ರಜನೀಕಾಂತ್-ಧನುಷ್ 
ಸಿನಿಮಾ ಸುದ್ದಿ

ರಜನಿಕಾಂತ್ ರಾಜಕೀಯ ಪ್ರವೇಶದ ಮೇಲಿನ ಪ್ರಶ್ನೆಗೆ ಧನುಷ್ ತಿರುಗುಬಾಣ

'ವಿಐಪಿ-೨' ಆಡಿಯೋ ಬಿಡುಗಡೆ ಸಮಾರಂಭದಲ್ಲಿ ನಟ-ನಿರ್ದೇಶಕ ಧನುಷ್, ಮಾವ ಸೂಪರ್ ಸ್ಟಾರ್ ರಜನಿಕಾಂತ್ ಅವರ ರಾಜಕೀಯ ಪ್ರವೇಶದ ಬಗ್ಗೆ ಕೇಳಿದ ಪ್ರಶ್ನೆಗೆ ನೇರ ಉತ್ತರ ನೀಡಲು ನಿರಾಕರಿಸಿ,

ಮುಂಬೈ: 'ವಿಐಪಿ-೨' ಆಡಿಯೋ ಬಿಡುಗಡೆ ಸಮಾರಂಭದಲ್ಲಿ ನಟ-ನಿರ್ದೇಶಕ ಧನುಷ್, ಮಾವ ಸೂಪರ್ ಸ್ಟಾರ್ ರಜನಿಕಾಂತ್ ಅವರ ರಾಜಕೀಯ ಪ್ರವೇಶದ ಬಗ್ಗೆ ಕೇಳಿದ ಪ್ರಶ್ನೆಗೆ ನೇರ ಉತ್ತರ ನೀಡಲು ನಿರಾಕರಿಸಿ, ನನ್ನ ಅಭಿಪ್ರಾಯವನ್ನು ನನ್ನ ಬಳಿಯೇ ಇಟ್ಟುಕೊಳ್ಳುತ್ತೇನೆ ಎಂದಿದ್ದಾರೆ. 
ರಜನಿಕಾಂತ್ ರಾಜಕೀಯಕ್ಕೆ ಸೇರಬೇಕೇ ಎಂಬ ಪ್ರಶ್ನೆಗೆ, ವರದಿಗಾರರಿಗೆ ಉತ್ತರಿಸಿರುವ ಧನುಷ್ "ನಿಮ್ಮ ಬಳಿ ಅಭಿಪ್ರಾಯ ಇದೆಯೇ? ಯಾಕಿರಬಾರದು? ನನಗೆ ನನ್ನದೇ ಅಭಿಪ್ರಾಯ ಇದೆ ಮತ್ತು ಅದನ್ನು ನನ್ನ ಬಳಿಯೇ ಉಳಿಸಿಕೊಳ್ಳುತ್ತೇನೆ" ಎಂದಿದ್ದಾರೆ. 
ಕಳೆದ ಕೆಲವು ವಾರಗಳಿಂದ ರಾಜಕೀಯ ಪ್ರವೇಶ ಮಾಡುವ ಸುಳಿವನ್ನು ರಜನೀಕಾಂತ್ ನೀಡುತ್ತಲೇ ಬಂದಿದ್ದಾರೆ. 
ಕಳೆದ ತಿಂಗಳು ಕೂಡ "ದೇವರು ಇಚ್ಛಿಸಿದರೆ" ರಾಜಕೀಯದ ಮಾರ್ಗವನ್ನು ಆಯ್ಕೆ ಮಾಡಿಕೊಳ್ಳುವುದಾಗಿ ರಜನೀಕಾಂತ್ ಹೇಳಿದ್ದರು. ಸದ್ಯಕ್ಕೆ ರಜನೀಕಾಂತ್ 'ಕಾಲಾ' ಸಿನೆಮಾದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಶಂಕರ್ ಅವರ '೨.೦' ಸಿನೆಮಾದ ಬಿಡುಗಡೆಯನ್ನು ಎದುರುನೋಡುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT