ಹರೀಶ್ 
ಸಿನಿಮಾ ಸುದ್ದಿ

ಕೊಲೆ ಯತ್ನ ಪ್ರಕರಣ: 'ಸ್ಟೈಲ್ ರಾಜ' ಚಿತ್ರದ ನಿರ್ದೇಶಕ ಸೇರಿ ನಾಲ್ವರ ಬಂಧನ

ಕೊಲೆ ಯತ್ನ ಹಾಗೂ ಕೊಲೆ ಸಂಚು ರೂಪಿಸಿದ ಆರೋಪದ ಮೇಲೆ 'ಸ್ಟೈಲ್​ ರಾಜ' ಚಿತ್ರದ ನಿರ್ದೇಶಕ ಹರೀಶ್ ಸೇರಿದಂತೆ...

ಬೆಂಗಳೂರು: ಕೊಲೆ ಯತ್ನ ಹಾಗೂ ಕೊಲೆ ಸಂಚು ರೂಪಿಸಿದ ಆರೋಪದ ಮೇಲೆ 'ಸ್ಟೈಲ್​ ರಾಜ' ಚಿತ್ರದ ನಿರ್ದೇಶಕ ಹರೀಶ್ ಸೇರಿದಂತೆ ನಾಲ್ವರನ್ನ ಸಿಸಿಬಿ ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ಚಿತ್ರಕ್ಕಾಗಿ ಹಣ ನೀಡಿದ್ದ ಅಶೋಕ್ ಎಂಬುವವರನ್ನು ಕೊಲೆ ಮಾಡಲು ಯತ್ನಿಸಿದ ಹಾಗೂ ಕೊಲೆಗೆ ಸುಪಾರಿ ಕೊಟ್ಟ ಆರೋಪದ ಮೇಲೆ ಸಿನಿಮಾ ನಿರ್ದೇಶಕ ಹರೀಶ್,  ರಾಜಶೇಖರ್, ಸತೀಶ್​ ಹಾಗೂ ಸುರೇಶ್ ಎಂಬುವರನ್ನು ಪೊಲೀಸರು ಬಂಧಿಸಿದ್ದು, ತಲೆಮರೆಸಿಕೊಂಡಿರುವ ಮತ್ತೋರ್ವ ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಅಶೋಕ್ ಅವರ ಸಂಬಂಧಿಕರ ಬಳಿ ನಿರ್ದೇಶಕ ಹರೀಶ್ ತಮ್ಮ ಚಿತ್ರದ ಕೆಲಸಗಳಿಗಾಗಿ 3.5 ಲಕ್ಷ ಹಣವನ್ನು ಪಡೆದಿದ್ದರಂತೆ. ಸಿನಿಮಾ ಬಿಡುಗಡೆಯಾದರು, ಹಣ ಮಾತ್ರ ಪಾವತಿಸಿರಲಿಲ್ಲ. ಹಣ ಕೇಳಿದರೆ ತಪ್ಪಿಸಿಕೊಂಡು ತಿರುಗುತ್ತಿದ್ದನು. ಹೀಗಾಗಿ, ಹಣಕ್ಕಾಗಿ ಪೀಡಿಸುತ್ತಿದ್ದ ಅಶೋಕ್ ಅವರನ್ನ ಸುಪಾರಿ ಕೊಟ್ಟು ಕೊಲೆ ಮಾಡುವುದಕ್ಕೆ ಸಂಚು ರೂಪಿಸಿದ್ದರು ಎನ್ನಲಾಗಿದೆ.
ಇತ್ತೀಚೆಗೆ ರೌಡಿ ಸತೀಶ್ ಮತ್ತು ಅವರ ತಂಡ ಅಶೋಕ್ ಮೇಲೆ ಹಲ್ಲೆ ಮಾಡಿ ಎಸ್ಕೇಪ್​ ಆಗಿದ್ದರು. ಈ ಸಂಬಂಧ ಅಶೋಕ್ ಅವರು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಂದು ನಾಲ್ವರನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT