ಮುಗುಳುನಗೆ 
ಸಿನಿಮಾ ಸುದ್ದಿ

ಮುಗುಳುನಗೆಯ ಮೊದಲ ಪ್ರೇಕ್ಷಕ ನಿರ್ದೇಶಕ ಸೂರಿ!

ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಸೂರಿ ಯೋಗರಾಜ್ ಭಟ್ ಅವರ ಮುಗುಳುನಗೆ ಸಿನಿಮಾವನ್ನು ವೀಕ್ಷಿಸಿ, ಸಿನಿಮಾ ವೀಕ್ಷಿಸಿದ ಮೊದಲ ಪ್ರೇಕ್ಷಕರಾಗಿದ್ದಾರೆ.

ಒಬ್ಬ ನಿರ್ದೇಶನ ಮತ್ತೋರ್ವ ನಿರ್ದೇಶಕನ ಸಿನಿಮಾವನ್ನು ಬಿಡುಗಡೆಗೂ ಮುನ್ನವೇ ನೋಡುವುದು ಅಪರೂಪ, ವಿರಳ. ಆದರೆ ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಸೂರಿ ಯೋಗರಾಜ್ ಭಟ್ ಅವರ ಮುಗುಳುನಗೆ ಸಿನಿಮಾವನ್ನು ವೀಕ್ಷಿಸಿ, ಸಿನಿಮಾ ವೀಕ್ಷಿಸಿದ ಮೊದಲ ಪ್ರೇಕ್ಷಕರಾಗಿದ್ದಾರೆ. 
ನಿರ್ದೇಶಕ ಸೂರಿ ಸಧ್ಯಕ್ಕೆ ಟಗರು ಸಿನಿಮಾವನ್ನು ಮುಕ್ತಾಯಗೊಳಿಸುತ್ತಿದ್ದು, ಜು.1 ರಿಂದ ಸಿನಿಮಾದ ಅಂತಿಮ ಹಂತದ ಚಿತ್ರೀಕರಣ ನಡೆಸಲಿದ್ದಾರೆ. ಬಿಡುವಿರದ ಕೆಲಸಗಳ ನಡುವೆಯೂ ಬಿಡುವು ಮಾಡಿಕೊಂಡು ಯೋಗರಾಜ್ ಭಟ್ಟರ ಸಿನಿಮಾ ವೀಕ್ಷಿಸಿದ್ದಾರೆ ನಿರ್ದೇಶಕ ಸೂರಿ.  
ಮುಗುಳುನಗೆ ಸಿನಿಮಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಸೂರಿ, " ಈ ಸಿನಿಮಾ ಯೋಗರಾಜ್ ಭಟ್ಟರಿಗೆ ಖಂಡಿತವಾಗಿಯೂ ಕಂಬ್ಯಾಕ್ ಸಿನಿಮಾ ಆಗಿರಲಿದ್ದು, ಭಟ್ಟರ ಟ್ರೇಡ್ ಮಾರ್ಕ್ ಇದೆ, ಗಣೇಶ್ ಸಹ ಉತ್ತಮನ ನಟನೆ ನೀಡಿದ್ದು ಒಟ್ಟಾರೆ ಒಳ್ಳೆಯ ಸಿನಿಮಾ ಎಂದು ಬಣ್ಣಿಸಿದ್ದಾರೆ. 
ಚಿತ್ರ ನಿರ್ದೇಶಕ ಯೋಗರಾಜ್ ಭಟ್, ನಟ ಗಣೇಶ್ ಹಾಗೂ ಇನ್ನಿತರ ತಂತ್ರಜ್ಞರೊಂದಿಗೆ ಸಿನಿಮಾ ವೀಕ್ಷಿಸಿರುವ ನಿರ್ದೇಶಕ ಸೂರಿ,  ಭಟ್ಟರು-ಗಣೇಶ್ ಜೋಡಿಯಿಂದ ಪ್ರೇಕ್ಷಕರು ಮುಂಗಾರು ಮಳೆಯಂತಹ ಸಿನಿಮಾವನ್ನು ಎದುರುನೋಡುತ್ತಿದ್ದಾರೆ. ಆದರೆ ಇದು ಪ್ರೇಕ್ಷಕರ ನಿರೀಕ್ಷೆಗಿಂತಲೂ ಮೇಲ್ಮಟ್ಟದಲ್ಲಿದ್ದು, ಇಂದಿನ ಟ್ರೆಂಡ್ ಗೆ ತಕ್ಕಂತೆ ಇದೆ ಎಂದು ಹೇಳಿದ್ದಾರೆ. ಮುಗುಳುನಗೆ ಚಿತ್ರಕ್ಕೆ ವಿ ಹರಿಕೃಷ್ಣ ಸಂಗೀತ ನೀಡಿದ್ದು, ಸುಜ್ಞಾನ್ ಛಾಯಾಗ್ರಹಣವಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT