'ಕಾಲ' ಸಿನೆಮಾದ ಸ್ಟಿಲ್ 
ಸಿನಿಮಾ ಸುದ್ದಿ

'ಕಾಲ' ಮುಂಬೈ ಚಿತ್ರೀಕರಣ ಮುಗಿಸಿದ ರಜನಿಕಾಂತ್

ಭೂಗತ ಲೋಕದ ತಮಿಳು ಸಿನೆಮಾ 'ಕಾಲ'ದ ಮುಂಬೈ ಭಾಗದ ಚಿತ್ರೀಕರಣವನ್ನು ಸೂಪರ್ ಸ್ಟಾರ್ ರಜನಿಕಾಂತ್ ಪೂರ್ಣಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಚೆನ್ನೈ: ಭೂಗತ ಲೋಕದ ತಮಿಳು ಸಿನೆಮಾ 'ಕಾಲ'ದ ಮುಂಬೈ ಭಾಗದ ಚಿತ್ರೀಕರಣವನ್ನು ಸೂಪರ್ ಸ್ಟಾರ್ ರಜನಿಕಾಂತ್ ಪೂರ್ಣಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. 
"ರಜನಿ ಸರ್ ತಮ್ಮ ಭಾಗವನ್ನು ಸಂಪೂರ್ಣಗೊಳಿಸಿದ್ದು, ಅವರು ಈ ವಾರ ಚೆನ್ನೈಗೆ ಹಿಂದಿರುಗಲಿದ್ದಾರೆ. ಅವರು ಕಳೆದ ಎರಡು ವಾರಗಳವರೆಗೆ ವಿರಾಮವಿಲ್ಲದೆ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದರು. ಉಳಿದ ಚಿತ್ರತಂಡ ಇನ್ನೊಂದು ವಾರ ಚಿತ್ರೀಕರಣದಲ್ಲಿ ಭಾಗಿಯಾಗಲಿದೆ" ಎಂದು ಚಿತ್ರತಂಡದ ಮೂಲಗಳು ತಿಳಿಸಿವೆ. 
ಎರಡನೇ ಹಂತದ ಚಿತ್ರೀಕರಣ ಚೆನ್ನೈನಲ್ಲಿ ತಲೆ ಎತ್ತಿರುವ ಧರವಿ ಸ್ಲಮ್ ಸೆಟ್ ನಲ್ಲಿ ನಡೆಯಲಿದೆ. 
"ರಜನಿ ಸರ್ ಇದರಲ್ಲಿ ಸ್ಲಮ್ ದೊರೆಯಾಗಿ ಕಾಣಿಸಿಕೊಳ್ಳಲಿದ್ದಾರೆ. ಮೊದಲು ಇದನ್ನು ಧರವಿಯಲ್ಲೇ ಶೂಟ್ ಮಾಡುವ ಯೋಜನೆ ಇತ್ತು ಆದರೆ ಇದು ಅಸಾಧ್ಯ ಎಂದು ನಮಗೆ ನಂತರ ಅರಿವಾಯಿತು. ಆದುದರಿಂದ ಚೆನ್ನೈನಲ್ಲಿಯೇ ವಿಸ್ತೃತವಾದ ಸೆಟ್ ಹಾಕಲಾಗಿದೆ" ಎಂದು ಮೂಲಗಳು ತಿಳಿಸಿವೆ. 
ಪ ರಂಜಿತ್ ನಿರ್ದೇಶನದ ಈ ಸಿನೆಮಾದಲ್ಲಿ ನಾನಾ ಪಾಟೇಕರ್, ಹುಮಾ ಖುರೇಷಿ, ಅಂಜಲಿ ಪಾಟೀಲ್, ಸಮುದ್ರಕಿಣಿ ಮತ್ತು ಪಂಕಜ್ ತ್ರಿಪಾಠಿ ನಟಿಸುತ್ತಿದ್ದಾರೆ. 
ಕಳೆದ ವರ್ಷದ 'ಕಬಾಲಿ' ಸಿನೆಮಾದ ನಂತರ ರಜನಿಕಾಂತ್ ಮತ್ತು ರಂಜಿತ್ ಮತ್ತೆ ಒಂದಾಗಿದ್ದಾರೆ. ಧನುಷ್ ಈ ಸಿನೆಮಾವನ್ನು ನಿರ್ಮಿಸುತ್ತಿದ್ದು, ಅವರು ಕೂಡ ಅತಿಥಿ ಪಾತ್ರದಲ್ಲಿ ನಟಿಸಲಿದ್ದಾರೆ ಎನ್ನಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT