ನಟಿ ಅಮೂಲ್ಯ ಅದ್ದೂರಿ ನಿಶ್ಚಿತಾರ್ಥ 
ಸಿನಿಮಾ ಸುದ್ದಿ

ನಟಿ ಅಮೂಲ್ಯ ಅದ್ದೂರಿ ನಿಶ್ಚಿತಾರ್ಥ; ಮೇ ತಿಂಗಳಲ್ಲಿ ಮದುವೆ!

ಚೆಲುವಿನ ಚಿತ್ತಾರ ಖ್ಯಾತಿಯ ನಟಿ ಅಮೂಲ್ಯ ಹಾಗೂ ಜಗದೀಶ್ ಅವರ ವಿವಾಹ ನಿಶ್ಚಿತಾರ್ಥ ಕಾರ್ಯಕ್ರಮ ಸೋಮವಾರ ಬೆಂಗಳೂರಿನಲ್ಲಿ ಅದ್ಧೂರಿಯಾಗಿ ನೆರವೇರಿತು.

ಬೆಂಗಳೂರು: ಚೆಲುವಿನ ಚಿತ್ತಾರ ಖ್ಯಾತಿಯ ನಟಿ ಅಮೂಲ್ಯ ಹಾಗೂ ಜಗದೀಶ್ ಅವರ ವಿವಾಹ ನಿಶ್ಚಿತಾರ್ಥ ಕಾರ್ಯಕ್ರಮ ಸೋಮವಾರ ಬೆಂಗಳೂರಿನಲ್ಲಿ ಅದ್ಧೂರಿಯಾಗಿ ನೆರವೇರಿತು.

ನಗರದ ಶ್ರೀಸಾಯಿ ಪ್ಯಾಲೆಸ್ ನಲ್ಲಿ ಗುರುಹಿರಿಯರ ಸಮ್ಮುಖದಲ್ಲಿ ಅಮೂಲ್ಯ ಹಾಗೂ ಜಗದೀಶ್ ಅವರ ವಿವಾಹ ನಿಶ್ಚಿತಾರ್ಥ ಕಾರ್ಯಕ್ರಮ ಸಂಜೆ ನೆರವೇರಿತು. ಅದ್ಧೂರಿಯಾಗಿ ನೆರವೇರಿದ ಈ ಕಾರ್ಯಕ್ರಮದಲ್ಲಿ ಅಮೂಲ್ಯ ಮತ್ತು  ಜಗದೀಶ್ ಅವರ ಕುಟುಂಬಸ್ಥರು, ಸಂಬಂಧಿಗಳಲ್ಲದೇ ಚಿತ್ರರಂಗದ ಗಣ್ಯಾತಿಗಣ್ಯರು ಪಾಲ್ಗೊಂಡಿದ್ದರು. ಪ್ರಮುಖವಾಗಿ ಅಮೂಲ್ಯ ಮತ್ತು ಜಗದೀಶ್ ಅವರ ಕುಟುಂಬಕ್ಕೆ ಪರಿಚಿತರಾದ ನಟ ಗೋಲ್ಡನ್ ಸ್ಟಾರ್ ಗಣೇಶ್ ಅವರು ಪತ್ನಿ  ಸಮೇತರಾಗಿ ಕಾರ್ಯಕ್ರಮಕ್ಕೆ ಆಗಮಿಸಿ ಭಾವಿ ದಂಪತಿಗಳನ್ನು ಆಶೀರ್ವದಿಸಿದರು.

ಇನ್ನು ಕಾರ್ಯಕ್ರಮಕ್ಕೆ ಖ್ಯಾತ ಸ್ಯಾಕ್ಸೋಫೋನ್ ವಾದಕ ಹರಿಪ್ರಸಾದ್ ಅವರು ಸಂಗೀತ ನುಡಿಸಿದ್ದು, ಇಡೀ ಕಾರ್ಯಕ್ರಮದ ಮೆರುಗು ಹೆಚ್ಚಿಸಿತ್ತು. ಅಂತೆಯೇ ವರ ಜಗದೀಶ್ ಅವರ ಅಣ್ಣ ಹಾಗೂ ಸಹೋದರಿ ತಂದಿದ್ದ ವಿಶಿಷ್ಟ ಕೇಕ್  ಕೂಡ ಎಲ್ಲರ ಕಣ್ಮನ ಸೆಳೆಯಿತು.

ಅಮೂಲ್ಯ ಹಾಗೂ ಜಗದೀಶ್ ಅವರು ಪರಸ್ಪರರ ಕೈಗೆ ವಜ್ರದ ಉಂಗುರಗಳನ್ನು ತೊಡಿಸಿದರು. ಕುಟುಂಬ ಮೂಲಗಳು ತಿಳಿಸಿರುವಂತೆ ಇದೇ ಮೇ ತಿಂಗಳ 10-11 ಅಥವಾ 20-21ರಂದು ವಿವಾಹ ಕಾರ್ಯಕ್ರಮ ನೆರವೇರುವ  ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಅಮೂಲ್ಯ ಕೈ ಹಿಡಿಯಲಿರುವ ಜಗದೀಶ್ ರಾಜರಾಜೇಶ್ವರಿ ನಗರದ ಮಾಜಿ ಕಾರ್ಪೋರೆಟರ್ ಮಗನಾಗಿದ್ದು, ಲಂಡನ್‍'ನಲ್ಲಿ ಎಂಬಿಎ ಪದವಿ ಪಡೆದಿದ್ದಾರೆ. ಕಳೆದ ತಿಂಗಳಿನಲ್ಲಷ್ಟೇ ನಟಿ  ಅಮೂಲ್ಯ ಮತ್ತು ಜಗದೀಶ್ ಅವರ ವಿವಾಹ ಸಂಬಂಧ ತಾಂಬೂಲ ಶಾಸ್ತ್ರ ನೆರೆವೇರಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

Nation survey: ಇಂದೇ ಲೋಕಸಭೆ ಚುನಾವಣೆ ನಡೆದರೆ NDA ಎಷ್ಟು ಸ್ಥಾನ ಗೆಲ್ಲುತ್ತೆ ಗೊತ್ತಾ?

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

"ಭಾರತೀಯರು ಬಗ್ಗದೇ ಹೋದರೆ...": ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾನೇರ ಬೆದರಿಕೆ!

ಯಾವುದೇ ವ್ಯಕ್ತಿ 75 ವರ್ಷಗಳಿಗೆ ನಿವೃತ್ತಿಯಾಗಬೇಕು ಎಂದು ಎಂದಿಗೂ ಹೇಳಿಲ್ಲ: RSS ಮುಖ್ಯಸ್ಥ Mohan bhagwat ಸ್ಪಷ್ಟನೆ

SCROLL FOR NEXT