ಸಂಗ್ರಹ ಚಿತ್ರ 
ಸಿನಿಮಾ ಸುದ್ದಿ

ಜನ್ಮ ದಿನ ಸಂಭ್ರಮಾಚರಣೆಗೆ ಸುದೀಪ್ ಗುಡ್ ಬೈ ಹೇಳಿದ್ದು ಯಾಕೆ ಗೊತ್ತಾ!

ಇನ್ನು ಮುಂದೆ ತಾವು ಜನ್ಮ ದಿನಾಚರಣೆ ಆಚರಣೆ ಮಾಡಿಕೊಳ್ಳುವುದಿಲ್ಲ ಎಂದು ನಟ ಕಿಚ್ಚಾ ಸುದೀಪ್ ಟ್ವೀಟ್ ಮಾಡಿದ್ದಾರೆ.

ಬೆಂಗಳೂರು: ಇನ್ನು ಮುಂದೆ ತಾವು ಜನ್ಮ ದಿನಾಚರಣೆ ಆಚರಣೆ ಮಾಡಿಕೊಳ್ಳುವುದಿಲ್ಲ ಎಂದು ನಟ ಕಿಚ್ಚಾ ಸುದೀಪ್ ಟ್ವೀಟ್ ಮಾಡಿದ್ದಾರೆ.

ಈ ಬಗ್ಗೆ ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿರುವ ನಟ ಕಿಚ್ಚಾ ಸುದೀಪ್, "ಈವರೆಗೂ ನನ್ನ ಜನ್ಮದಿನವನ್ನು ನಿಮ್ಮದೇ ಜನ್ಮದಿನವೆಂಬಂತೆ ಆಚರಿಸಿದ್ದೀರಿ. ಎರಡು ದಶಕಗಳ ಕಾಲ ನೀವು ತೋರಿದ ಈ ಪ್ರೀತಿಗೆ  ಧನ್ಯವಾದಗಳು. ನೀವು ಕಷ್ಟಪಟ್ಟು ದುಡಿದು ಸಂಪಾದಿಸಿದ ಹಣದಲ್ಲಿ ಕೇಕ್, ಉಡುಗೊರೆ ತಂದಿದ್ದನ್ನು, ಶುಭಾಶಯ ಕೋರಲು ಹತ್ತಾರು ಮೈಲಿಗಳಿಂದ ಬಂದಿದ್ದನ್ನೂ ಗಮನಿಸಿದ್ದೇನೆ. ನಮ್ಮ ಮನೆ ಸುತ್ತಮುತ್ತ ವಾತಾವರಣವನ್ನು  ಸಿಂಗರಿಸಲು ಸಾಕಷ್ಟು ಹಣ ಖರ್ಚು ಮಾಡಿದ್ದೀರಿ. ಆ ಎಲ್ಲ ಹಣವನ್ನು ಅಗತ್ಯ ಇರುವವರಿಗೆ ನೀಡಿ ಎಂದು ನಿಮ್ಮಲ್ಲಿ ಮನವಿ ಮಾಡಿಕೊಳ್ಳುತ್ತೇನೆ. ಇದರಿಂದ ಕಷ್ಟದಲ್ಲಿರುವ ಹಲವರ ಬದುಕು ಉಳಿಯುತ್ತದೆ. ಇದೇ ನೀವು ನನಗೆ  ಕೊಡಬಹುದಾದ ಅತ್ಯುತ್ತಮ ಗಿಫ್ಟ್ ಇದೇ ಎಂದು ಹೇಳಿಕೊಂಡಿದ್ದಾರೆ.

ಅಂತೆಯೇ ಇನ್ಮುಂದೆ ಬರ್ತ್ ಡೇ ಆಚರಿಸಿಕೊಳ್ಳಲೇ ಬಾರದು ಎಂದು ಸುದೀಪ್ ನಿರ್ಧರಿಸಿದ್ದು, ಜನ್ಮದಿನದಂದು ತಾವು ಮನೆಯಲ್ಲೇ ಇರುವುದಿಲ್ಲ. ‘ನನ್ನ ಈ ಮಾತಿಗೆ ನೀವೆಲ್ಲ ಗೌರವ ನೀಡುತ್ತೀರಿ ಎಂಬ ನಂಬಿಕೆ ನನಗಿದೆ. ಆ ದಿನ  ನಿಮ್ಮ ಸುತ್ತಮುತ್ತ ಇರುವವರನ್ನು ನೋಡಿ. ನಿಜಕ್ಕೂ ಕಷ್ಟದಲ್ಲಿರುವವರಿಗೆ ಸಹಾಯ ಮಾಡಿ’ ಎನ್ನುವ ಮೂಲಕ ಇಡೀ ಅಭಿಮಾನಿ ಬಳಗಕ್ಕೆ ಕಿವಿಮಾತು ಹೇಳಿದ್ದಾರೆ.

ಸೆಪ್ಟೆಂಬರ್ 2 ಸುದೀಪ್ ಅವರ ಜನುಮ ದಿನವಾಗಿದ್ದು, ಜನ್ಮ ದಿನಾಚರಣೆಗೆ ಕಿಚ್ಚನ ಅಭಿಮಾನಿಗಳ ಸಿದ್ಧತೆಯಲ್ಲಿ ತೊಡಗಿರುವಾಗಲೇ ಸುದೀಪ್ ಅವರ ಈ ಟ್ವೀಟ್ ಅಭಿಮಾನಿಗಳಲ್ಲಿ ನಿರಾಶೆ ಕಾರಣವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

'Chhatron Ki Goonj' ಕಾರ್ಯಕ್ರಮದ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ ಜೂಟ್ ಕಿ ಗೂಂಜ್ ವೆಬ್​ಸೈಟ್!

ನೇಪಾಳದಲ್ಲಿ ಭೀಕರ ಪ್ರವಾಹ: ಬಿಹಾರ, ಉತ್ತರ ಪ್ರದೇಶದಲ್ಲಿ NDRF ಹೈ ಅಲರ್ಟ್, ನದಿ ಪಾತ್ರದಲ್ಲಿ ಕಟ್ಟೆಚ್ಚರ

ನಿನ್ನ ತಲೆ ಕಡಿತೀವಿ: ಈದ್ ಮೆರವಣಿಗೆ ವೇಳೆ ಪುನೀತ್ ಕೆರೆಹಳ್ಳಿ ವಿರುದ್ಧ ಘೋಷಣೆ; ಹಿಂದೂ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ!

‘ಯಾರು ಏನು ಧರಿಸಬೇಕು ಎಂಬುದನ್ನು ಕೋರ್ಟ್‌ ನಿರ್ಧರಿಸಬಾರದು’: ಹಿಜಾಬ್‌ ವಿವಾದದ ಕುರಿತು BJP ನಾಯಕ Syed Zafar Islam ಆಕ್ಷೇಪ