ಪಿಸಿ ಶೇಖರ್-ಚೇತನ್ 
ಸಿನಿಮಾ ಸುದ್ದಿ

ಬ್ರಿಟಿಷ್ ಕಾಲದ ಐತಿಹಾಸಿಕ ಸಿನೆಮಾ ಮಾಡಲು ಸಜ್ಜಾದ ಪಿಸಿ ಶೇಖರ್ ಮತ್ತು ಚೇತನ್

'ರಾಗ' ಸಿನೆಮಾ ನಂತರ ಪಿಸಿ ಶೇಖರ್ ಈಗ ನೂತನ ಸಿನೆಮಾವೊಂದಕ್ಕೆ ಅಣಿಯಾಗುತ್ತಿದ್ದಾರೆ. ಇದರ ಬಗ್ಗೆ ವಿವರಗಳನ್ನು ಇನ್ನು ಬಿಟ್ಟುಕೊಟ್ಟಿಲ್ಲವಾದರೂ, ಬ್ರಿಟಿಶ್ ಕಾಲದ ಐತಿಹಾಸಿಕ ಕಥೆ ಹೊಂದಿರಲಿದೆ

ಬೆಂಗಳೂರು: 'ರಾಗ' ಸಿನೆಮಾ ನಂತರ ಪಿಸಿ ಶೇಖರ್ ಈಗ ನೂತನ ಸಿನೆಮಾವೊಂದಕ್ಕೆ ಅಣಿಯಾಗುತ್ತಿದ್ದಾರೆ. ಇದರ ಬಗ್ಗೆ ವಿವರಗಳನ್ನು ಇನ್ನು ಬಿಟ್ಟುಕೊಟ್ಟಿಲ್ಲವಾದರೂ, ಬ್ರಿಟಿಶ್ ಕಾಲದ ಐತಿಹಾಸಿಕ ಕಥೆ ಹೊಂದಿರಲಿದೆ ಎನ್ನುತ್ತವೆ ಮೂಲಗಳು. 
ಇದಕ್ಕಾಗಿ ನಿರ್ದೇಶಕ ಶೇಖರ್ ಸದ್ಯಕ್ಕೆ ಸ್ಕ್ರಿಪ್ಟ್ ರಚನೆಯಲ್ಲಿ ನಿರತರಾಗಿದ್ದಾರೆ. ಇದು ದೊಡ್ಡ ಬಜೆಟ್ ಸಿನೆಮಾ ಆಗಲಿದೆ ಎನ್ನಲಾಗಿದ್ದು, ಚಿತ್ರೀಕರಣಕ್ಕೂ ಮುಂಚಿತವಾಗಿ ನಟರು, ತಂತ್ರಜ್ಞರು ಮತ್ತು ನಿರ್ಮಾಪಕರ ಘೋಷಣೆ ಆಗಲಿದೆಯಂತೆ. ಸಿನೆಮಾ ಸೆಪ್ಟೆಂಬರ್ ನಿಂದ ಚಿತ್ರೀಕರಣ ಪ್ರಾರಂಭಿಸಲಿದೆ ಎನ್ನುತ್ತವೆ ಮೂಲಗಳು. 
ಈ ಐತಿಹಾಸಿಕ ಸಿನೆಮಾಗೆ ಚೇತನ್ ಅವರನ್ನು ನಾಯಕನಟನಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ. 'ಆ ದಿನಗಳು', 'ಬಿರುಗಾಳಿ', 'ಮೈನಾ' ಸಿನೆಮಾಗಳಲ್ಲಿ ನಟಿಸಿದ್ದ ಚೇತನ್ ಅವರು ಇತ್ತೀಚಿಗೆ ಬಿಡುಗಡೆಯಾದ 'ನೂರೊಂದು ನೆನಪು' ಸಿನೆಮಾದ ನಾಯಕನಟ ಕೂಡ!
ಈಗ ಮಹೇಶ್ ಬಾಬು ನಿರ್ದೇಶನದ 'ಅತಿರಥ' ಸಿನೆಮಾ ಕೂಡ ಚೇತನ್ ಮುಗಿಸಿದ್ದು, ಅದರ ಸಂಕಲನ ಕಾರ್ಯ ಭರದಿಂದ ಸಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT