ಸಾಹಸ ನಿರ್ದೇಶಕ ರವಿವರ್ಮ 
ಸಿನಿಮಾ ಸುದ್ದಿ

ಪುನೀತ್, ಯಶ್ ಮುಂದಿನ ಸಿನೆಮಾಗಳಿಗೆ ರವಿವರ್ಮ ಸಾಹಸ ನಿರ್ದೇಶನ

ದುನಿಯಾ ವಿಜಯ್ ನಟನೆಯ 'ಮಾಸ್ತಿ ಗುಡಿ' ಚಿತ್ರೀಕರಣದ ವೇಳೆಯಲ್ಲಿ ನಡೆದ ದುರಂತಕ್ಕೆ ಬಂಧನಕ್ಕೆ ಒಳಗಾಗಿ ಈಗ ಜಾಮೀನಿನ ಮೇಲೆ ಹೊರಗೆ ಬಂದಿರುವ ಸಾಹಸ ನಿರ್ದೇಶಕ ರವಿವರ್ಮ ತಮ್ಮ

ಬೆಂಗಳೂರು: ದುನಿಯಾ ವಿಜಯ್ ನಟನೆಯ 'ಮಾಸ್ತಿ ಗುಡಿ' ಚಿತ್ರೀಕರಣದ ವೇಳೆಯಲ್ಲಿ ನಡೆದ ದುರಂತಕ್ಕೆ ಬಂಧನಕ್ಕೆ ಒಳಗಾಗಿ ಈಗ ಜಾಮೀನಿನ ಮೇಲೆ ಹೊರಗೆ ಬಂದಿರುವ ಸಾಹಸ ನಿರ್ದೇಶಕ ರವಿವರ್ಮ ತಮ್ಮ ಸಾಹಸ ನಿರ್ದೇಶನದ ಇತ್ತೀಚಿನ ಬಾಲಿವುಡ್ ಚಿತ್ರ ಶಾರುಖ್ ಖಾನ್ ನಟನೆಯ 'ರಯೀಸ್' ಚಿತ್ರಕ್ಕೆ ಪ್ರಶಂಸೆ ಪಡೆಯುತ್ತಿದ್ದಾರೆ. 
ಈಗ ಮತ್ತೆ ಕೆಲಸಕ್ಕೆ ಹಿಂದಿರುಗಿರುವ ಸಾಹಸ ನಿರ್ದೇಶಕ, ಸದ್ಯಕ್ಕೆ ರಾಣಾ ದಗ್ಗುಬಾಟಿ ಮತ್ತು ಕಾಜಲ್ ಅಗರವಾಲ್ ತೆಲುಗು ಚಿತ್ರ 'ನೇನೆ ರಾಜು ನೇನೆ ಮಂತ್ರಿ' ಸಿನೆಮಾ ಸೆಟ್ ನಲ್ಲಿ ಕಾರ್ಯನಿರತರಾಗಿದ್ದಾರೆ. ಅಲ್ಲದೆ ಹೊಸಬರು ನಟಿಸುತ್ತಿರುವ ಮತ್ತೊಂದು ತೆಲುಗು ಸಿನೆಮಾಗೂ ಸ್ಟಂಟ್ ಗಳನ್ನೂ ನಿರ್ದೇಶಿಸಲಿದ್ದಾರೆ. 
ಈಮಧ್ಯೆ ಎ ಹರ್ಷ ನಿರ್ದೇಶಿಸಲಿರುವ ಪುನೀತ್ ರಾಜಕುಮಾರ್ ಸಿನೆಮಾಗೂ ಸಾಹಸ ನಿರ್ದೇಶನ ಮಾಡಲು ಸಹಿ ಮಾಡಿದ್ದಾರೆ. ಫೆಬ್ರವರಿ ೬ ರಿಂದ ಈ ಸಿನೆಮಾದ ಚಿತ್ರೀಕರಣ ಪ್ರಾರಂಭವಾಗಲಿದ್ದು, ಹರ್ಷ ಶೀಘ್ರದಲ್ಲೇ ಸೆಟ್ ಸೇರಲಿದ್ದಾರೆ ಎನ್ನಲಾಗಿದೆ. 
ಜೊತೆಗೆ ಪ್ರಶಾಂತ್ ನೀಲ್ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ 'ಕೆಜಿಎಫ್' ಸಿನೆಮಾಗೆ ಕೂಡ ರವಿವರ್ಮ ಸಾಹಸ ನಿರ್ದೇಶನ ಮಾಡಲಿದ್ದಾರಂತೆ. ಹೊಂಬಾಳೆ ಫಿಲಂಸ್ ನಿರ್ಮಿಸುತ್ತಿರುವ ಈ ಸಿನೆಮಾ ೭೦ ರ ದಶಕದ ಕಥೆ ಹೇಳಲಿದ್ದು, ಬಾದಾಮಿಯಲ್ಲಿ ಬಹುತೇಕ ಚಿತ್ರೀಕರಣಗೊಳ್ಳಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT