ನಟ ಭುವನ್ ಹಾಗೂ ಪ್ರಥಮ್ 
ಸಿನಿಮಾ ಸುದ್ದಿ

ಚಿತ್ರೀಕರಣದ ವೇಳೆ ಮಾರಾಮಾರಿ: ಸಹನಟ ಭುವನ್ ತೊಡೆ ಕಚ್ಚಿದ ಪ್ರಥಮ್

ಖಾಸಗಿ ವಾಹಿನಿಯೊಂದರ ಧಾರಾವಾಹಿ ಚಿತ್ರೀಕರಣದ ವೇಳೆ ನಟ ಭುವನ್ ಹಾಗೂ 'ಬಿಗ್ ಬಾಸ್' ಖ್ಯಾತಿ ಪ್ರಥಮ್ ನಡುವೆ ಮಾರಾಮಾರಿ ನಡೆದಿದ್ದು, ಪ್ರಥಮ್ ನನ್ನ ತೊಡೆ ಕಚ್ಚಿದ್ದಾರೆಂದು ಭುವನ್ ಸೋಮವಾರ ಆರೋಪ ಮಾಡಿದ್ದಾರೆ...

ಬೆಂಗಳೂರು: ಖಾಸಗಿ ವಾಹಿನಿಯೊಂದರ ಧಾರಾವಾಹಿ ಚಿತ್ರೀಕರಣದ ವೇಳೆ ನಟ ಭುವನ್ ಹಾಗೂ 'ಬಿಗ್ ಬಾಸ್' ಖ್ಯಾತಿ ಪ್ರಥಮ್ ನಡುವೆ ಮಾರಾಮಾರಿ ನಡೆದಿದ್ದು, ಪ್ರಥಮ್ ನನ್ನ ತೊಡೆ ಕಚ್ಚಿದ್ದಾರೆಂದು ಭುವನ್ ಸೋಮವಾರ ಆರೋಪ ಮಾಡಿದ್ದಾರೆ. 

ಖಾಸಗಿ ವಾಹಿನಿಯೊಂದರಲ್ಲಿ ಪ್ರಸಾರವಾಗುತ್ತಿರುವ ಸಂಜು ಮತ್ತು ನಾನು ಧಾರಾವಾಹಿಯಲ್ಲಿ ಬಿಗ್ ಬಾಸ್ ಖ್ಯಾತಿಯ ಪ್ರಥಮ್, ಭುವನ್ ಮತ್ತು ಸಂಜನಾ ನಟಿಸುತ್ತಿದ್ದಾರೆ. ಧಾರಾವಹಿಯ ಚಿತ್ರೀಕರಣದ ವೇಳೆ ಭುವನ್ ಹಾಗೂ ಪ್ರಥಮ್ ನಡುವೆತ ಮಾರಾಮಾರಿ ನಡೆದಿದ್ದು, ಇದೀಗ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ. 

ಶನಿವಾರ ಸಂಜೆ ಧಾರಾವಾಹಿಯ ಚಿತ್ರೀಕರಣ ನಡೆಯುತ್ತಿದ್ದ ವೇಳೆ ವಿನಾಕಾರಣ ಜಗಳ ತೆಗೆದ ಪ್ರಥಮ್ ಅವರು ನನ್ನ ತೊಡೆ ಕಚ್ಚಿ ಗಾಯಗೊಳಿಸಿದ್ದಾರೆಂದು ಭುವನ್ ಅವರು ಆರೋಪ ಮಾಡಿದ್ದಾರೆ.
 
ಚಿತ್ರೀಕರಣದ ವೇಳೆ ಪ್ರಥಮ್ ಅವರು ಸಂಜನಾ ಅವರ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ. ಈ ವೇಳೆ ಆಕ್ರೋಶಗೊಂಡಿರುವ ಭುವನ್ ಅವರು ಆ ರೀತಿ ಮಾತನಾಡದಂತೆ ತಾಕೀತು ಮಾಡಿದ್ದಾರೆ. ನಂತರ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಜಗಳ ವಿಕೋಫಕ್ಕೆ ತಿರುಗಿದೆ. ನಂತರ ಪ್ರಥಮ್ ಅವರು ಭುವನ್ ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದು, ಹಲ್ಲೆ ನಡೆಸಿದ್ದಾರೆ. ಕೂಡಲೇ ಸ್ಥಳದಲ್ಲಿದ್ದ ಚಿತ್ರೀಕರಣದ ಸಿಬ್ಬಂದಿಗಳು ಮಧ್ಯೆ ಪ್ರವೇಶ ಮಾಡಿದ್ದಾರೆ. ಆದರೂ ಸುಮ್ಮನಾಗದ ಪ್ರಥಣ್ ಅವರು ಭುವನ್ ಅವರ ತೊಡೆಗೆ ಕಚ್ಚಿದ್ದಾರೆಂದು ಮೂಲಗಳು ಮಾಹಿತಿ ನೀಡಿವೆ. 

ಇನ್ನು ಭುವನ್ ಅವರ ಆರೋಪಕ್ಕೆ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ ಪ್ರಥಣ್ ಅವರು, ನಾನು ಅಪ್ಪಟ ಸಸ್ಯಹಾರಿ, ನಾನು ಯಾರಿಗೂ ಕಚ್ಚಿಲ್ಲ. ಮೊದಲು ಭುವನ್ ಅವರೇ ನನ್ನ ಮೇಲೆ ಕೈ ಮಾಡಿದ್ದು, ಅಲ್ಲಿದ್ದ ಸಿಬ್ಬಂದಿಗಳು ನಮ್ಮ ಜಗಳ ಬಿಡಿಸಿದ್ದರು ಎಂದು ಹೇಳಿಕೊಂಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT