ಸಂಗ್ರಹ ಚಿತ್ರ 
ಸಿನಿಮಾ ಸುದ್ದಿ

ನಟಿ ಅಪಹರಣ ಮತ್ತು ಲೈಂಗಿಕ ಕಿರುಕುಳ ಪ್ರಕರಣ: ಕೇರಳ ಕಲಾವಿದರ ಸಂಘದಿಂದ ನಟ ದಿಲೀಪ್ ವಜಾ!

ದಕ್ಷಿಣ ಭಾರತದ ಖ್ಯಾತ ನಟಿ ಅಪಹರಣ ಮತ್ತು ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿದ್ದ ನಟ ದಿಲೀಪ್ ರನ್ನು ಕೇರಳ ಚಿತ್ರ ಕಲಾವಿದರ ಸಂಘದಿಂದ ಮಂಗಳವಾರ ವಜಾ ಮಾಡಲಾಗಿದೆ.

ತಿರುವನಂತಪುರಂ: ದಕ್ಷಿಣ ಭಾರತದ ಖ್ಯಾತ ನಟಿ ಅಪಹರಣ ಮತ್ತು ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿದ್ದ ನಟ ದಿಲೀಪ್ ರನ್ನು ಕೇರಳ ಚಿತ್ರ ಕಲಾವಿದರ ಸಂಘದಿಂದ ಮಂಗಳವಾರ ವಜಾ ಮಾಡಲಾಗಿದೆ.

ನಟಿ ಅಪಹರಣ ಮತ್ತು ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಸಂಚು ರೂಪಿಸಿದ ಆರೋಪದ ಮೇರೆಗೆ ನಿನ್ನೆಯಷ್ಟೇ ನಟ ದಿಲೀಪ್ ಅವರು ಬಂಧಿಸಿ ತೀವ್ರ ವಿಚಾರಣೆಗೊಳಪಡಿಸಲಾಗಿತ್ತು. ಇದರ ಬೆನ್ನಲ್ಲೇ ಕೇರಳ ಹಿರಿಯ ಕಲಾವಿದರು  ಹಿರಿಯ ನಟ ಮಮ್ಮುಟ್ಟಿ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದು, ಈ ವೇಳೆ ಕಲಾವಿದರ ಸಂಘದಿಂದ ವಜಾ ಮಾಡುವಂತೆ ಆಗ್ರಹಿಸಿದ್ದರು. ಅವರ ಮನವಿ ಮೇರೆಗೆ ಸತತ ಚರ್ಚೆ ಬಳಿಕ ನಟ ದಿಲೀಪ್ ಅವರನ್ನು ಕೇರಳ ಚಲನಚಿತ್ರ  ಕಲಾವಿದರ ಸಂಘ ಅಮ್ಮಾ (Association of Malayalam Movie Artists) ನಿಂದ ವಜಾ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಇನ್ನು ನಿನ್ನೆ ರಾತ್ರಿ ನಡೆದ ಭೇಟಿ ವೇಳೆ ನಟ ಮೋಹನ್ ಲಾಲ್, ನಟ ಪೃಥ್ವಿರಾಜ್ ಸೇರಿದಂತೆ ಹಲವು ಕಲಾವಿದರು ಸಭೆ ಸೇರಿ ದಿಲೀಪ್ ಅವರನ್ನು ಸಂಘದಿಂದ ವಜಾ ಮಾಡುವಂತೆ ಮನವಿ ಮಾಡಿದ್ದರು.

ನಟ ದಿಲೀಪ್ ಗೆ 14 ದಿನಗಳ ನ್ಯಾಯಾಂಗ ಬಂಧನ
ಇದೇ ವೇಳೆ ನಿನ್ನೆ ತಡರಾತ್ರಿ ವರೆಗೂ ನಟ ದಿಲೀಪ್ ರನ್ನು ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದ್ದು, ಬಳಿಕ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದಾರೆ. ಈ ವೇಳೆ ನ್ಯಾಯಾಧೀಶರು ಆರೋಪಿ ದಿಲೀಪ್ ರನ್ನು 14 ದಿನಗಳ  ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಕಳೆದ ಫೆಬ್ರವರಿಯಲ್ಲಿ ಚಿತ್ರೀಕರಣ ಮುಗಿಸಿ ರೂಮಿಗೆ ಆಗಮಿಸುತ್ತಿದ್ದ ನಟಿಯನ್ನು ಆಕೆಯ ಕಾರುಚಾಲಕ ಸಹಾಯದಿಂದ ಅಪಹರಿಸಿ, ಚಲಿಸುತ್ತಿದ್ದ ಕಾರಿನಲ್ಲೇ ಆಕೆಗೆ ಲೈಂಗಿಕ ಕಿರುಕುಳ ನೀಡಲಾಗಿತ್ತು. ಈ ವಿಚಾರ ವ್ಯಾಪಕ  ಸುದ್ದಿಯಾದ ಬೆನ್ನಲ್ಲೇ ವ್ಯಾಪಕ ಟೀಕೆಗೂ ಗುರಿಯಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT