ರಜನೀಕಾಂತ್-ಧನುಷ್ 
ಸಿನಿಮಾ ಸುದ್ದಿ

ರಜನಿಕಾಂತ್ ರಾಜಕೀಯ ಪ್ರವೇಶದ ಮೇಲಿನ ಪ್ರಶ್ನೆಗೆ ಧನುಷ್ ತಿರುಗುಬಾಣ

'ವಿಐಪಿ-೨' ಆಡಿಯೋ ಬಿಡುಗಡೆ ಸಮಾರಂಭದಲ್ಲಿ ನಟ-ನಿರ್ದೇಶಕ ಧನುಷ್, ಮಾವ ಸೂಪರ್ ಸ್ಟಾರ್ ರಜನಿಕಾಂತ್ ಅವರ ರಾಜಕೀಯ ಪ್ರವೇಶದ ಬಗ್ಗೆ ಕೇಳಿದ ಪ್ರಶ್ನೆಗೆ ನೇರ ಉತ್ತರ ನೀಡಲು ನಿರಾಕರಿಸಿ,

ಮುಂಬೈ: 'ವಿಐಪಿ-೨' ಆಡಿಯೋ ಬಿಡುಗಡೆ ಸಮಾರಂಭದಲ್ಲಿ ನಟ-ನಿರ್ದೇಶಕ ಧನುಷ್, ಮಾವ ಸೂಪರ್ ಸ್ಟಾರ್ ರಜನಿಕಾಂತ್ ಅವರ ರಾಜಕೀಯ ಪ್ರವೇಶದ ಬಗ್ಗೆ ಕೇಳಿದ ಪ್ರಶ್ನೆಗೆ ನೇರ ಉತ್ತರ ನೀಡಲು ನಿರಾಕರಿಸಿ, ನನ್ನ ಅಭಿಪ್ರಾಯವನ್ನು ನನ್ನ ಬಳಿಯೇ ಇಟ್ಟುಕೊಳ್ಳುತ್ತೇನೆ ಎಂದಿದ್ದಾರೆ. 
ರಜನಿಕಾಂತ್ ರಾಜಕೀಯಕ್ಕೆ ಸೇರಬೇಕೇ ಎಂಬ ಪ್ರಶ್ನೆಗೆ, ವರದಿಗಾರರಿಗೆ ಉತ್ತರಿಸಿರುವ ಧನುಷ್ "ನಿಮ್ಮ ಬಳಿ ಅಭಿಪ್ರಾಯ ಇದೆಯೇ? ಯಾಕಿರಬಾರದು? ನನಗೆ ನನ್ನದೇ ಅಭಿಪ್ರಾಯ ಇದೆ ಮತ್ತು ಅದನ್ನು ನನ್ನ ಬಳಿಯೇ ಉಳಿಸಿಕೊಳ್ಳುತ್ತೇನೆ" ಎಂದಿದ್ದಾರೆ. 
ಕಳೆದ ಕೆಲವು ವಾರಗಳಿಂದ ರಾಜಕೀಯ ಪ್ರವೇಶ ಮಾಡುವ ಸುಳಿವನ್ನು ರಜನೀಕಾಂತ್ ನೀಡುತ್ತಲೇ ಬಂದಿದ್ದಾರೆ. 
ಕಳೆದ ತಿಂಗಳು ಕೂಡ "ದೇವರು ಇಚ್ಛಿಸಿದರೆ" ರಾಜಕೀಯದ ಮಾರ್ಗವನ್ನು ಆಯ್ಕೆ ಮಾಡಿಕೊಳ್ಳುವುದಾಗಿ ರಜನೀಕಾಂತ್ ಹೇಳಿದ್ದರು. ಸದ್ಯಕ್ಕೆ ರಜನೀಕಾಂತ್ 'ಕಾಲಾ' ಸಿನೆಮಾದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಶಂಕರ್ ಅವರ '೨.೦' ಸಿನೆಮಾದ ಬಿಡುಗಡೆಯನ್ನು ಎದುರುನೋಡುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT