ಭರ್ಜರಿ 
ಸಿನಿಮಾ ಸುದ್ದಿ

ಭರವಸೆ ಮೂಡಿಸಿರುವ ದೃವ ಸರ್ಜಾ ನಟನೆಯ ಭರ್ಜರಿ ಚಿತ್ರ

ದೃವ ಸರ್ಜ ನಟನೆಯ ಮೂರನೇ ಚಿತ್ರ ಭರ್ಜರಿ ಹಲವು ಅಡೆತಡೆಗಳನ್ನು ಎದುರಿಸಿದ್ದರೂ, ಆವೇಗ ಕಳೆದುಕೊಂಡಿರಲಿಲ್ಲ. ಚೇತನ್ ಕುಮಾರ್ ನಿರ್ದೇಶನದ ಚಿತ್ರ ಈಗ ವಿತರಕರ ಕಾರಣದಿಂದ ಸುದ್ದಿಯಲ್ಲಿದೆ.

ದೃವ ಸರ್ಜ ನಟನೆಯ ಮೂರನೇ ಚಿತ್ರ ಭರ್ಜರಿ ಹಲವು ಅಡೆತಡೆಗಳನ್ನು ಎದುರಿಸಿದ್ದರೂ, ಆವೇಗ ಕಳೆದುಕೊಂಡಿರಲಿಲ್ಲ. ಚೇತನ್ ಕುಮಾರ್ ನಿರ್ದೇಶನದ ಚಿತ್ರ ಈಗ ವಿತರಕರ ಕಾರಣದಿಂದ ಸುದ್ದಿಯಲ್ಲಿದೆ. 
ಭರ್ಜರಿ ಚಿತ್ರದ ವಿತರಣೆಯ ಹಕ್ಕು ಪಡೆದಿರುವ ವಿತರಕ ಪ್ರಸಾದ್, ಅನಾರೋಗ್ಯದ ಕಾರಣ ಚಿತ್ರರಂಗದಿಂದ ದೂರ ಉಳಿದಿದ್ದರು. ಈಗ ಭರ್ಜರಿ ಚಿತ್ರದ ಮೂಲಕ ಚಿತ್ರೋದ್ಯಮಕ್ಕೆ ವಾಪಸ್ ಬಂದಿರುವ ಪ್ರಸಾದ್, ಚಿತ್ರದ ವಿತರಣೆ ಹಕ್ಕನ್ನು ಪಡೆದಿದ್ದು, ಅದರಿಂದ ಬರುವ ಆದಾಯದಲ್ಲಿ ಕಿಡ್ನಿ ಕಸಿ ಮಾಡಿಸಿಕೊಳ್ಳಲು ನಿರ್ಧರಿಸಿದ್ದಾರೆ. 
ಈ ಬಗ್ಗೆ ಸಿಟಿ ಎಕ್ಸ್ ಪ್ರೆಸ್ ನೊಂದಿಗೆ ಮಾತನಾಡಿರುವ ಅವರು, ಕಿಡ್ನಿ ವೈಫಲ್ಯ ಉಂಟಾಗಿರುವುದರಿಂದ ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದೇನೆ. ಖಿನ್ನತೆಯಿಂದ ಹೊರಬರಬೇಖಿದೆ. ಸಿನಿಮಾ ಇಲ್ಲದೇ ನಾನು ಒಂಟಿ ಎಂಬ ಭಾವನೆ ಕಾಡುತ್ತಿದೆ ಹಾಗೂ ಮತ್ತೊಬ್ಬರು ನೀಡುವ ಹಣದಿಂದ ಕಿಡ್ನಿ ಕಸಿ ಮಾಡಿಸಿಕೊಳ್ಳುವುದು ನನಗೆ ಇಷ್ಟವಿಲ್ಲ. ಆದ್ದರಿಂದ ಈ ಚಿತ್ರದ ವಿತರಣೆ ಹಕ್ಕನ್ನು ಪಡೆದಿದ್ದೇನೆ. ದೃವ ಸರ್ಜಾ ಅವರ ಭರ್ಜರಿ ಸಿನಿಮಾ ಉತ್ತಮ ಪ್ರದರ್ಶನ ಕಾಣಲಿದೆ ಎಂಬ ಭರವಸೆ ಇದೆ. ನಿರ್ಮಾಪಕ ಶ್ರೀನಿವಾಸ್ ಹಣಹೂಡಿರುವ ಬಾಷಾ ಈ ಅವಕಾಶ ನೀಡುವ ಮೂಲಕ ಸಹಕರಿಸಿ, ಉತ್ತೇಜನ ನೀಡಿದ್ದಾರೆ ಎಂದು ಪ್ರಸಾದ್ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

SCROLL FOR NEXT