ಕಮಲ್ ಹಾಸನ್ 
ಸಿನಿಮಾ ಸುದ್ದಿ

ತೀವ್ರ ಸಂಚಲನ ಮೂಡಿಸಿದೆ ಕಮಲ್ ಹಾಸನ್ ರಾಜಕೀಯ ಪ್ರವೇಶದ ಟ್ಟೀಟ್

ರಾಜಕೀಯ ಪ್ರವೇಶದ ಬಗ್ಗೆ ನಟ ಕಮಲ್ ಹಾಸನ್ ಮಾಡಿರುವ ಟ್ವೀಟ್ ಸಾಮಾಜಿಕ ಜಾಲತಾಣದಲ್ಲಿ ಬೆಂಕಿ ಹೊತ್ತಿಸಿದೆ. ತಮಿಳು ಕವಿತೆಯ ಮೂಲಕ ಮಾಡಿರುವ...

ಚೆನ್ನೈ: ರಾಜಕೀಯ ಪ್ರವೇಶದ ಬಗ್ಗೆ ನಟ ಕಮಲ್ ಹಾಸನ್ ಮಾಡಿರುವ ಟ್ವೀಟ್ ಸಾಮಾಜಿಕ ಜಾಲತಾಣದಲ್ಲಿ ಬೆಂಕಿ ಹೊತ್ತಿಸಿದೆ. ತಮಿಳು ಕವಿತೆಯ ಮೂಲಕ ಮಾಡಿರುವ ಟ್ವೀಟ್ ತೀವ್ರ ಸಂಚಲನ ಮೂಡಿಸಿದೆ. 
ನಾನು ಮನಸ್ಸು ಮಾಡಿದರೇ ನಾನೇ ಮುಖ್ಯಮಂತ್ರಿ, ನಾಯಕ, ಎಂಬ ಸಾಲುಗಳು ಕಮಲ್ ಹಾಸನ್ ರಾಜಕೀಯಕ್ಕೆ ಎಂಟ್ರಿ ನೀಡುತ್ತಾರೆಯೇ ಎಂಬ ಪ್ರಶ್ನೆ ಜನರಲ್ಲಿ ಮೂಡುವಂತೆ ಮಾಡಿದೆ,
ಇಲ್ಲಿ ಯಾರು ರಾಜರಲ್ಲ, ನಾವು ಅವರಂತೆ ರಾಜರಲ್ಲ, ಆದರು ಹೊಸ ಕ್ರಾಂತಿ ತರೋಣ, ಹೋರಾಡುವುದಾದರೇ ನಾನೊಬ್ಬ ಸೈನಿಕ. ನಾನು ನಿರ್ಧರಿಸಿದರೇ  ನಾನೇ ಮುಖ್ಯಮಂತ್ರಿ, ತಲೆ ಬಾಗಿದ ತಕ್ಷಣ ನಾನೇನು ಗುಲಾಮನೇ? ಕಿರೀಟವಿಲ್ಲದಿದ್ದರೂ ನಾನೇನು ಎಲ್ಲಾ ಕಳೆದು ಕೊಂಡವನೇ ದಾರಿ ಹುಡುಕುವವನಿಗೆ ದಾರಿ ಕಾಣುವುದಿಲ್ಲ,  ನನ್ನ ಜೊತೆ ಬನ್ನಿ ಸ್ನೇಹಿತರೇ, ಮತಾಂಧತೆ ಮೂಢ ನಂಬಿಕೆ ಪ್ರಯತ್ನಗಳನ್ನು ತಡೆಯೋಣ ಎಂದು ಮಂಗಳವಾರ ರಾತ್ರಿ ಕಮಲ್ ಹಾಸನ್ ಟ್ವೀಟ್ ಮಾಡಿದ್ದಾರೆ.
ಇತ್ತೀಚೆಗೆ ತಮಿಳುನಾಡಿನ ಕೆಲ ರಾಜಕಾರಣಿಗಳ ವಿರುದ್ಧ ಕಮಲ್ ಹಾಸನ್ ಭ್ರಷ್ಟಾಚಾರ ಆರೋಪ ಮಾಡಿದ್ದರು, ಜೊತೆಗೆ ತಮಿಳು ಬಿಗ್ ಬಾಸ್ ಸ್ಪರ್ಧಿಗಳ ವಿರುದ್ಧವೂ ಕಮಲ್ ಹಾಸನ್ ಹರಿಹಾಯ್ದಿದ್ದರು, ಈ ಹಿನ್ನೆಲೆಯಲ್ಲಿ ತಮಿಳುನಾಡಿನ ಆಡಳಿತಾರೂಢ ಸರ್ಕಾರದ ಸಚಿವರೊಬ್ಬರು ತಾಕತ್ತಿದ್ದರೇ ಕಮಲ್ ಹಾಸನ್ ರಾಜಕೀಯ ಪ್ರವೇಶಿಸಲಿ ಎಂದು ಸವಾಲು ಹಾಕಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT