ಒಂದು ಮೊಟ್ಟೆ ಕಥೆ ಚಿತ್ರದ ಫೋಟೋ 
ಸಿನಿಮಾ ಸುದ್ದಿ

ಒಂದು ಮೊಟ್ಟೆ ಕಥೆ ಚಿತ್ರದ ರಿಮೇಕ್ ಹಕ್ಕುಗಳಿಗೆ ಭಾರೀ ಡಿಮ್ಯಾಂಡ್!

ಸ್ಯಾಂಡಲ್ವುಡ್ ನಲ್ಲಿ ಕಳೆದ ವಾರ ಬಿಡುಗಡೆಯಾಗಿದ್ದ ಒಂದು ಮೊಟ್ಟೆ ಕಥೆ ಚಿತ್ರಕ್ಕೆ ವಿಮರ್ಶಕರಿಂದ ಹಾಗೂ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದು ಇದೀಗ ಚಿತ್ರದ ರಿಮೇಕ್...

ಸ್ಯಾಂಡಲ್ವುಡ್ ನಲ್ಲಿ ಕಳೆದ ವಾರ ಬಿಡುಗಡೆಯಾಗಿದ್ದ ಒಂದು ಮೊಟ್ಟೆ ಕಥೆ ಚಿತ್ರಕ್ಕೆ ವಿಮರ್ಶಕರಿಂದ ಹಾಗೂ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದು ಇದೀಗ ಚಿತ್ರದ ರಿಮೇಕ್ ಹಕ್ಕುಗಳಿಗೆ ಬೇಡಿಕೆ ಹೆಚ್ಚಾಗಿದೆ. 
ಕಡಿಮೆ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದ ಒಂದು ಮೊಟ್ಟೆ ಕಥೆ ಚಿತ್ರ ಜನಪ್ರಿಯತೆ ಗಳಿಸಿದ್ದು ಇದೀಗ ಮಲ್ಟಿಪ್ಲೆಕ್ಸ್ ಮತ್ತು ಚಿತ್ರಮಂದಿರಗಳಲ್ಲಿ ಶೋಗಳನ್ನು ಹೆಚ್ಚಿಸಿಕೊಂಡಿದೆ. ಹೆಚ್ಚುವರಿ 25 ಚಿತ್ರಮಂದಿರಗಳನ್ನು ಹೆಚ್ಚಿಸಿಕೊಂಡಿದ್ದು ಒಟ್ಟಾರೆ 42 ಚಿತ್ರಮಂದಿರಗಳಲ್ಲಿ ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿದೆ. ಇನ್ನು ಚಿತ್ರರಂಗ ಸ್ಟಾರ್ ನಟರಾದ ಪುನೀತ್ ರಾಜ್ ಕುಮಾರ್, ಗಣೇಶ್, ರಕ್ಷಿತ್ ಶೆಟ್ಟಿ ಮತ್ತು ರಿಶಭ್ ಶೆಟ್ಟಿ ಸೇರಿದಂತೆ ಹಲವರು ಚಿತ್ರವನ್ನು ನೋಡಿ ಚಿತ್ರದ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. 
ಇನ್ನು ಬೆಂಗಳೂರಿನ ಸಂಪಿಗೆ ಮತ್ತು ಶಾರದ ಚಿತ್ರಮಂದಿರಗಳಲ್ಲಿ ಹೆಚ್ಚಾಗಿ ತಮಿಳು ಚಿತ್ರಗಳು ಬಿಡುಗಡೆಯಾಗುತ್ತಿತ್ತು. ಒಂದು ಮೊಟ್ಟೆ ಕಥೆ ಚಿತ್ರದ ಯಶಸ್ಸಿನಿಂದಾಗಿ ಈ ಎರಡು ಥಿಯೇಟರ್ ಗಳಲ್ಲಿ ಚಿತ್ರ ಬಿಡುಗಡೆಯಾಗಿ ಉತ್ತಮ ಗಳಿಕೆ ಮಾಡುತ್ತಿದೆ. 
ಚಿತ್ರದ ನಿರ್ದೇಶಕ ರಾಜ್ ಬಿ ಶೆಟ್ಟಿ ಅವರು ತಮ್ಮ ಚಿತ್ರವನ್ನು ತಮಿಳುನಾಡಿನ ಕೆಲ ಗಣ್ಯರಿಗೆ ಮತ್ತು ವಿತರಕರಿಗೆ ಚಿತ್ರವನ್ನು ತೋರಿಸಿದ್ದು ಅವರಿಂದ ಉತ್ತಮ ಪ್ರತಿಕ್ರಿಯೆ ಬಂದಿದ್ದು ಕಾಲಿವುಡ್ ನಲ್ಲಿ ಚಿತ್ರವನ್ನು ರಿಮೇಕ್ ಮಾಡಲು ಬಯಸಿದ್ದಾರೆ ಎಂದು ನಿರ್ದೇಶಕರು ಖುಷಿ ಹಂಚಿಕೊಂಡಿದ್ದಾರೆ. 
ಚಿತ್ರವನ್ನು ಲೂಸಿಯಾ ಖ್ಯಾತಿಯ ಪವನ್ ಕುಮಾರ್ ನಿರ್ಮಿಸಿದ್ದು ನಿರ್ದೇಶಕ ರಾಜ್ ಬಿ ಶೆಟ್ಟಿ ಸಹ ಚಿತ್ರದಲ್ಲಿ ಒಂದು ಪಾತ್ರದಲ್ಲಿ ಅಭಿನಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT