ರಶಾಂತ್ ಸಿದ್ದಿ ಸೇರಿದಂತೆ ಹಲವು ಹೊಸ ಕಲಾವಿದರು ಸಿನಿಮಾದಲ್ಲಿ ನಟಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT