ಸುದೀಪ್ ದಂಪತಿ 
ಸಿನಿಮಾ ಸುದ್ದಿ

ವಿಚ್ಛೇದನ ಪ್ರಕರಣ ವಿಚಾರಣೆಗೆ ನಟ ಸುದೀಪ್ ದಂಪತಿ ಸತತ ಗೈರು: ಕೋರ್ಟ್ ಅಸಮಾಧಾನ

ಸ್ಯಾಂಡಲ್ವುಡ್ ನಟ ಕಿಚ್ಚ ಸುದೀಪ್ ದಂಪತಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿ ಸತತ 8 ಬಾರಿ ವಿಚಾರಣೆಗೆ ಗೈರಾಗಿರುವುದಕ್ಕೆ ಕೌಟುಂಬಿಕ ನ್ಯಾಯಾಲಯ ತೀವ್ರ...

ಬೆಂಗಳೂರು: ಸ್ಯಾಂಡಲ್ವುಡ್ ನಟ ಕಿಚ್ಚ ಸುದೀಪ್ ದಂಪತಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿ ಸತತ 8 ಬಾರಿ ವಿಚಾರಣೆಗೆ ಗೈರಾಗಿರುವುದಕ್ಕೆ ಕೌಟುಂಬಿಕ ನ್ಯಾಯಾಲಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. 
2015ರ ಸೆಪ್ಟೆಂಬರ್ ನಲ್ಲಿ ಸುದೀಪ್ ದಂಪತಿ ಸಮ್ಮತಿಯೊಂದಿಗೆ ವಿಚ್ಛೇದನಕ್ಕಾಗಿ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಅರ್ಜಿ ಸಲ್ಲಿಸಿದ ದಿನದಿಂದ ಇಲ್ಲಿಯವರೆಗೂ ಒಮ್ಮೆಯೂ ಸಹ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರಾಗಿಲ್ಲ. ಈ ಹಿನ್ನೆಲೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ನ್ಯಾಯಾಧೀಶರು ಆಗಸ್ಟ್ 24ರಂದು ವಿಚಾರಣೆಗೆ ಹಾಜರಾಗಬೇಕು ಎಂದು ಸೂಚನೆ ನೀಡಿದೆ. 
ಒಂದು ವೇಳೆ ದಂಪತಿ ರಾಜಿ ಸಂಧಾನ ಮಾಡಿಕೊಂಡಿದ್ದರೆ ಆ ಅಂಶವನ್ನಾದರೂ ನ್ಯಾಯಾಲಯಕ್ಕೆ ತಿಳಿಸಿ ಇಲ್ಲವಾದಲ್ಲಿ ಅರ್ಜಿಯಲ್ಲಿರುವ ಅಂಶಗಳನ್ನು ಪರಿಗಣಿಸಿ ಸೂಕ್ತ ಆದೇಶ ಹೊರಡಿಸುವುದಾಗಿ ನ್ಯಾಯಾಧೀಶರು ಎಚ್ಚರಿಕೆ ನೀಡಿದ್ದಾರೆ. 
ದಿ ವಿಲನ್ ಚಿತ್ರದ ಚಿತ್ರೀಕರಣಕ್ಕಾಗಿ ಸುದೀಪ್ ಬ್ಯಾಂಕಾಕ್ ಗೆ ತೆರಳಿದ್ದು ವಿಚಾರಣೆಗೆ ಹಾಜರಾಗಲು ಸಾಧ್ಯವಾಗಿಲ್ಲ ಎಂದು ಸುದೀಪ್ ಪರ ವಕೀಲರು ತಿಳಿಸಿದ್ದರಿಂದ ನ್ಯಾಯಾಧೀಶರು ಆಗಸ್ಟ್ 24ಕ್ಕೆ ವಿಚಾರಣೆಯನ್ನು ಮುಂದೂಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT