'ಕಾಲ' ಸಿನೆಮಾದ ಸ್ಟಿಲ್ 
ಸಿನಿಮಾ ಸುದ್ದಿ

'ಕಾಲ' ಮುಂಬೈ ಚಿತ್ರೀಕರಣ ಮುಗಿಸಿದ ರಜನಿಕಾಂತ್

ಭೂಗತ ಲೋಕದ ತಮಿಳು ಸಿನೆಮಾ 'ಕಾಲ'ದ ಮುಂಬೈ ಭಾಗದ ಚಿತ್ರೀಕರಣವನ್ನು ಸೂಪರ್ ಸ್ಟಾರ್ ರಜನಿಕಾಂತ್ ಪೂರ್ಣಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಚೆನ್ನೈ: ಭೂಗತ ಲೋಕದ ತಮಿಳು ಸಿನೆಮಾ 'ಕಾಲ'ದ ಮುಂಬೈ ಭಾಗದ ಚಿತ್ರೀಕರಣವನ್ನು ಸೂಪರ್ ಸ್ಟಾರ್ ರಜನಿಕಾಂತ್ ಪೂರ್ಣಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. 
"ರಜನಿ ಸರ್ ತಮ್ಮ ಭಾಗವನ್ನು ಸಂಪೂರ್ಣಗೊಳಿಸಿದ್ದು, ಅವರು ಈ ವಾರ ಚೆನ್ನೈಗೆ ಹಿಂದಿರುಗಲಿದ್ದಾರೆ. ಅವರು ಕಳೆದ ಎರಡು ವಾರಗಳವರೆಗೆ ವಿರಾಮವಿಲ್ಲದೆ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದರು. ಉಳಿದ ಚಿತ್ರತಂಡ ಇನ್ನೊಂದು ವಾರ ಚಿತ್ರೀಕರಣದಲ್ಲಿ ಭಾಗಿಯಾಗಲಿದೆ" ಎಂದು ಚಿತ್ರತಂಡದ ಮೂಲಗಳು ತಿಳಿಸಿವೆ. 
ಎರಡನೇ ಹಂತದ ಚಿತ್ರೀಕರಣ ಚೆನ್ನೈನಲ್ಲಿ ತಲೆ ಎತ್ತಿರುವ ಧರವಿ ಸ್ಲಮ್ ಸೆಟ್ ನಲ್ಲಿ ನಡೆಯಲಿದೆ. 
"ರಜನಿ ಸರ್ ಇದರಲ್ಲಿ ಸ್ಲಮ್ ದೊರೆಯಾಗಿ ಕಾಣಿಸಿಕೊಳ್ಳಲಿದ್ದಾರೆ. ಮೊದಲು ಇದನ್ನು ಧರವಿಯಲ್ಲೇ ಶೂಟ್ ಮಾಡುವ ಯೋಜನೆ ಇತ್ತು ಆದರೆ ಇದು ಅಸಾಧ್ಯ ಎಂದು ನಮಗೆ ನಂತರ ಅರಿವಾಯಿತು. ಆದುದರಿಂದ ಚೆನ್ನೈನಲ್ಲಿಯೇ ವಿಸ್ತೃತವಾದ ಸೆಟ್ ಹಾಕಲಾಗಿದೆ" ಎಂದು ಮೂಲಗಳು ತಿಳಿಸಿವೆ. 
ಪ ರಂಜಿತ್ ನಿರ್ದೇಶನದ ಈ ಸಿನೆಮಾದಲ್ಲಿ ನಾನಾ ಪಾಟೇಕರ್, ಹುಮಾ ಖುರೇಷಿ, ಅಂಜಲಿ ಪಾಟೀಲ್, ಸಮುದ್ರಕಿಣಿ ಮತ್ತು ಪಂಕಜ್ ತ್ರಿಪಾಠಿ ನಟಿಸುತ್ತಿದ್ದಾರೆ. 
ಕಳೆದ ವರ್ಷದ 'ಕಬಾಲಿ' ಸಿನೆಮಾದ ನಂತರ ರಜನಿಕಾಂತ್ ಮತ್ತು ರಂಜಿತ್ ಮತ್ತೆ ಒಂದಾಗಿದ್ದಾರೆ. ಧನುಷ್ ಈ ಸಿನೆಮಾವನ್ನು ನಿರ್ಮಿಸುತ್ತಿದ್ದು, ಅವರು ಕೂಡ ಅತಿಥಿ ಪಾತ್ರದಲ್ಲಿ ನಟಿಸಲಿದ್ದಾರೆ ಎನ್ನಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT